Sunday | June 14, 2026 |

ಪ್ರಶ್ನೆಪತ್ರಿಕೆ ಸೋರಿಕೆ; ಖಜಾನೆ ನಿರ್ದೇಶಕರ ಪಾತ್ರದ ಕುರಿತು ವರದಿ ಸಲ್ಲಿಸದ ಇಲಾಖೆ

Support THE-FILE

spot_img

ಬೆಂಗಳೂರು; ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಜಾನೆ ಇಲಾಖೆಯ ಹಿಂದಿನ ನಿರ್ದೇಶಕಿ ಜ್ಯೋತಿ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಕುರಿತು ಸರ್ಕಾರಕ್ಕೆ ಈವರೆವಿಗೂ ವರದಿ ಸಲ್ಲಿಕೆಯಾಗಿಲ್ಲ. ಹೀಗಾಗಿ ಇದಕ್ಕೆ ಸಂಬಂಧಿಸಿದ ಕಡತವನ್ನು ಸರ್ಕಾರದ ಹಂತದಲ್ಲೇ ಮುಕ್ತಾಯಗೊಳಿಸಲು ನಿರ್ಧರಿಸಿರುವ ಇಲಾಖೆ, ಇದಕ್ಕೆ ಪದವಿಪೂರ್ವ ಶಿಕ್ಷಣ ಮಂಡಳಿಯೇ ಜವಾಬ್ದಾರಿ ಹೊರಬೇಕು ಎಂದು ಎಚ್ಚರಿಸಿದೆ.

4 ವರ್ಷಗಳಾದರೂ ವರದಿ ಸಲ್ಲಿಸದ ಕಾರಣ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಈ ಕುರಿತು 15 ದಿನದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ ಅರೆ ಸರ್ಕಾರಿ ಪತ್ರದಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
‘ಈ ಬಗ್ಗೆ ವೈಯಕ್ತಿಕ ಗಮನಹರಿಸಿ 15 ದಿನದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ನಿರ್ದೇಶನಾಲಯದ ಜವಾಬ್ದಾರಿ ಮೇಲೆ ಸರ್ಕಾರದ ಹಂತದಲ್ಲೇ ಕಡತ ಮುಕ್ತಾಯಗೊಳಿಸಲಾಗುವುದು,’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಐಎಎಸ್‌ ಅಧಿಕಾರಿ ಎಂ ಕನಗವಲ್ಲಿ ಅವರಿಗೆ ಜಂಟಿ ಕಾರ್ಯದರ್ಶಿ ಎಚ್ಚರಿಸಿದ್ದಾರೆ ಎಂದು ಗೊತ್ತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ 2017ರಿಂದಲೂ ಪತ್ರ ಬರೆಯುತ್ತಲೇ ಇದೆ. 2020ರ ಜನವರಿ 18ರಂದು ಈ ಬಗ್ಗೆ ಪತ್ರ ಬರೆದಿತ್ತು. ಆದರೆ ಪದವಿಪೂರ್ವ ಶಿಕ್ಷಣ ಇಲಾಖೆ ಯಾವುದೇ ವರದಿಯನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಇಲಾಖೆಯ ಜಂಟಿ ಕಾರ್ಯದರ್ಶಿ ಮತ್ತೊಂದು ಅರೆ ಸರ್ಕಾರಿ ಪತ್ರವನ್ನು ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಕೋಲಾರ ಜಿಲ್ಲೆ ಮಾಲೂರಿನ ಖಜಾನೆಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಖಚಿತಪಡಿಸಿದ್ದರು. ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ವಿಧಾನ ಸಭೆಯ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತ್ತು. ಪತ್ರಿಕೆ ಸೋರಿಕೆಯಾಗಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆದಿತ್ತು.

ಸಿಐಡಿ ತನಿಖೆಯ ನೇತೃತ್ವ ವಹಿಸಿದ್ದ ಅಂದಿನ ಡಿಐಜಿ ಸೋನಿಯಾ ನಾರಂಗ್ ಅವರ ತಂಡ ಮಾಲೂರಿಗೆ ತೆರಳಿ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿರುವ ಸ್ಥಳ ಪರಿಶೀಲನೆ ನಡೆಸಿದ್ದ ತಂಡ ಸೋರಿಕೆ ಹಿಂದೆ ಖಜಾನೆ ಅಧಿಕಾರಿ ಹಾಗೂ ಇತರ ಸಿಬ್ಬಂದಿಯ ಕೈವಾಡ ಬಲವಾಗಿದೆ ಎಂದು ಅನುಮಾನಿಸಿತ್ತು.

ಖಜಾನೆ ಭದ್ರತೆಗೆ ಸದಾ ಕಾಲ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ. ಹೀಗಾಗಿ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಬೇಕಾದರೆ ಖಜಾನೆಯ ಉಸ್ತುವಾರಿ ವಹಿಸುವ ಈ ನಾಲ್ವರ ಪೈಕಿ ಯಾರಾದರೂ ಲೋಪವೆಸಗಿರಬೇಕು ಅಥವಾ ಭದ್ರತಾ ಸಿಬ್ಬಂದಿ ಲೋಪವಿರಬೇಕು ಎನ್ನುವ ನಿರ್ಧಾರಕ್ಕೆ ಸಿಐಡಿ ಅಧಿಕಾರಿಗಳು ಬಂದಿದ್ದರು.

2016ರಲ್ಲೇ ಆರು ತಿಂಗಳ ಅವಧಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂವರು ಆಯುಕ್ತರು ಬದಲಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಪಿಯು ಮಂಡಳಿ ಅಧಿಕಾರಿಗಳೇ ಕಾರಣ. ಅವರು ಶಾಮೀಲಾಗದಿದ್ದರೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗುತ್ತಿರಲಿಲ್ಲ ಒಂದೋ ಇದಕ್ಕೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು, ಇಲ್ಲವೇ ಅಂದಿನ ಸಚಿವ ಕಿಮ್ಮನೆ ರತ್ನಾಕರ ಅವರೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಆಗ್ರಹಿಸಿದ್ದನ್ನು ಸ್ಮರಿಸಬಹುದು.

ರಾಜ್ಯದ ಜಿಲ್ಲಾ ಕೇಂದ್ರ ಹಾಗೂ ತಾಲೂಕುಗಳು ಸೇರಿ ಒಟ್ಟು 187 ಖಜಾನೆಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆ ನಡೆಯುವ ಕೆಲ ದಿನಗಳ ಮುಂಚೆಯೇ ತಂದಿರಿಸಲಾಗುತ್ತದೆ. ಖಜಾನೆಯ ಉಸ್ತುವಾರಿ ಜವಾಬ್ದಾರಿಯು ತಹಸೀಲ್ದಾರ್, ಕಾಲೇಜಿನ ಪ್ರಾಂಶುಪಾಲ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಖಜಾನೆ ಅಧಿಕಾರಿಗೆ ಇರುತ್ತದೆ. ಪ್ರಶ್ನೆಪತ್ರಿಕೆಯನ್ನು ಭದ್ರವಾಗಿ ನೋಡಿಕೊಳ್ಳುವುದು ಹಾಗೂ ಅವುಗಳ ಸೂಕ್ತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ನೋಡಿಕೊಳ್ಳವ ಜವಾಬ್ದಾರಿಯು ಅವರದೇ ಆಗಿರುತ್ತದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img