Sunday | September 13, 2026 |

ಸಹಭಾಗಿ ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

Support THE-FILE

spot_img

ಬೆಂಗಳೂರು; ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಔಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಸಂಸ್ಥೆ ನಡೆಸಿದ್ದ ವಿವಿಧ ರೀತಿಯ ಅಕ್ರಮಗಳನ್ನು ಮೊತ್ತ ಮೊದಲ ಬಾರಿಗೆ ‘ದಿ ಫೈಲ್‌’ ಹೊರಗೆಡವಿದ್ದ ಸರಣಿ ವರದಿಗಳನ್ನೇ ಇದೀಗ ಪ್ರಜಾವಾಣಿ ಪತ್ರಿಕೆಯೂ ವಿಸ್ತರಿಸಿದೆ.

ಈ ಮೂಲಕ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ. ಪ್ರಜಾವಾಣಿ ಇಂದು ಮುಖಪುಟದಲ್ಲಿ ಪ್ರಕಟಿಸಿರುವ ವರದಿಯಲ್ಲಿ ಪ್ರಸ್ತಾಪಿಸಿರುವ ಅಕ್ರಮಗಳನ್ನು ‘ದಿ ಫೈಲ್‌’ 2020ರ ಏಪ್ರಿಲ್‌ 21ರಿಂದಲೇ ದಾಖಲೆಗಳ ಸಮೇತ ಎಳೆಎಳೆಯಾಗಿ ಹೊರಗೆಡವುತ್ತಲೇ ಬಂದಿದೆ.

ನಮಗೆ ದೊರೆತಿದ್ದ ದಾಖಲೆಗಳನ್ನು ಪರಿಶೀಲಿಸಿದ್ದ ನಮ್ಮ ತನಿಖಾ ತಂಡ, ಉಪಕರಣಗಳ ತಯಾರಿಸಿದ್ದ ಕಂಪನಿಗಳ ನೈಜತೆ ಮತ್ತು ಉಪಕರಣಗಳನ್ನು ಪೂರೈಕೆ ಮಾಡಿದ್ದ ಸರಬರಾಜುದಾರರ ಹಿನ್ನೆಲೆ, ಸರ್ಕಾರಕ್ಕೆ ಆಗಿದ್ದ ನಷ್ಟದ ಕುರಿತಾದ ದಾಖಲೆಗಳನ್ನು ಕಲೆ ಹಾಕಿತ್ತಲ್ಲದೆ ಈ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ಪಿಪಿಇ ಕಿಟ್‌, ಸ್ಯಾನಿಟೈಸರ್‌, ಗ್ಲೂಕೋಸ್‌, ವೆಂಟಿಲೇಟರ್‌, ಡಯಾಲಿಸಿಸ್‌, ಮಾಸ್ಕ್‌, ಸಿರಿಂಜ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಾಗಿರುವ ಅಕ್ರಮಗಳ ಕುರಿತು ಕರ್ನಾಟಕ ರಾಷ್ಟ್ರಸಮಿತಿ ಕೂಡ ದನಿ ಎತ್ತಿತ್ತು.

ಅಲ್ಲದೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದಾಖಲಿಸಿದ್ದ ದೂರಿನಲ್ಲಿಯೂ ‘ದಿ ಫೈಲ್‌’ ಹೊರಗೆಡವಿದ್ದ ವರದಿಗಳನ್ನು ಉಲ್ಲೇಖಿಸಿತ್ತು. ಹಾಗೆಯೇ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂಗಳಕ್ಕೆ ಕೊಂಡೊಯ್ದಿದ್ದ ಕರ್ನಾಟಕ ರಾಷ್ಟ್ರಸಮಿತಿ ಅಲ್ಲಿಯೂ ದೂರು ದಾಖಲಿಸಿದ್ದನ್ನು ಸ್ಮರಿಸಬಹುದು.

ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ಹೆಸರಿನಲ್ಲಿ ಕಮಿಷನ್‌ ದಂಧೆಗಿಳಿದಿದ್ದ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮುಖವಾಡವನ್ನು ಕಳಚುವ ನಿಟ್ಟಿನಲ್ಲಿ ಸಹಭಾಗಿ ಪತ್ರಿಕೋದ್ಯಮವು ಹೆಚ್ಚು ಪರಿಣಾಮಕಾರಿ. ಇದನ್ನೇ ‘ದಿ ಫೈಲ್‌’ ಕೂಡ ನಂಬಿದೆಯಲ್ಲದೆ ಹೆಚ್ಚಿನ ವಿಶ್ವಾಸವೂ ಇರಿಸಿಕೊಂಡಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img