Monday | September 14, 2026 |

ಏಪ್ರಿಲ್‌ 14ಕ್ಕೆ ಲಾಕ್‌ಡೌನ್‌ ಮುಕ್ತಾಯ!; ಗೊಂದಲಕ್ಕೆ ಕಾರಣವಾಯಿತೇ ಟಿಪ್ಪಣಿ?

Support THE-FILE

spot_img

ಬೆಂಗಳೂರು; ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಇನ್ನೂ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಈ ಬಗೆಗಿನ ಜಿಜ್ಞಾಸೆ ಇನ್ನೂ ಮುಂದುವರೆದಿರುವಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು ಲಾಕ್‌ಡೌನ್‌ ಅವಧಿ ಮುಕ್ತಾಯಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಟಿಪ್ಪಣಿಯು ಗೊಂದಲಕ್ಕೆ ಕಾರಣವಾಗಿದೆ. 

‘ಕೋವಿಡ್‌-19ರ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ವಿಧಿಸಲಾಗಿದ್ದ ಲಾಕ್‌-ಡೌನ್‌ ಅವಧಿಯು ದಿನಾಂಕ 14-04-2020ರಂದು ಮುಕ್ತಾಯವಾಗಲಿದ್ದು, ತದನಂತರ ತಮ್ಮ  ಅಧೀನದಲ್ಲಿರುವ ಇಲಾಖೆಗಳಲ್ಲಿ ತೆಗೆದುಕೊಳ್ಳಬೇಕಾಗಿರುವ ಪ್ರಮುಖ 10 ಕ್ರಮಗಳ  ಬಗ್ಗೆ ಪಟ್ಟಿಮಾಡಿ 09-04-2020ರೊಳಗೆ ಕಳುಹಿಸಬೇಕು,’ ಎಂದು ರಾಜ್ಯ ಸರ್ಕಾರದ  ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು ಕೋರಿರುವುದು ಟಿಪ್ಪಣಿಯಿಂದ ತಿಳಿದು ಬಂದಿದೆ.

ಈ ಟಿಪ್ಪಣಿಯನ್ನು 2020ರ ಏಪ್ರಿಲ್‌ 7ರಂದು ರಾಜ್ಯ ಸರ್ಕಾರದ ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳಿಗೆ ಟಿಪ್ಪಣಿ ಕಳಿಸಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ. 

ಲಾಕ್‌ಡೌನ್‌ ವಿಸ್ತರಣೆ  ಮಾಡಬೇಕೇ ಬೇಡವೇ ಎಂಬ  ಬಗ್ಗೆ  ಆರೋಗ್ಯ ತಜ್ಞರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಒಂದು ದಿನದ ಹಿಂದೆಯಷ್ಟೇ ಸ್ಪಷ್ಟಪಡಿಸಿದ್ದರು. ಇದರ ಬೆನ್ನಲ್ಲೇ ಮುಖ್ಯ ಕಾರ್ಯದರ್ಶಿ ಅವರು ಹೊರಡಿಸಿರುವ ಟಿಪ್ಪಣಿ, ವಾಟ್ಸಾಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಲ್ಲದೆ, ಟಿಪ್ಪಣಿಯಲ್ಲಿನ ಉಲ್ಲೇಖಿಸಿರುವ  ವಿಷಯವನ್ನು ಲಾಕ್‌ಡೌನ್‌  ಏಪ್ರಿಲ್‌ 14ರಂದು ತೆರವುಗೊಳ್ಳಲಿದೆ ಎಂದೇ ಅರ್ಥೈಯಿಸಿಕೊಳ್ಳಲು ದಾರಿ ಮಾಡಿ ಕೊಟ್ಟಂತಾಗಿದೆ. 

ಕೋವಿಡ್‌–19ರ ನಿಯಂತ್ರಣ ಸಂಬಂಧ ಆರೋಗ್ಯ ತಜ್ಞರ ತಂಡದ ಜತೆಗೆ ಚರ್ಚಿಸಿ, ಅವರ ಸಲಹೆ ಪಡೆಯುತ್ತೇವೆ. ಡಾ.ಸಿ.ಎನ್. ಮಂಜುನಾಥ್  ಹಾಗೂ ಡಾ. ದೇವಿ ಶೆಟ್ಟಿ ನೇತೃತ್ವದ ಸಮಿತಿಯು ಎರಡು ದಿನಗಳಲ್ಲಿ ವರದಿ ನೀಡುವ ನಿರೀಕ್ಷೆಯಿದೆ. ಬಳಿಕ ಲಾಕ್‌ ಡೌನ್‌ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸುರೇಶ್‌ಕುಮಾರ್‌ ಅವರು ಮಾಹಿತಿ ಒದಗಿಸಿದ್ದನ್ನು ಸ್ಮರಿಸಬಹುದು. 

ಕೋವಿಡ್‌-19 ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 181ಕ್ಕೆ ತಲುಪಿದೆಯಲ್ಲದೆ, ಬೆಂಗಳೂರು, ಮೈಸೂರು  ಸೇರಿದಂತೆ ಕೆಲ ಜಿಲ್ಲೆಗಳನ್ನ ಸೂಕ್ಷ್ಮತಾಣಗಳೆಂದು ಗುರುತಿಸಲಾಗಿದೆ. ಅಲ್ಲದೆ  ದೇಶದಾದ್ಯಂತವೂ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನ್ನು ವಿಸ್ತರಿಸುವುದರತ್ತಲೇ   ಕೇಂದ್ರ  ಸರ್ಕಾರವೂ ಚಿಂತಿಸಿದೆ. 

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img