Saturday | June 20, 2026 |

ತಬ್ಲಿಘಿ; ಮಾರ್ಚ್‌ ಸಮಾವೇಶದಲ್ಲಿ ನೇರ ಭಾಗಿಯಾಗದ ಮೈಸೂರು ಸೋಂಕಿತರು

Support THE-FILE

spot_img

ಬೆಂಗಳೂರು; ಮೈಸೂರು ಜಿಲ್ಲೆಯಲ್ಲಿ ತಬ್ಲಿಘಿ ಜಮಾತ್‌ಗೆ ಸಂಬಂಧಿಸಿದವರು ಮಾರ್ಚ್‌ ತಿಂಗಳಲ್ಲಿ ದೆಹಲಿ ನಿಜಾಮುದ್ದಿನ್‌ ಪ್ರದೇಶದಲ್ಲಿ ನಡೆದಿದ್ದ ಸಮಾವೇಶದಲ್ಲಿ ನೇರವಾಗಿ ಭಾಗಿಯಾಗಿರಲಿಲ್ಲ ಎಂಬ ಸಂಗತಿಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವರದಿ ಹೊರಗೆಡವಿದೆ.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆಯ ನಿಯಂತ್ರಣ ಮತ್ತು ನಿವಾರಣ ಸಂಬಂಧ ಕೈಗೊಂಡಿದ್ದ ಕ್ರಮಗಳ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಐಎಎಸ್‌ ಅಧಿಕಾರಿ ಎನ್‌ ಜಯರಾಮ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ವರದಿಯಿಂದ ಈ ವಿಚಾರ ತಿಳಿದು ಬಂದಿದೆ. ಜಯರಾಮ್‌ ಅವರು 2020ರ ಏಪ್ರಿಲ್ 6ರಂದು ವರದಿ ಸಲ್ಲಿಸಿದ್ದರು. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ .

ತಬ್ಲಿಘಿ ಜಮಾತ್‌ಗೆ ಸಂಬಂಧಿಸಿದವರ ಪೈಕಿ ಮೈಸೂರು ಜಿಲ್ಲೆಯಲ್ಲಿ 63 ಮಂದಿ ಇದ್ದಾರೆ. ಇವರಲ್ಲಿ 12 ಮಂದಿಗೆ ಕೊರೊನಾ ವೈರಾಣು ಸೋಂಕಿರುವುದು ದೃಢಪಟ್ಟಿತ್ತು. ಈ 63 ಜನರಲ್ಲಿ ಹಲವರು ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದರು ಎಂಬುದು ವರದಿಯಿಂದ ಗೊತ್ತಾಗಿದೆ.

‘ಇವರ್ಯಾರು ದೆಹಲಿ ನಿಜಾಮುದ್ದಿನ್‌ ಪ್ರದೇಶದಲ್ಲಿ ನೇರವಾಗಿ ಮಾರ್ಚ್‌ ತಿಂಗಳಲ್ಲಿ ನಡೆದಿದ್ದ ಸಮಾವೇಶದಲ್ಲಿ ಭಾಗಿಯಾಗದಿರುವುದು ಕಂಡು ಬಂದಿದೆ. ಬದಲಾಗಿ ಜನವರಿ ತಿಂಗಳಲ್ಲಿ ನಡೆದಿದ್ದ ದೆಹಲಿ ಹಾಗೂ ದೇಶದ ಇನ್ನಿತರ ಪ್ರದೇಶಗಳ ಮುಖಾಂತರ ಮೈಸೂರಿಗೆ ಬಂದವರಾಗಿರುತ್ತಾರೆ,’ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಐಎಎಸ್‌ ಅಧಿಕಾರಿ ಎನ್‌ ಜಯರಾಮ್‌ ಅವರು ವರದಿಯಲ್ಲಿ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಲ್ಲಿ ತಬ್ಲಿಕ್‌ಗಳೇ ಮೂಲ ಕಾರಣರು ಎಂಬ ಆರೋಪ ಕೇಳಿ ಬಂದಿತ್ತು. ಮಾರ್ಚ್‌ 8ರಿಂದ 20ರವರೆಗೆ ದೆಹಲಿಯ ನಿಜಾಮುದ್ದಿನ್‌ ಸಮಾವೇಶದಲ್ಲಿ ಭಾಗವಹಿಸಿದ್ದವರೇ ಮೈಸೂರಿನಲ್ಲಿ ಕೊರೊನಾ ವೈರಾಣು ಹರಡುವಿಕೆಗೆ ಕಾರಣರಾಗಿದ್ದರು ಎಂಬ ಆಪಾದನೆಗೆ ಗುರಿಯಾಗಿದ್ದರು.

ಆದರೀಗ ಮಾರ್ಚ್‌ ತಿಂಗಳಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಇವರ್ಯಾರು ಭಾಗಿಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್‌ ಅಧಿಕೃತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿರುವುದು ಆಪಾದನೆಯಿಂದ ಅವರನ್ನು ಮುಕ್ತಗೊಳಿಸಿದಂತಾಗಿದೆ.

ದೆಹಲಿಯ ನಿಜಾಮುದ್ದೀನ್‌ ಜಮಾತ್‌ ಧಾರ್ಮಿಕ ಸಭೆಯಲ್ಲಿ ರಾಜ್ಯದಿಂದ ಪಾಲ್ಗೊಂಡಿದ್ದವರ ಬಗ್ಗೆ ವಿವರ ಕಲೆ ಹಾಕಲಾಗಿತ್ತು. ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಮುಖಂಡರು, ತಮ್ಮ ಜಿಲ್ಲೆಗಳ ಸಹಿತ ರಾಜ್ಯದ 24 ಜಿಲ್ಲೆಗಳಲ್ಲಿ ಸಂಚರಿಸಿ, ಧಾರ್ಮಿಕ ಸಭೆಯ ಮಹತ್ವ ಸಾರಿದ್ದರು ಎಂದು ಆರೋಪಿಸಲಾಗಿತ್ತು.

ನಿಜಾಮುದ್ದೀನ್‌ ಮರ್ಕಾಜ್‌ ಬಳಿ ನಡೆದ ತಬ್ಲಿಘಿ-ಎ- ಜಮಾತ್‌ ಕಾರ್ಯಕ್ರಮದಲ್ಲಿ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಿಂದ ಸಮುದಾಯದ ಮುಖಂಡರ ಸಹಿತ ಸುಮಾರು 1,500 ಮಂದಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.
ಮೈಸೂರಿನಿಂದ 40 ಸೇರಿದಂತೆ ಬೆಳಗಾವಿಯಿಂದ 65, ದಕ್ಷಿಣಕನ್ನಡ, ಉಡುಪಿಯಿಂದ ಒಟ್ಟು 40, ಬೆಂಗಳೂರಿನಿಂದ 45ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎಂದು ಪೊಲೀಸ್‌ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದನ್ನು ಸ್ಮರಿಸಬಹುದು.

ಮಾರ್ಚ್‌ನಲ್ಲಿ ನಿಜಾಮುದ್ದೀನ್‌ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಗೆ ಕರ್ನಾಟಕದ 1,500 ಮಂದಿ ದಿಲ್ಲಿಗೆ ಹೋಗಿದ್ದರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದರು.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಾಣು ಸೋಂಕಿತರ ಸಂಖ್ಯೆ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಹೆಚ್ಚಿತ್ತು. ಇದರ ಬೆನ್ನಲ್ಲೇ ನಂಜನಗೂಡಿನ ಜ್ಯುಬಿಲಿಯಂಟ್‌ ಔಷಧ ಕಾರ್ಖಾನೆಯ 19 ಸಿಬ್ಬಂದಿಗೂ ವೈರಾಣು ಹರಡಿತ್ತು. ಪ್ರಕರಣ ಪತ್ತೆಯಾದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹೊತ್ತಿದ್ದ ಸಚಿವ ವಿ ಸೋಮಣ್ಣ ಅವರನ್ನು ಬದಲಾಯಿಸಿದ್ದಲ್ಲದೆ, ಆ ಜಾಗಕ್ಕೆ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರನ್ನು ನೇಮಿಸಲಾಗಿತ್ತು.

90 ಮಂದಿ ಕೊರೊನಾ ಸೋಂಕಿತರು ಇದ್ದ ಕಾರಣ ಮೈಸೂರು ಜಿಲ್ಲೆ ಕೆಂಪು ವಲಯದಲ್ಲಿತ್ತು. 2020ರ ಮೇ 11ರ ಅಂತ್ಯಕ್ಕೆ ಜಿಲ್ಲೆಯಲ್ಲಿ 88 ಮಂದಿ ಮಾತ್ರ ಸೋಂಕಿತರಿದ್ದಾರೆ. ಇವರಲ್ಲಿ 84 ಬಿಡುಗಡೆಗೊಂಡ ಪ್ರಕರಣಗಳಿದ್ದರೆ 4 ಸಕ್ರಿಯ ಪ್ರಕರಣಗಳಿವೆ.
ದಿನದಿಂದ ದಿನಕ್ಕೆ ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಹುತೇಕ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅಲ್ಲದೆ, ಕಳೆದ 6 ದಿನಗಳಿಂದ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ.

ಲಾಕ್ ಡೌನ್ ಸಡಿಲಿಕೆಯಿಂದ ಜನಜೀವನ ನಿಧಾನವಾಗಿ ಚುರುಕುಗೊಳ್ಳುತ್ತಿದೆ. ಕಟ್ಟಡ ನಿರ್ಮಾಣ ಕಾಮಗಾರಿ, ಕೈಗಾರಿಕಾ ಚಟುವಟಿಕೆಗಳಿಗೆ ಜಿಲ್ಲಾಧಿಕಾರಿಗಳು ಅವಕಾಶ ನೀಡಿದ ಹಿನ್ನೆಲೆಯಲ್ಲಿ, ಜನ ಸಂಚಾರ ಎಂದಿನಂತಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img