Saturday | June 20, 2026 |

ಕರ್ನಾಟಕದ ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿ ಅಕ್ರಮ; ಆರ್‌ಬಿಐ ಗೌಪ್ಯ ವರದಿ ಬಹಿರಂಗ

Support THE-FILE

spot_img

ಬೆಂಗಳೂರು; ರಾಜ್ಯದ ಮಲ್ಲಿಕಾರ್ಜುನ ಪಟ್ಟಣ ಸಹಕಾರ ಬ್ಯಾಂಕ್‌ ಸೇರಿದಂತೆ ಹಲವು ಪಟ್ಟಣ ಸಹಕಾರ ಬ್ಯಾಂಕ್‌ಗಳು ಸಾಲ, ಮುಂಗಡ, ಹೂಡಿಕೆ, ನಗದು ನಿರ್ವಹಣೆ, ಅನುಮಾನಸ್ಪದ ವಹಿವಾಟು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಗಂಭೀರ ಆರೋಪಕ್ಕೆ ಗುರಿಯಾಗಿವೆ.

ಈ ಕುರಿತು ಭಾರತೀಯ ರಿಸರ್ವ್‌ಬ್ಯಾಂಕ್‌ 2020ರ ಮಾರ್ಚ್‌ನ ವಿವಿಧ ದಿನಾಂಕಗಳಲ್ಲಿ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಅವರಿಗೆ ಸಲ್ಲಿಸಿರುವ ‘ಗೌಪ್ಯ’ ವರದಿ, ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿನ ಹಲವು ನಿಯಮಬಾಹಿರ ಚಟುವಟಿಕೆ ಮತ್ತು ದೊಡ್ಡ ಮೊತ್ತದ ವಂಚನೆ ಪ್ರಕರಣಗಳನ್ನು ಹೊರಗೆಡವಿದೆ. ಈ ಎಲ್ಲಾ ಗೌಪ್ಯ ವರದಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಹಲವು ಪಟ್ಟಣ ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿಯ ವಿಪರೀತ ಹಸ್ತಕ್ಷೇಪ ಮತ್ತು ಆರ್ಥಿಕ ಅಶಿಸ್ತಿನ ಕಾರಣಗಳಿಂದಾಗಿ ಎನ್‌ಪಿಎ ಪ್ರಮಾಣವನ್ನು ಹೆಚ್ಚಿಸಿಕೊಂಡಿದೆ ಎಂದು ಆರ್‌ಬಿಐ ಗೌಪ್ಯ ವರದಿಯಲ್ಲಿ ವಿವರಿಸಿದೆ. 2019ರ ಮಾರ್ಚ್‌ ಅಂತ್ಯದ ಹಣಕಾಸಿನ ವರ್ಷಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಿರುವ ಆರ್‌ಬಿಐ, ವರದಿ ಆಧರಿಸಿ ಸೂಕ್ತ ಕ್ರಮ ಜರುಗಿಸಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದು ವರದಿಯಿಂದ ಗೊತ್ತಾಗಿದೆ.

ರಾಯಚೂರು ಮಸ್ಕಿಯ ಮಲ್ಲಿಕಾರ್ಜುನ ಪಟ್ಟಣ ಸಹಕಾರ ಬ್ಯಾಂಕ್‌, ಬನಹಟ್ಟಿಯ ಕಾಡಸಿದ್ದೇಶ್ವರ, ಬಸವನಬಾಗೇವಾಡಿಯ ಬಸವೇಶ್ವರ ಸಹಕಾರ ಬ್ಯಾಂಕ್‌, ಹಡಗಲಿ ಅರ್ಬನ್‌ಕೋ ಆಪರೇಟೀವ್‌ ಬ್ಯಾಂಕ್‌, ಮಡಿಕೇರಿಯ ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್‌, ತಾಳಿಕೋಟೆಯ ತಾಳಿಕೋಟೆ ಸಹಕಾರಿ ಬ್ಯಾಂಕ್‌, ಕಲಬುರಗಿಯ ಛತ್ರಪತಿ ಶಿವಾಜಿ ಮಹಾರಾಜ ಸಹಕಾರಿ ಬ್ಯಾಂಕ್‌ಗಳ ಕಾರ್ಯನಿರ್ವಹಣೆ ಕುರಿತು ತಪಾಸಣೆ ನಡೆಸಿರುವ ಆರ್‌ಬಿಐ ಅಧಿಕಾರಿಗಳು, ಅಲ್ಲಿನ ಹಲವು ಲೋಪಗಳನ್ನು ಪತ್ತೆ ಹಚ್ಚಿರುವುದು ವರದಿಯಿಂದ ತಿಳಿದು ಬಂದಿದೆ.

ಬಂಡವಾಳ ಮತ್ತು ಮೂಲ ಬಂಡವಾಳ ಮೊತ್ತದಲ್ಲಿ ಭಾರೀ ವ್ಯತ್ಯಾಸಗಳನ್ನು ಹೊರಗೆಡವಿರುವ ಆರ್‌ಬಿಐ ತಪಾಸಣೆ ತಂಡ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿ ನಾನ್‌ ಎಸ್‌ಎಲ್‌ಆರ್‌ನಲ್ಲಿ ಹೂಡಿಕೆ ಮಾಡಿರುವ ಮೊತ್ತ ಶೇಕಡವಾರು ಹೆಚ್ಚಿದೆ ಎಂದು ಪತ್ತೆ ಹಚ್ಚಿರುವುದು ವರದಿಯಿಂದ ಗೊತ್ತಾಗಿದೆ.

ಅದೇ ರೀತಿ ಪಟ್ಟಣ ಸಹಕಾರ ಬ್ಯಾಂಕ್‌ಗಳು ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲವಲ್ಲದೆ ಬಹುತೇಕ ಬ್ಯಾಂಕ್‌ಗಳ ಕಾರ್ಯನಿರ್ವಹಣೆ ವೆಚ್ಚವನ್ನು ಆಡಳಿತ ಮಂಡಳಿಗಳು ಪ್ರತಿ ವರ್ಷವೂ ಹೆಚ್ಚಿಸಿದೆ. ಬ್ಯಾಂಕ್‌ಗಳ ಆರ್ಥಿಕ ಚಟುವಟಿಕೆಗಳ ಕುರಿತು ನಡೆದಿರುವ ಸಮವರ್ತಿತ ಲೆಕ್ಕಪರಿಶೋಧನೆಯೂ ಕ್ರಮ ಬದ್ಧವಾಗಿಲ್ಲ ಎಂಬ ಅಂಶ ಆರ್‌ಬಿಐನ ಗೌಪ್ಯ ವರದಿಯಿಂದ ತಿಳಿದು ಬಂದಿದೆ.

ಇನ್ನು, ಹಲವು ಬ್ಯಾಂಕ್‌ಗಳು ಹೂಡಿರುವ ಮೊತ್ತದಿಂದ ಬಿಡಿಗಾಸು ಲಾಭಾಂಶ ಗಳಿಸಿಲ್ಲ. ಹೀಗಾಗಿ ಹೂಡಿಕೆ ಮೊತ್ತ ಅನುತ್ಪಾದಕವಾಗಿದೆ. ಆಡಳಿತ ಮಂಡಳಿಯ ಅನುಮತಿ ಇಲ್ಲದೇ ಸಾಲ ನೀಡಿರುವ ಪಟ್ಟಣ ಸಹಕಾರ ಬ್ಯಾಂಕ್‌ಗಳು, ಆಸ್ತಿ ಹೊಣೆಗಾರಿಕೆ ಸಮಿತಿಗಳನ್ನೇ ರಚಿಸಿಲ್ಲ.

ಎನ್‌ಪಿಎ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಆರ್‌ಬಿಐ ನೀಡಿದ್ದ ಕಟ್ಟುನಿಟ್ಟಿನ ಸೂಚನೆಯನ್ನು ಪಟ್ಟಣ ಸಹಕಾರ ಬ್ಯಾಂಕ್‌ಗಳು ಪಾಲಿಸಿಲ್ಲ. ಹಳೆ ಗ್ರಾಹಕರ ಖಾತೆಯನ್ನು ಸರಿಯಾಗಿ ನಿರ್ವಹಿಸದಿರುವುದು, ಅನುಮಾನಸ್ಪದ ವಹಿವಾಟು ನಡೆಸಿರುವುದು, ಠೇವಣಿಗೆ ವಿರುದ್ಧವಾಗಿ ಮುಂಗಡ ನೀಡಿರುವುದು, ಬಡ್ಡಿ ರಹಿತ ವೆಚ್ಚದಲ್ಲಿನ ಏರಿಕೆ, ಹೊಸ ಖಾತೆಗಳನ್ನು ಮರು ಪರೀಕ್ಷಿಸದಿರುವುದು ಸೇರಿದಂತೆ ಹಲವು ಅಕ್ರಮಗಳು ನಡೆದಿರುವುದು ಆರ್‌ಬಿಐ ತಪಾಸಣೆಯಿಂದ ಗೊತ್ತಾಗಿದೆ.

ಬ್ಯಾಂಕ್‌ಗಳ ಆರ್ಥಿಕ ಚಟುವಟಿಕೆಗಳ ಕುರಿತು ನಡೆಸಿರುವ ಶಾಸನಬದ್ಧ ಲೆಕ್ಕ ಪರಿಶೋಧನೆಗೂ ಆರ್‌ಬಿಐ ತಪಾಸಣೆ ವರದಿ ಮಧ್ಯೆ ಭಾರೀ ವ್ಯತ್ಯಾಸಗಳು ಕಂಡು ಬಂದಿವೆ. ಎನ್‌ಪಿಎಗೆ ಸಂಬಂಧಿಸಿದಂತೆ ನಡೆದಿರುವ ಶಾಸನಬದ್ಧ ಲೆಕ್ಕ ಪರಿಶೋಧನೆಯನ್ನು ಬದಿಗೆ ಸರಿಸಿರುವ ಆರ್‌ಬಿಐ ತಪಾಸಣೆ ತಂಡ, ಹೆಚ್ಚಿನ ಮೊತ್ತ ಎನ್‌ಪಿಎ ಆಗಿರುವುದನ್ನು ಪತ್ತೆ ಹಚ್ಚಿದೆ. ಅದೇ ರೀತಿ ನಷ್ಟಕ್ಕೆ ಸಂಬಂಧಿಸಿದಂತೆ ಶಾಸನಬದ್ಧ ಲೆಕ್ಕ ಪರಿಶೋಧನೆ ನೀಡಿರುವ ವರದಿಯ ನೈಜತೆಯನ್ನು ಒರೆಗೆ ಹಚ್ಚಿದೆಯಲ್ಲದೆ ನಷ್ಟದ ಮೊತ್ತದಲ್ಲಿ ಹೆಚ್ಚಳವಾಗಿರುವುದನ್ನು ಬೆಳಕಿಗೆ ತಂದಿರುವುದು ವರದಿಯಿಂದ ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img