Sunday | September 13, 2026 |

ಅಮಾನವೀಯ ಅಂತ್ಯ ಸಂಸ್ಕಾರ; ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದರೂ ಚಾಟಿ ಬೀಸದ ಆಯೋಗ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಅಂತ್ಯ ಸಂಸ್ಕಾರ ಮಾಡುತ್ತಿರುವ ಪ್ರಕರಣಗಳು ಸಂಭವಿಸುತ್ತಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ ತನ್ನ ಭಂಡ ನಿರ್ಲಕ್ಷ್ಯವನ್ನು ಪ್ರದರ್ಶಿಸಿದೆ.

ಗೌರವಯುತ ಅಂತ್ಯ ಸಂಸ್ಕಾರಗಳು ಅತ್ಯಂತ ಪ್ರಮುಖವಾದ ಮಾನವ ಹಕ್ಕುಗಳು. ಇವುಗಳನ್ನು ರಾಜ್ಯದಲ್ಲಿ ದಿನನಿತ್ಯ ಉಲ್ಲಂಘಿಸಲಾಗುತ್ತಿದೆ. ಅಮಾನವೀಯ ಅಂತ್ಯ ಸಂಸ್ಕಾರ ಮಾಡುವ ಮೂಲಕ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದರೂ ರಾಜ್ಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಸರ್ಕಾರದ ವಿರುದ್ಧ ಈವರೆವಿಗೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.

ಅದಷ್ಟೇ ಅಲ್ಲ, ಕೊರೊನಾ ಸೋಂಕಿತರಿಗೆ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿಲ್ಲ. ಅಂಬುಲೆನ್ಸ್‌ಗಳ ಕೊರತೆ ತೀವ್ರವಾಗಿವೆಯಲ್ಲದೆ ಸೋಂಕಿತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು 2-3 ದಿನ ವಿಳಂಬವಾಗುತ್ತಿದೆ. ಸೂಕ್ತ ಸಮಯದಲ್ಲಿ ಅಂಬುಲೆನ್ಸ್‌ ಸಿಗದ ಕಾರಣ ಮನೆ ಬಾಗಿಲಲ್ಲೇ ಹಲವರು ಮೃತಪಟ್ಟಿದ್ದಾರೆ. ಅಂಬುಲೆನ್ಸ್‌ಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಮಾನವ ಹಕ್ಕುಗಳ ಆಯೋಗ ಚಾಟಿಯನ್ನೂ ಬೀಸಿಲ್ಲ.

ಆಯೋಗದ ಅಧ್ಯಕ್ಷರಾಗಿರುವ ಡಿ ಎಚ್‌ ವಘೇಲಾ ಅವರು ಈ ಹಿಂದೆ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿದ್ದವರು. ಅದೇ ರೀತಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ರೂಪಕ್‌ ಕುಮಾರ್‌ ದತ್ತ ಅವರು ಆಯೋಗದಲ್ಲಿ ಸದಸ್ಯರಾಗಿದ್ದವರು. ಕಾನೂನು ಸುವ್ಯವಸ್ಥೆ ಮತ್ತು ನ್ಯಾಯಾಂಗದಲ್ಲಿ ಉನ್ನತ ಸ್ಥಾನದಲ್ಲಿದ್ದವರೇ ಆಯೋಗದಲ್ಲಿದ್ದರೂ ಅಮಾನವೀಯ ರೀತಿಯಲ್ಲಿ ಅಂತ್ಯ ಸಂಸ್ಕಾರ ನಡೆಯುತ್ತಿದ್ದರೂ ಆಯೋಗದ ಕಚೇರಿಯಿಂದ ಹೊರಬರುತ್ತಿಲ್ಲ. ಕನಿಷ್ಠ ತುಟಿ ಬಿಚ್ಚುತ್ತಿಲ್ಲ, ಮುಖ್ಯ ಕಾರ್ಯದರ್ಶಿಗೆ ನೋಟೀಸ್‌ ಕೂಡ ಜಾರಿ ಮಾಡಿಲ್ಲ.

ಮೃತ ಅಂತ್ಯ ಸಂಸ್ಕಾರ ನಡೆಸುವ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದರೆ ಇವುಗಳು ಪರಿಣಾಮಕಾರಿಯಾಗಿ ಪಾಲನೆಯಾಗುತ್ತಿಲ್ಲ. ಮಾರ್ಗಸೂಚಿಗಳ ಪಾಲನೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶವನ್ನೂ ಹೊರಡಿಸಿಲ್ಲ. ಆದರೂ ಸರ್ಕಾರದಿಂದ ಈ ಕುರಿತು ವರದಿ ನೀಡುವಂತೆ ಆಯೋಗ ನಿರ್ದೇಶನ ನೀಡಿಲ್ಲ ಎಂದು ಗೊತ್ತಾಗಿದೆ.

ಆರೋಗ್ಯ ಸಚಿವ ಬಿ ಶ್ರೀರಾಮುಲು ತವರು ಜಿಲ್ಲೆ ಬಳ್ಳಾರಿಯಲ್ಲಿ ಮೃತಪಟ್ಟಿದ್ದ ಸೋಂಕಿತರ ಶವಗಳನ್ನು ವೈದ್ಯಕೀಯ ಸಿಬ್ಬಂದಿ ಗುಂಡಿಯಲ್ಲಿ ಬಿಸಾಡಿದ್ದರು. ಒಂದೇ ಗುಂಡಿಯಲ್ಲಿ ಹಲವು ಮೃತ ದೇಹಗಳನ್ನು ಮುಚ್ಚಿ ಹಾಕಿದ ಘಟನೆಗಳೂ ನಡೆದಿವೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನಲ್ಲಿ ಸೋಂಕಿತನ ಶವವನ್ನು ಜೆಸಿಬಿ ಯಂತ್ರದ ಮೂಲಕ ಮಣ್ಣು ಮಾಡಲಾಗಿತ್ತು. ಮಂಗಳೂರಿನಲ್ಲಿ ಸೋಂಕಿತನ ಶವದ ಅಂತ್ಯ ಸಂಸ್ಕಾರಕ್ಕೆ ಅಡ್ಡಿಯುಂಟಾಗಿತ್ತು. ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಸೋಂಕಿತನ ಶವ ಸಾಗಿಸಲು ಅಂಬುಲೆನ್ಸ್‌ ಸಿಗದ ಕಾರಣ ಮನೆ ಮುಂಬಾಗಿಲಲ್ಲೇ ಹಲವು ಗಂಟೆಗಳ ಕಾಲ ಇರಿಸಲಾಗಿತ್ತು. ಶವಗಳನ್ನು ಅರೆಬೆಂದ ಸ್ಥಿತಿಯಲ್ಲಿ ಬಿಟ್ಟು ಹೋಗಿದ್ದ ಕಾರಣ ನಾಯಿಗಳು ತಿಂದು ಹಾಕಿದ್ದ ಪ್ರಕರಣ ದಾವಣಗೆರೆ ನಗರದಲ್ಲಿ ವರದಿಯಾಗಿತ್ತು. ಬಸ್‌ ತಂಗುದಾಣವೊಂದರಲ್ಲಿ ಮೃತ ಶರೀರ ಬಿಟ್ಟು ಹೋಗಿದ್ದ ಪ್ರಕರಣ ವರದಿಯಾಗಿತ್ತು.

 

ಇಷ್ಟೆಲ್ಲಾ ಅಮಾನವೀಯ ಪ್ರಕರಣಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದರೂ ರಾಜ್ಯ ಮಾನವ ಹಕ್ಕುಗಳ ಆಯೋಗ ಗಮನಿಸಿಲ್ಲ. ಅಮಾನವೀಯ ಅಂತ್ಯ ಸಂಸ್ಕಾರ ಮಾಡುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img