Sunday | June 14, 2026 |

ಕರೊನಾ ಪ್ರಕರಣ ಸಂಖ್ಯೆಯಲ್ಲಿ ಹೆಚ್ಚಳ; ಪ್ರಯೋಗಾಲಯಗಳ ಹೆಚ್ಚಿಸದೇ ಮೈಮರೆತ ಸರ್ಕಾರ?

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಕರೊನಾ ವೈರಾಣು ಸೋಂಕು ಹೊಂದಿರವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸುತ್ತಿಲ್ಲ. ಕರ್ನಾಟಕದಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 98ಕ್ಕೇರಿದೆಯಲ್ಲದೆ ಸಮುದಾಯಗಳಲ್ಲಿ ವೈರಸ್‌ ಅತ್ಯಂತ ವೇಗವಾಗಿ ಪ್ರಸರಣವಾಗುತ್ತಿರುವ ಸೂಚನೆಗಳು ಕಂಡು ಬರುತ್ತಿದ್ದರೂ ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಪ್ರಯೋಗಾಲಯಗಳ ಸಂಖ್ಯೆ 7 ರ ಗಡಿ ದಾಟಿಲ್ಲ. 

ಪ್ರಕರಣವನ್ನು ನಿಭಾಯಿಸುವಲ್ಲಿ ನೆರೆಯ ರಾಜ್ಯಗಳಿಗಿಂತ ಹಿಂದೆ  ಬಿದ್ದಿರುವ ರಾಜ್ಯ ಸರ್ಕಾರ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ  ಆರೋಗ್ಯ ಸುರಕ್ಷಾ ಕವಚ ಸೇರಿದಂತೆ ರಕ್ಷಣಾ ಸಾಧನಗಳನ್ನು ಸಮರ್ಪಕವಾಗಿ ಪೂರೈಕೆ ಮಾಡುವಲ್ಲಿ ನಿರ್ಲಕ್ಷ್ಯವನ್ನು ಮೆರೆದಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್‌-19 ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಇಡೀ ದೇಶವನ್ನೇ  ಮುನ್ನೆಡೆಸುವುದರಲ್ಲಿ  ಯಾವುದೇ ಅನುಮಾನಗಳೂ ಇಲ್ಲ. 

ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಮಾಡುವ ಮಾತು ಒತ್ತಟ್ಟಿಗಿರಲಿ. ಆರೋಗ್ಯ ಕಾರ್ಯಕರ್ತರಿಗೆ ಗುಣಮಟ್ಟದ ಸುರಕ್ಷಾ ಕವಚ, ರಕ್ಷಣಾ ಸಾಧನಗಳನ್ನೂ ಪೂರೈಸಿಲ್ಲ ಎಂದು ಆರೋಗ್ಯ ಕಾರ್ಯಕರ್ತರೊಬ್ಬರು ‘ದಿ ಫೈಲ್‌’ಗೆ ಮಾಹಿತಿ ನೀಡಿದ್ದಾರೆ. 

ಅಲ್ಲದೆ, ಈ ಬಗ್ಗೆ ಬಾಗಲಕೋಟೆಯ ಗ್ರಾಮೀಣ ಪ್ರದೇಶವೊಂದಕ್ಕೆ ತೆರಳಿದ್ದ ಸರ್ಕಾರಿ ವೈದ್ಯಾಧಿಕಾರಿಗಳೊಬ್ಬರು ಆರೋಗ್ಯ ಕಾರ್ಯಕರ್ತರು ಮತ್ತು  ವೈದ್ಯಾಧಿಕಾರಿಗಳಿಗೂ ರಕ್ಷಣಾ ಕವಚಗಳನ್ನು ಪೂರೈಸಿಲ್ಲ ಎಂದು ಹೇಳಿರುವ ವಿಡಯೋ ವೈರಲ್‌ ಆಗಿದೆ. ಇಂತಹ ಪ್ರಕರಣಗಳನ್ನು ರಾಜ್ಯ ಸರ್ಕಾರ  ಹೇಗೆ  ನಿಭಾಯಿಸುತ್ತಿದೆ ಎಂಬುದಕ್ಕೆ ಈ ಎಲ್ಲವೂ ಪದೇ ಪದೇ ನಿದರ್ಶನವನ್ನು ಒದಗಿಸುತ್ತಿದ್ದರೂ ಇನ್ನೂ ಎಚ್ಚೆತ್ತುಕೊಂಡಿಲ್ಲ. 

ಹೆಚ್ಚಿನ ಪ್ರಯೋಗಾಲಯಗಳನ್ನು ಹೊಂದಿರುವ ರಾಜ್ಯಗಳಷ್ಟೇ ಹೆಚ್ಚು ಪರೀಕ್ಷಿಸುತ್ತಿವೆ ಮತ್ತು ಹೆಚ್ಚಿನ ಪ್ರಕರಣಗಳನ್ನು ಪತ್ತೆ ಮಾಡುತ್ತಿವೆ. ಕರ್ನಾಟಕದಲ್ಲಿ ಈವರೆವಿಗೆ ಒಟ್ಟು  1,637 ಮಾದರಿಗಳನ್ನು ಪರೀಕ್ಷಿಸಿದ್ದರೆ,  ಕೇರಳದಲ್ಲಿ 4,516, ಮಹಾರಾಷ್ಟ್ರದಲ್ಲಿ 2,144 ಮಾದರಿಗಳನ್ನು ಪರೀಕ್ಷಿಸಿದೆ. ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಪೈಕಿ ಕೇರಳ  ಮತ್ತು ಮಹಾರಾಷ್ಟ್ರದಲ್ಲಿ  ಶೇ.37ಕ್ಕಿಂತ  ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷಿಸಿರುವುದು ಐಸಿಎಂಆರ್‌  ಜಾಲತಾಣದಿಂದ ಗೊತ್ತಾಗಿದೆ. 

ಇನ್ನು ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಜ್ಯಗಳು ಕಡಿಮೆ ಪರೀಕ್ಷೆಗಳನ್ನು ನಡೆಸುತ್ತಿವೆ. ಕರ್ನಾಟಕದಲ್ಲಿ ಪ್ರತಿ ಮಿಲಿಯನ್‌ಗೆ 27 ಮಂದಿಯನ್ನು ಪರೀಕ್ಷಿಸಿರುವುದು ತಿಳಿದು ಬಂದಿದೆ. 

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‌ನ ಇತ್ತೀಚಿನ ನವೀಕರಣದ ಪ್ರಕಾರ ಮಾರ್ಚ್ 24 ರ ಹೊತ್ತಿಗೆ 21,804 ವ್ಯಕ್ತಿಗಳಿಂದ 22,694 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪರೀಕ್ಷೆಗಳಲ್ಲಿ ಸುಮಾರು 41.5% (9,409) ಕಳೆದ ಐದು ದಿನಗಳಲ್ಲಿ (ಮಾರ್ಚ್ 20-24) ನಡೆಸಲಾಗಿದೆ.ದಿನಕ್ಕೆ ಸರಾಸರಿ 1,882 ಸಂಖ್ಯೆಯಲ್ಲಿ ಪರೀಕ್ಷೆಗಳು ನಡೆದಿವೆ.

ಅದೇ ರೀತಿ ಕರ್ನಾಟಕದಲ್ಲಿ ಕೋವಿಡ್‌ 19 ದೃಢಪಟ್ಟಿರುವ ಒಟ್ಟು ಪ್ರಕರಣಗಳಲ್ಲಿ 20-30 ವಯೋಮಾನದವರ ಸಂಖ್ಯೆ ಅಗ್ರ ಪಂಕ್ತಿಯಲ್ಲಿದೆ. ಈ ವಯೋಮಾನದವರಲ್ಲಿ ಒಟ್ಟು 20 ಪ್ರಕರಣಗಳಿದ್ದರೆ, 5-10 ವರ್ಷದವರಲ್ಲಿ  2, 10-20ರ ವಯೋಮಾನದವರಲ್ಲಿ 4, 30-40 ವಯೋಮಾನದವರ ಪಟ್ಟಿಯಲ್ಲಿ 17 ಪ್ರಕರಣಗಳು, 40-50 ವಯೋಮಾನದವರಲ್ಲಿ 8, 50-60ರವರಲ್ಲಿ 7, 60-70ರಲ್ಲಿ 12 ಮತ್ತು 70ರ ವಯೋಮಾನದವರಲ್ಲಿ 4 ಪ್ರಕರಣಗಳಿರುವುದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಸೇವೆಗಳ  ಇಲಾಖೆಯ ಅಧಿಕೃತ  ಜಾಲತಾಣದಿಂದ  ತಿಳಿದು ಬಂದಿದೆ. 

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img