Sunday | June 14, 2026 |

‘ದಿ ಫೈಲ್‌’ ವರದಿ; ಉತ್ಪಾದಕರಲ್ಲದವರಿಗೆ ನೀಡಿರುವ ಆದೇಶ ವಜಾಕ್ಕೆ ಸಿಎಂಗೆ ಪತ್ರ

Support THE-FILE

spot_img

ಬೆಂಗಳೂರು; ಕೋವಿಡ್‌-19 ನಿಯಂತ್ರಿಸಲು ಕಳೆದ 1 ತಿಂಗಳಲ್ಲಿ ಪಿಪಿಇ ಕಿಟ್‌ ಸೇರಿದಂತೆ ಇನ್ನಿತರೆ ಉಪಕರಣಗಳ ಖರೀದಿ ಸಂಬಂಧ ಮಧ್ಯವರ್ತಿಗಳಿಗೆ ನೀಡಿರುವ ಖರೀದಿ ಆದೇಶಗಳನ್ನು ವಜಾಗೊಳಿಸಬೇಕು ಎಂದು ಕರ್ನಾಟಕ ರಾಷ್ಟ್ರಸಮಿತಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದೆ.
ಉತ್ಪಾದಕರಲ್ಲದವರಿಂದ ಪಿಪಿಇ ಕಿಟ್‌ ಖರೀದಿಸಲು ಹೊರಡಿಸಿದ್ದ ಆದೇಶ ಕುರಿತು ‘ದಿ ಫೈಲ್‌’ ಪ್ರಕಟಿಸಿದ್ದ ವರದಿ ಕುರಿತು ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು 2020ರ ಏಪ್ರಿಲ್‌ 28ರಂದು ಬರೆದಿರುವ ಪತ್ರದಲ್ಲಿ ಗಮನ ಸೆಳೆದಿದ್ದಾರೆ.
ಕೋವಿಡ್‌-19ರ ಬಿಕ್ಕಟ್ಟಿನ ಸಂದರ್ಭದಲ್ಲೂ ಲಾಭ ಮಾಡಿಕೊಳ್ಳುವ ಯತ್ನಗಳ ಬಗ್ಗೆ ಅಖಿಲ ಭಾರತ ಕಾಂಗ್ರೆಸ್‌ ದನಿ ಎತ್ತಿದ್ದರೆ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಈವರೆವಿಗೂ ಈ ಬಗ್ಗೆ ತುಟಿ ಬಿಚ್ಚದಿರುವುದು ಅನುಮಾನಗಳಿಗೆ ಕಾರಣವಾಗಿದೆ.
‘ಮಧ್ಯವರ್ತಿಗಳಿಗೆ ನೀಡಿರುವ ಖರೀದಿ ಆದೇಶಗಳನ್ನು ವಜಾಗೊಳಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲಾ ಖರೀದಿ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಸಬೇಕಲ್ಲದೆ, ಉತ್ಪಾದಕರಿಂದಲೇ ನೇರವಾಗಿ ಸ್ಪರ್ಧಾತ್ಮಕ ದರದಲ್ಲಿ ಖರೀದಿಸಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿಗಳಿಂದ ಖರೀದಿಸಬಾರದು ಮತ್ತು ಕಮಿಷನ್‌ ದಂಧೆಗೆ ಅವಕಾಶ ಮಾಡಿಕೊಡಬಾರದು,’ ಎಂದು ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪರೀಕ್ಷಾ ಕಿಟ್‌ಗಳನ್ನು ಬೇರೆ ಬೇರೆ ದರಗಳಿಗೆ ಮಾರಾಟ ಮಾಡಲಾಗಿದೆಯಲ್ಲದೆ ಉತ್ಪಾದಕ ಕಂಪನಿಗಳನ್ನು ಹೊರತುಪಡಿಸಿ ಮಧ್ಯವರ್ತಿಗಳ ಮೂಲಕ ಕಿಟ್‌ಗಳನ್ನು ಖರೀದಿಸಿರುವ ಬಗ್ಗೆ ‘ದಿ ಫೈಲ್‌’ 2020ರ ಏಪ್ರಿಲ್‌ 27ರಂದು ವರದಿ ಪ್ರಕಟಿಸಿತ್ತು.
ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆ, ಮಾಸ್ಕ್‌, ಮುಖಗವಸು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಉತ್ಪಾದಿಸದ ಕಂಪನಿಗಳಿಗೆ 3 ಕೋಟಿ ಮೌಲ್ಯದ ಖರೀದಿ ಆದೇಶ ನೀಡಿರುವುದನ್ನು ದಾಖಲೆ ಸಮೇತ ಬಹಿರಂಗಗೊಳಿಸಿತ್ತು.
ಸ್ಪಷ್ಟೀಕರಣದಲ್ಲಿ ಉಲ್ಲೇಖಿಸಿರುವ ಕಂಪನಿಗಳ ಪೈಕಿ 2 ಕಂಪನಿಗಳಿಗೆ ಸರ್ಜಿಕಲ್ ಉತ್ಪನ್ನಗಳ ಉತ್ಪಾದನೆಗೂ ಸಂಬಂಧವಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಖರೀದಿ ಆದೇಶ ಪಡೆದಿರುವ ಈ 2 ಕಂಪನಿಗಳು ಇದುವರೆಗೂ ಉಪಕರಣಗಳನ್ನು ಸರಬರಾಜು ಮಾಡಿದೆಯೇ ಇಲ್ಲವೇ ಎಂಬ ಬಗ್ಗೆ ಇಲಾಖೆ ಆಯುಕ್ತರಿಗೆ ನೀಡಿರುವ ಸ್ಪಷ್ಟೀಕರಣದಲ್ಲಿ ತಿಳಿಸಿಲ್ಲ.
ರುದ್ರಾಂಶ್ ವಿಗ್‌ ಆಗ್ರೋ ಇಂಡಿಯಾ ಪ್ರೈವೈಟ್‌ ಲಿಮಿಟೆಡ್‌ಗೆ 800 ರು. ದರದಲ್ಲಿ ಒಟ್ಟು 2 ಕೋಟಿ ರು.ಮೊತ್ತದಲ್ಲಿ 25,000 ಸಂಖ್ಯೆಯ ಕಿಟ್‌ಗಳ ಸರಬರಾಜಿಗೆ 2020ರ ಮಾರ್ಚ್‌ 20ರಂದು ಖರೀದಿ ಆದೇಶ ನೀಡಿದೆ. ಈ ಕಂಪನಿ ಮೇಲ್ನೋಟಕ್ಕೆ ಕೃಷಿ ಮತ್ತು ಇದಕ್ಕೆ ಪೂರಕವಾದ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ಕಳೆದ 9 ವರ್ಷಗಳಿಂದಲೂ ಕೃಷಿ ಮತ್ತು ಇದಕ್ಕೆ ಪೂರಕವಾದ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿದೆ. ಅಲ್ಲದೆ ಈ ಕಂಪನಿ ತನ್ನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ ಎಂಬ ಮಾಹಿತಿಯನ್ನು ಹೊರಗೆಡವಿತ್ತು.
ಅದೇ ರೀತಿ ಬೆಂಗಳೂರು ನಗರದ ಎ ಟೆಕ್‌ ಟ್ರೋನ್‌ ಎಂಬ ಕಂಪೆನಿಯೂ ಮಾಸ್ಕ್‌ ಸೇರಿದಂತೆ ಕಿಟ್‌ಗಳನ್ನು ಸರಬರಾಜು ಮಾಡಿದೆ. ಯೂನಿಟ್‌ವೊಂದಕ್ಕೆ 725 ರು. ನಂತೆ ಒಟ್ಟು 1,81,25,000 ರು. ದರದಲ್ಲಿ 25,000 ಕಿಟ್‌ಗಳ ಸರಬರಾಜಿಗೆ 2020ರ ಮಾರ್ಚ್ 20ರಂದು ಖರೀದಿ ಆದೇಶ ನೀಡಿರುವುದು ಬಹಿರಂಗಗೊಂಡಿತ್ತು.
‘ಪಿ.ಪಿ.ಇ. ಕೀಟ್ ಗಳ ತಯಾರಿಕೆಯಲ್ಲಿ, ಖರೀದಿಯಲ್ಲಿ ಮತ್ತು ಸರಬರಾಜಿನಲ್ಲಿ ಪರಿಣತಿಯನ್ನು ಹೊಂದಿರದ ಹಲವಾರು ಸಂಸ್ಥೆಗಳ ಮತ್ತು ದಲ್ಲಾಳಿಗಳ ಮೂಲಕ ಖರೀದಿಸುತ್ತಿರುವ ಮಾಹಿತಿ ನಮಗೂ ಬಂದಿದೆ. ಕಿಟ್ ಗಳ ಉತ್ಪಾದನೆಯಲ್ಲಿ ಪರಿಣತಿಯನ್ನೂ ಹೊಂದಿಲ್ಲ. ಇಂತಹ ಅವ್ಯವಹಾರ ಮತ್ತು ಅಕ್ರಮಗಳಲ್ಲಿ ಭಾಗಿ ಆಗಿರುವವರ ವಿರುದ್ಧ ತನಿಖೆ ನಡೆಸಬೇಕು,’ ಲಂಚಮುಕ್ತ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ವಿ ಆರ್‌ ಮರಾಠೆ ಅವರು ಆಗ್ರಹಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img