Wednesday | June 17, 2026 |

ಅಶೋಕ್‌ಕುಮಾರ್‌ ಆತ್ಮಹತ್ಯೆ ; ಗುಲ್ಬರ್ಗಾ ವಿ.ವಿ.ಗೆ ಶಿಫಾರಸ್ಸಾಗಿರುವ ಪ್ರಾಧ್ಯಾಪಕರ ಬೆದರಿಕೆಗೆ ಅಂಜಿದ್ದರೇ?

Support THE-FILE

spot_img

ಬೆಂಗಳೂರು; ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಶಿಫಾರಸ್ಸಾಗಿರುವ ಸಂಘ ಪರಿವಾರದ ನಂಟು ಹೊಂದಿರುವ ಪ್ರಾಧ್ಯಾಪಕರೊಬ್ಬರು ಪ್ರೊ. ಅಶೋಕ್‌ಕುಮಾರ್‌ ಅವರಿಗೆ ಕುಲಪತಿ ಹುದ್ದೆ ದೊರಕಿಸಿಕೊಡುವುದಾಗಿ ನಂಬಿಸಿ ಹಣ ಪಡೆದು ಆ ನಂತರ ಹಣ ನೀಡದೇ ಬೆದರಿಸಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಶೋಕ್‌ಕುಮಾರ್‌ ಅವರ ಆತ್ಮಹತ್ಯೆ ಪ್ರಕರಣ ವಿಶ್ವವಿದ್ಯಾಲಯದ ಅಂಗಳದಲ್ಲಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಪ್ರಭಾವಿ ಪ್ರಾಧ್ಯಾಪಕರೊಬ್ಬರು ಮಾಡಿದ್ದಾರೆ ಎನ್ನಲಾಗಿರುವ ವಂಚನೆಯೂ ಮುನ್ನೆಲೆಗೆ ಬಂದಿದೆ. ಪ್ರಕರಣ ನಡೆದ 2 ದಿನಗಳ ನಂತರ ಹೊರಬಿದ್ದಿರುವ ಮಾಹಿತಿ, ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದಂತಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಪ್ರಭಾವಿ ಪ್ರಾಧ್ಯಾಪಕ ಅಶೋಕ್‌ಕುಮಾರ್‌ ಅವರ ಸಹದ್ಯೋಗಿ ಮಾತ್ರವಲ್ಲದೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಆಗಿಯೂ ಕಾರ್ಯನಿರ್ವಹಿಸಿದ್ದರು ಎನ್ನಲಾಗಿದೆ.

ಸಂಘ ಪರಿವಾರದದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಆ ಪ್ರಾಧ್ಯಾಪಕರೇ 4 ವಿಶ್ವವಿದ್ಯಾಲಯಗಳ ಪೈಕಿ ಯಾವುದಾದಾರೂ ಒಂದು ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಹೇಳಿ ಅಶೋಕ್‌ಕುಮಾರ್‌ ಅವರನ್ನು ನಂಬಿಸಿ ಹಣವನ್ನು ಪಡೆದಿದ್ದರು ಎಂಬ ಮಾತುಗಳು ವಿಶ್ವವಿದ್ಯಾಲಯದ ಅಂಗಳದಲ್ಲಿ ಹರಿದಾಡುತ್ತಿವೆ.

4 ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂದು ಖಚಿತಪಡಿಸಿಕೊಂಡಿದ್ದರು. ಆ ನಂತರ ಅಶೋಕ್‌ಕುಮಾರ್‌ ಅವರು ಹಣವನ್ನು ವಾಪಸ್‌ ಕೇಳಿದ್ದರು. ಆದರೆ ಹಣ ವಾಪಸ್‌ ಕೊಡಲು ನಿರಾಕರಿಸಿದ್ದರು ಎನ್ನಲಾಗಿರುವ ಆ ಪ್ರಾಧ್ಯಾಪಕ, ಅಶೋಕ್‌ಕುಮಾರ್‌ ಅವರನ್ನೇ ಬೆದರಿಸಿದ್ದರು. ಪ್ರಕರಣವೊಂದರಲ್ಲಿ ಹಾಕಲಾಗಿದ್ದ ಬಿ ರಿಪೋರ್ಟ್‌ ವರದಿಗೆ ಮರು ಜೀವ ಕೊಡಲಾಗುವುದು ಎಂದು ಬೆದರಿಸಿದ್ದರು ಎಂದು ಅವರ ಆಪ್ತರೊಬ್ಬರು ‘ದಿ ಫೈಲ್‌’ಗೆ ಮಾಹಿತಿ ನೀಡಿದ್ದಾರೆ.

ಅತ್ತ ಹಣವೂ ಇಲ್ಲ, ಇತ್ತ ಕುಲಪತಿ ಹುದ್ದೆಯೂ ಇಲ್ಲ ಎಂಬಂತಾಗಿದ್ದ ಸಂದರ್ಭದಲ್ಲೇ ಆ ಪ್ರಾಧ್ಯಾಪಕ ಒಡ್ಡಿದ್ದ ಬೆದರಿಕೆಯಿಂದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಪ್ತರೊಬ್ಬರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದೆಲ್ಲದರ ಮಧ್ಯೆಯೇ ಪೆನುಗೊಂಡ ಜಮೀನು ಪ್ರಕರಣವೂ ಅಶೋಕ್‌ಕುಮಾರ್‌ ಆವರ ಆತ್ಮಹತ್ಯೆ ಪ್ರಕರಣದ ಜತೆಗೆ ಥಳಕು ಹಾಕಿಕೊಂಡಿದೆ. ಅಶೋಕ್‌ಕುಮಾರ್‌ ಅವರು ಹೂಡಿಕೆ ಮಾಡಿದ್ದರು ಎನ್ನಲಾಗಿರುವ ಆಂಧ್ರದ ಪೆನುಗೊಂಡ ಬಳಿ 160 ಎಕರೆ ಜಮೀನಿನ ಪ್ರಕರಣದಲ್ಲಿ ವಂಚನೆಗೊಳಗಾಗಿ ಕಂಗೆಟ್ಟಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ.

ಹಣ ಕೊಟ್ಟರೂ ಕುಲಪತಿ ಹುದ್ದೆ ಲಭಿಸಲಿಲ್ಲ ಎಂಬುದು ಆತ್ಮಹತ್ಯೆಗೆ ತಕ್ಷಣದ ಕಾರಣವಾಗಿರಬಹುದಾದರೂ ಹಿಂದಿನ ರಾಜ್ಯಪಾಲರಿಗೆ ನಿಕಟವರ್ತಿ ಎಂದು ಹೇಳಲಾಗಿರುವ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಪೆನುಗೊಂಡ ಬಳಿ 160 ಎಕರೆ ಜಮೀನಿನ ಮೇಲೆ ಅಶೋಕ್‌ಕುಮಾರ್‌ ಅವರಿಂದ ಹೂಡಿಕೆ ಮಾಡಿಸಿ, ಆ ನಂತರ ವಂಚನೆಗೈದಿದ್ದು ಕೂಡ ಆತ್ಮಹತ್ಯೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ಆದರೆ ಈ ಯಾವ ಮಾಹಿತಿಗಳನ್ನು ಕುಟುಂಬ ಸದಸ್ಯರ ಬಳಿ ಹಂಚಿಕೊಳ್ಳದೇ ಗೌಪ್ಯವಾಗಿರಿಸಿದ್ದರು ಎಂದು ತಿಳಿದು ಬಂದಿದೆ.

ಜಮೀನು ಮಾರಾಟ ಮಾಡಿಸಲು ನಿಕಟವರ್ತಿಗಳ ಬಳಿ ಅಶೋಕ್‌ಕುಮಾರ್‌ ಮಾತುಕತೆ ನಡೆಸಿದ್ದರು. ಜಮೀನು ಮಾರಾಟ ವಿಳಂಬವಾಗಿದ್ದರಿಂದಾಗಿ ಅವರು ಕಂಗೆಟ್ಟಿದ್ದರು ಎಂದು ಹೇಳಲಾಗುತ್ತಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img