Sunday | September 13, 2026 |

ಅನುಮತಿ ಇಲ್ಲದೆಯೇ ಗಣಿಗಾರಿಕೆ; 15.21 ಕೋಟಿ ಮೊತ್ತದ ಖನಿಜ ಮುಟ್ಟುಗೋಲು

Support THE-FILE

spot_img

ಕೇಂದ್ರ ಸರ್ಕಾರ ಹಾಗೂ ಹೈದರಾಬಾದ್‌ನ ಪರಮಾಣು ಖನಿಜಗಳ ನಿರ್ದೇಶನಾಲಯದ ಅನುಮತಿ ಪಡೆಯದೆಯೇ ಕರ್ನಾಟಕ ರಾಜ್ಯ ಖನಿಜಗಳ ನಿಗಮವು ₹15.21 ಕೋಟಿ ಮೊತ್ತದ ಪರಮಾಣು ಖನಿಜಗಳ ಗಣಿಗಾರಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಖನಿಜಗಳ ರಿಯಾಯಿತಿ ನಿಯಮಗಳ ಪ್ರಕಾರ ಪೂರ್ವಾನುಮತಿ ಪಡೆಯಬೇಕಿತ್ತು. ನಿರ್ದೇಶನಾಲಯಕ್ಕೆ ಮಾಹಿತಿ ನೀಡದ ಕಾರಣಕ್ಕೆ ₹15.21 ಕೋಟಿ ಮೊತ್ತದ ಖನಿಜವನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು ಎಂದು ಭಾರತೀಯ ಲೆಕ್ಕ ನಿಯಂತ್ರಕರು ಹಾಗೂ ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕಂಪನಿಯು ಹಾಸನ ಜಿಲ್ಲೆಯ ತಗಡೂರು ಹಾಗೂ ಚಿಕ್ಕನಹಳ್ಳಿ ಗ್ರಾಮಗಳಲ್ಲಿ 1,200 ಎಕರೆಯಲ್ಲಿ 1976ರಿಂದಲೂ ಕ್ರೋಮೈಟ್‌ ಅದಿರಿನ ಗಣಿಗಾರಿಕೆ ನಡೆಸುತ್ತಿದೆ. ಈ ವೇಳೆಯಲ್ಲಿ ಕಂಪನಿಯು ಟೆಟಾನಿಫರಸ್‌ ಮ್ಯಾಗ್ನಟೈಟ್‌, ಡ್ಯುನೈಟ್‌, ಸರ್ಪೆನ್ಟಿನೈಟ್‌, ಟ್ಯಾಲ್ಕ್‌ ಹಾಗೂ ಕ್ವಾರ್ಟ್ಸ್ ಖನಿಜಗಳನ್ನು ಕಂಡುಹಿಡಿಯಿತು. ಟೆಟಾನಿಫರಸ್‌ ಮ್ಯಾಗ್ನಟೈಟ್‌ ಪರಮಾಣು ಖನಿಜ ಗುಂಪಿಗೆ ಸೇರಿದೆ.
ಈ ಖನಿಜಗಳ ಗಣಿಗಾರಿಕೆ ಗುತ್ತಿಗೆಯನ್ನು 20 ವರ್ಷಗಳ ಅವಧಿಗೆ ನೀಡುವ ಸಲುವಾಗಿ ಕಂಪನಿಯು ಗಣಿ ಹಾಗೂ ಭೂವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಸಿತು. ಈ ಖನಿಜಗಳನ್ನು ಹೊರತೆಗೆಯಲು ಇಲಾಖೆ 2005ರಲ್ಲಿ ಅನುಮತಿ ನೀಡಿತು. ಈ ನಡುವೆ, ಕಂಪನಿಯು ಕ್ರೋಮೈಟ್‌ ಹಾಗೂ ಟೆಟಾನಿಫರಸ್‌ ಮ್ಯಾಗ್ನಟೈಟ್‌ನ ಮಾರಾಟಕ್ಕಾಗಿ ಕಂಪನಿಯು 2016ರಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿತು. ಎರಡು ಕಂಪನಿಗಳಿಗೆ 34,521 ಟನ್‌ ಅದಿರು ಮಾರಾಟಕ್ಕೆ ಪತ್ರಗಳನ್ನು ನೀಡಿತು.
ಗಣಿಗಳಿಂದ ಖನಿಜಗಳ ಸಾಗಣೆಗೆ ಅನುಕೂಲ ಕಲ್ಪಿಸಲು ಖರೀದಿದಾರರಿಗೆ ಖನಿಜ ರವಾನೆ ಪರವಾನಗಿ ನೀಡುವಂತೆ ಗಣಿ ಹಾಗೂ ಭೂವಿಜ್ಞಾನ ಇಲಾಖೆಗೆ ಕಂಪನಿ 2016ರಲ್ಲಿ ಕೋರಿತು. ಗಣಿಗಾರಿಕೆ ಗುತ್ತಿಗೆ ನೀಡುವ ಮೊದಲು ಕೇಂದ್ರ ಸರ್ಕಾರದ ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ ಇಲಾಖೆಯು ಖನಿಜ ಸಾಗಣೆಗೆ ಅನುಮತಿ ನಿರಾಕರಿಸಿತು. ಜತೆಗೆ, ಗಣಿಗಾರಿಕೆ ಗುತ್ತಿಗೆಯನ್ನು ರದ್ದುಪಡಿಸಿತು.
ಖನಿಜಗಳ ಹರಾಜಿನಿಂದ ಇಲ್ಲಿಯವರೆಗೆ ಸ್ವೀಕರಿಸಿದ ಮೊತ್ತವನ್ನು ಸರ್ಕಾರದ ಬಳಿ ಠೇವಣಿ ಇಡಬೇಕು ಎಂದು ತಾಕೀತು ಮಾಡಿತು. ಗಣಿಯಿಂದ ಹೊರತೆಗೆದ 19,649 ಟನ್‌ಗಳಷ್ಟು ಕ್ರೋಮೈಟ್‌ ಹಾಗೂ 53,337 ಟನ್‌ಗಳಷ್ಟು ಟಿಟಿನಿಫೆರಸ್‌ ಮ್ಯಾಗ್ನಟೈಟ್ ಖನಿಜವನ್ನು ಮುಟ್ಟುಗೋಲು ಹಾಕಿಕೊಂಡಿತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img