Sunday | June 14, 2026 |

ಕೋವಿಡ್‌-19; ಆತಂಕ ಎಬ್ಬಿಸಲಿದೆಯೇ ಬಹಿರಂಗಗೊಂಡಿರುವ ಪ್ರತ್ಯೇಕ ನಾಗರಿಕರ ಪಟ್ಟಿ?

Support THE-FILE

spot_img

ಬೆಂಗಳೂರು; ಕೊರೋನಾ ವೈರಸ್‌ ಹರಡುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದಿರುವ ಹೊತ್ತಿನಲ್ಲೇ  ವಿದೇಶಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರ, ನಗರ, ಪಟ್ಟಣ ಮತ್ತು ಹಳ್ಳಿಗಳ ಮನೆಗಳಲ್ಲಿ ಪ್ರತ್ಯೇಕವಾಗಿರುವ ನಾಗರಿಕರ ಪಟ್ಟಿ ಇದೀಗ ಸಾರ್ವಜನಿಕವಾಗಿ ಲಭ್ಯವಾಗುತ್ತಿರುವ ಆತಂಕದ ಸುದ್ದಿ ಹೊರಬಿದ್ದಿದೆ.

ವಿದೇಶಗಳಿಂದ ರಾಜ್ಯಕ್ಕೆ ಬಂದಿರುವ 1,28,000 ಮಂದಿಯ ಪೈಕಿ 14,910 ಮಂದಿಯನ್ನು ಮನೆಗಳಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಈ ಮಾಹಿತಿ ಗೌಪ್ಯವಾಗಿರಬೇಕಿತ್ತಲ್ಲದೇ ಅದೀಗ  ಸಾರ್ವಜನಿಕವಾಗಿ ಲಭ್ಯವಾಗುತ್ತಿದೆ. 

ಯಾವ ದೇಶದಿಂದ  ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂಬ  ಮಾಹಿತಿಯೂ ಸೇರಿದಂತೆ ವಾರ್ಡ್‌, ಮನೆ ಸಂಖ್ಯೆ,  ಅಪಾರ್ಟ್‌ಮೆಂಟ್‌ ಹೆಸರಿನ ಸಮೇತ ವಿವರಗಳು ಜಾಲ ತಾಣಗಳಲ್ಲಿ ದೊರೆಯುತ್ತಿರುವುದು ಕಾನೂನು ಸುವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಹೆಚ್ಚಿನ ಸಾಧ್ಯತೆಗಳಿವೆ.

ಈ ಕುರಿತು ಟ್ವೀಟ್‌ ಮಾಡಿ ಆತಂಕ ವ್ಯಕ್ತಪಡಿಸಿರುವ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ‘ಮನೆಗಳಲ್ಲಿ ಪ್ರತ್ಯೇಕವಾಗಿರುವವರ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗುತ್ತಿರುವುದು ಖಾಸಗಿತನ ಹಕ್ಕಿನ ಉಲ್ಲಂಘನೆಯಾಗುವ ಜತೆಯಲ್ಲೇ ನೆರೆಹೊರೆಯವರಲ್ಲಿ ಭೀತಿ ಹುಟ್ಟಿಸಲಿದೆ. ಹಾಗೆಯೇ ಲಭ್ಯವಾಗುತ್ತಿರುವ ಮಾಹಿತಿ ಸಾರ್ವಜನಿಕವಾಗಿ ಹರಿದಾಡುವ ಮುನ್ನವೇ ಎಚ್ಚರಿಕೆ ವಹಿಸಬೇಕು,’ ಎಂದಿದ್ದಾರೆ. 

ಕಳೆದ ಕೆಲ ದಿನಗಳಿಂದಲೂ ಈ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗುತ್ತಿದ್ದರೂ ಗಮನಹರಿಸಬೇಕಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈವರೆವಿಗೂ ಯಾವ ಕ್ರಮವನ್ನೂ ಕೈಗೊಳ್ಳದೆ ಭಂಡ ನಿರ್ಲಕ್ಷ್ಯ ವಹಿಸಿದೆ. ಲಭ್ಯವಾಗುತ್ತಿರುವ ಮಾಹಿತಿಯಲ್ಲಿನ  ದತ್ತಾಂಶಗಳು ಸೋರಿಕೆಯಾದಲ್ಲಿ ಮುಂದಿನ ದಿನಗಳಲ್ಲಿ ಆತಂಕ ಹೆಚ್ಚಿಸುವ ಸಾಧ್ಯತೆಗಳಿವೆ. 

ಕೇರಳದಲ್ಲಿಯೂ ಇಂತಹ ಪ್ರಕರಣ ಬೆಳಕಿಗೆ ಬಂದ  ಕೂಡಲೇ  ಪತಣಮಿತ್ತ  ಜಿಲ್ಲಾಧಿಕಾರಿ ತಕ್ಷಣವೇ ಎಚ್ಚೆತ್ತುಕೊಂಡಿದ್ದಾರಲ್ಲದೆ ಮನೆಗಳಲ್ಲಿ ಪ್ರತ್ಯೇಕವಾಗಿರುವವರ  ಮಾಹಿತಿಯ ಗೌಪ್ಯತೆ ಕಾಯ್ದುಕೊಳ್ಳಲು ಮುಂದಾಗಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮುನ್ನವೇ ಕ್ರಮ ಕೈಗೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ  ಕೋವಿಡ್‌-19 ಸಮನ್ವಯಕಾರರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈವರೆವಿಗೂ ಎಚ್ಚೆತ್ತುಕೊಂಡಿಲ್ಲ. 

ರಾಜ್ಯದಲ್ಲಿ ಈವರೆವಿಗೆ ಒಟ್ಟು 13,246 ಮಂದಿ(ಇಂದು 840) ಅವಲೋಕನಕ್ಕೆ ಒಳಪಡಿಸಲಾಗಿದೆ. ಆಸ್ಪತ್ರೆಗಳಲ್ಲಿ 214 ಮಂದಿಯನ್ನು ಪ್ರತ್ಯೇಕವಾಗಿರಿಸಲಾಗಿದೆಯಲ್ಲದೆ ಈವರೆವಿಗೂ 2,438  ಮಂದಿ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ.  ಈವರೆವಿಗೂ 51 ಪ್ರಕರಣಗಳು ಮತ್ತು ಕೋವಿಡ್‌-19 ಎಂದು ಖಚಿತಪಡಿಸಿರುವುದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ದಾಖಲೆಯಿಂದ ತಿಳಿದು ಬಂದಿದೆ. 

2020 ಮಾರ್ಚ್‌ 25ರಂದು ಉಡುಪಿಯಲ್ಲಿ 14  ಮಂದಿ ಒಳರೋಗಿಗಳಾಗಿ ದಾಖಲಾಗಿದ್ದರೆ, ಒಟ್ಟು 54  ಮಂದಿಯನ್ನು ಪ್ರತ್ಯೇಕವಾಗಿರಿಸಲಾಗಿದೆ. 2020ರ ಮಾರ್ಚ್‌  17ರಿಂದ 23ರವರೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾ‍ಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 10,773 ಸಂಖ್ಯೆಯ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗಿದೆ. 

ಅದೇ ರೀತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈವರೆವಿಗೆ  31,917 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಈ ಪೈಕಿ 6,120 ಪ್ರಯಾಣಿಕರನ್ನು ಮಂಗಳೂರು ಮತ್ತು ಕಾರವಾರ ಕಡಲ ಬಂದರುಗಳಲ್ಲಿ ತಪಾಸಣೆ ಮಾಡಿರುವುದು ತಿಳಿದು ಬಂದಿದೆ. 

ಕೋವಿಡ್‌-19 ಪ್ರಕರಣಗಳ ನಿರ್ವಹಣೆಯಲ್ಲಿ ಹಿಂದೆ ಬಿದ್ದಿದ್ದರು ಎನ್ನಲಾಗಿದ್ದ ಆರೋಗ್ಯ ಸಚಿವ  ಶ್ರೀರಾಮುಲು ಅವರನ್ನು ಇದರ ಹೊಣೆಗಾರಿಕೆಯಿಂದ ಬಿಡುಗಡೆಗೊಳಿಸಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್‌  ಅವರು ಈ ಪ್ರಕರಣಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಇವರಿಬ್ಬರೂ ಸಾರ್ವಜನಿಕವಾಗಿ  ಲಭ್ಯವಾಗುತ್ತಿರುವ ನಾಗರಿಕರ ಪಟ್ಟಿಯನ್ನು ಗೌಪ್ಯವಾಗಿರಿಸುವ ಕಡೆ ಇಲಾಖೆಗೆ ಸೂಚನೆ ನೀಡಿಲ್ಲ. ಇನ್ನಾದರೂ ಮಾಹಿತಿಯನ್ನು ರಹಸ್ಯವಾಗಿರಿಸಲು ಅಧಿಕಾರಿಗಳಿಗೆ ನಿರ್ದೇಶಿಸಬೇಕಿದೆ.  

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img