Sunday | September 13, 2026 |

ವಸೂಲು ಮಾಡದೇ 66 ಕೋಟಿ ಬಾಕಿ ಉಳಿಸಿಕೊಂಡ ಬೆಂಗಳೂರು ವಿ ವಿ.; ಸಿಎಜಿ ಅಕ್ಷೇಪಣೆ

Support THE-FILE

spot_img

ಬೆಂಗಳೂರು; ವಿಶ್ವವಿದ್ಯಾಲಯಗಳಿಗೆ ಹಂಚಿಕೆಯಾಗುವ ಅನುದಾನ ಮತ್ತು ಬಳಕೆ ಮಾಡಿರುವ ವಿಧಾನದಲ್ಲಿ ಲೋಪಗಳಿಂದ ಉಂಟಾಗಿರುವ ನಷ್ಟ ಮತ್ತು ಹಣವನ್ನು ವಸೂಲು ಮಾಡುವ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯವು ಕಳೆದ 20-25 ವರ್ಷಗಳಿಂದಲೂ ಕೋಟ್ಯಂತರ ರುಪಾಯಿ ಬಾಕಿ ಉಳಿಸಿಕೊಳ್ಳುತ್ತಲೇ ಬಂದಿರುವುದು ಇದೀಗ ಬಹಿರಂಗವಾಗಿದೆ.

1990-91ರಿಂದ 2014-19ರವರೆಗೆ ಒಟ್ಟು 66,35,07,140 ಕೋಟಿ ರು.ಗಳನ್ನು ವಸೂಲು ಮಾಡಲು ಸಿಎಜಿ ವರದಿ ಸೂಚಿಸಿತ್ತು. ಅಲ್ಲದೆ 36,66,78,695 ರು.ಮೊತ್ತವನ್ನು ಆಕ್ಷೇಪಣೆಯಲ್ಲಿಟ್ಟಿದೆ.  ಬೆಂಗಳೂರು ವಿಶ್ವವಿದ್ಯಾಲಯವು  ವಸೂಲು ಮಾಡುವ ಗೋಜಿಗೆ ಹೋಗಿಲ್ಲ. ಈ ಕುರಿತು ವಿಶ್ವವಿದ್ಯಾಲಯದ ಕುಲಸಚಿವರು 2020ರ ಸೆ.9ರಂದು ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸಿಎಜಿ ವರದಿಯಲ್ಲಿ ಆಕ್ಷೇಪಣೆ ಕಂಡಿಕೆಗಳಿಗೆ ಉತ್ತರಿಸುವುದು ಮತ್ತು ಸೂಚಿಸಿರುವ ಹಣವನ್ನು ಕಾಲಮಿತಿಯೊಳಗೆ ವಸೂಲು ಮಾಡಬೇಕು. ಆದರೆ ಬೆಂಗಳೂರು ವಿಶ್ವವಿದ್ಯಾಲಯವೂ ಸೇರಿದಂತೆ ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಹತ್ತು ಹಲವು ವರ್ಷಗಳಿಂದಲೂ ಬಾಕಿ ಉಳಿಸಿಕೊಳ್ಳುತ್ತಲೇ ಬಂದಿವೆ. ಮಹಾಲೇಖಪಾಲರು ಈ ಕುರಿತು ವಿಶ್ವವಿದ್ಯಾಲಯಗಳಿಗೆ ಬರೆಯುವ ನೆನಪೋಲೆ ಪತ್ರಗಳಿಗೆ ವಿಶ್ವವಿದ್ಯಾಲಯದ ಅಧಿಕಾರಿಗಳು ಉತ್ತರಿಸುತ್ತಲೂ ಇಲ್ಲ, ಕ್ರಮ ಕೈಗೊಳ್ಳುತ್ತಿಲ್ಲ. ಅಧಿಕಾರಿಗಳ ಕರ್ತವ್ಯಲೋಪದಿಂದ ನಷ್ಟವಾಗಿರುವ ಕೋಟ್ಯಂತರ ರುಪಾಯಿ ವಿಶ್ವವಿದ್ಯಾಲಯದ ಬೊಕ್ಕಸಕ್ಕೆ ಜಮೆಯಾಗುತ್ತಿಲ್ಲ.

ಈ ಕುರಿತು ಉನ್ನತ ಶಿಕ್ಷಣದ ಹಾಲಿ ಸಚಿವ ಡಾ ಸಿ ಎನ್‌ ಅಶ್ವಥ್‌ ನಾರಾಯಣ್‌ ಮತ್ತು ಹಿಂದಿನ ಸಚಿವರು, ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದ ಪ್ರಧಾನ ಕಾರ್ಯದರ್ಶಿಗಳು, ಕುಲಪತಿಗಳು, ಕುಲಸಚಿವರು ಬಿಗಿಯಾದ ಕ್ರಮ ಕೈಗೊಳ್ಳದ ಕಾರಣದಿಂದಾಗಿಯೇ ಕೋಟ್ಯಂತರ ರುಪಾಯಿ ಬಾಕಿ ಉಳಿದುಕೊಂಡಿದೆ ಎನ್ನಲಾಗಿದೆ.

 

ಈ ಪೈಕಿ ಬೆಂಗಳೂರು ವಿಶ್ವವಿದ್ಯಾಲಯವು ಕೇವಲ 49ಕಂಡಿಕೆಗಳಿಗೆ ಕಂಡಿಕೆವಾರು ಪರಿಷ್ಕೃತ ಉತ್ತರಗಳನ್ನು 2020ರ ಆಗಸ್ಟ್‌ 18ರಂದು ಸಲ್ಲಿಸಿದೆ. 13 ಕಂಡಿಕೆಗಳಿಗೆ ವಜಾಪಟ್ಟು (Write Off) ಪ್ರಸ್ತಾವನೆಯನ್ನು ಸಲ್ಲಿಸಿರುವುದು ಪತ್ರದಿಂದ ತಿಳಿದು ಬಂದಿದೆ. ‘1990-91ರಿಂದ 2013-14ರವರೆಗಿನ ಇನ್ನೂ ಬಾಕಿಯಿರುವ 20-25 ವರ್ಷಗಳ ತುಂಬಾ ಹಳೆಯ 48 ಕಂಡಿಕೆಗಳಿಗೆ ಸಂಬಂಧಪಟ್ಟ ವಿಭಾಗಗಳಿಂದ ಕಂಡಿಕೆವಾರು ಉತ್ತರಗಳನ್ನು ಪಡೆದು ಮಹಾಲೇಖಪಾಲರಿಗೆ ಸಲ್ಲಿಸುವ ಕ್ರಮ ವಹಿಸಲಾಗುವುದು,’ ಎಂದು ಕುಲಸಚಿವರು ಪತ್ರದಲ್ಲಿ ಇಲಾಖೆ ಮುಖ್ಯಸ್ಥರಿಗೆ ತಿಳಿಸಿದ್ದಾರೆ.

ವಸೂಲು ಆಗಬೇಕಿರುವುದೆಷ್ಟು?

1990-91ರಿಂದ 1993-94ರವರೆಗೆ 1,19,954 ರು., 1994-95ರಲ್ಲಿ 63,28,545 ರು., 1995-98ರಲ್ಲಿ 1,83,5,642 ರು., 1998-2002ರಲ್ಲಿ 10,82,31,655 ರು., 2002-08ರಲ್ಲಿ 3,47,20,071 ರು., 2008-09ರಿಂದ 2012-13ರಲ್ಲಿ 15,38,86,097 ರು., 2013-14ರಲ್ಲಿ 21,30,39,000 ರು., 2014-15ರಿಂದ 2018-19ರವರೆಗೆ 14,53,46,176 ರು. ಸೇರಿದಂತೆ ಒಟ್ಟು 66,35,07,140 ರು.ಗಳು ವಸೂಲಾಗಬೇಕಿತ್ತು.

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಮಹಾಲೇಖಪಾಲರು 2020ರ ಮೇ 6ರಂದು ಪತ್ರ ಬರೆದಿದ್ದರು. 2014-15ರಿಮದ 2018-19ರವರೆಗಿನ ಲೆಕ್ಕಪತ್ರ ತಪಾಸಣೆ ಪರವಿವೀಕ್ಷಣ ವರದಿ ಸಲ್ಲಿಸಲು ಸೂಚಿಸಿದ್ದರಲ್ಲದೆ ವರದಿ ತಲುಪಿದ ಒಂದು ತಿಂಗಳೊಳಗಾಗಿ ಅನುಸರಣಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಅಲ್ಲದೆ 1990-91ರಿಂದ 2013-14ನೇ ಸಾಲಿನವರೆಗೂ ತೀರುವಳಿಯಾಗದೇ ಬಾಕಿ ಉಳಿದಿರುವ 110 ಕಂಡಿಕೆಗಳಿಗೆ ಉತ್ತರವನ್ನು ಸಲ್ಲಿಸಲು ಸೂಚಿಸಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img