Monday | June 15, 2026 |

ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ; ತರಾತುರಿಯ ಶಿಫಾರಸ್ಸು

Support THE-FILE

spot_img

ಬೆಂಗಳೂರು; ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ಲಿಂಗಾಯತ ಮತ ಬ್ಯಾಂಕ್‌ನ್ನು ಬಲಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೀಗ ಇನ್ನೂ ಒಂದು ಹೆಜ್ಜೆ ಮುಂದಡಿ ಇಟ್ಟಿದ್ದಾರೆ. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಲು ಮುಂದಾಗಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ರಾಜಕೀಯ ಚಟುವಟಿಕೆಗಳು  ಬಿರುಸುಪಡೆದುಕೊಂಡಿವೆ. ಈ ನಡುವೆಯೇ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆಗೊಳಿಸಲು ಮಾಡಲಿರುವ ಶಿಫಾರಸ್ಸು, ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.

ಒಂದು ವೇಳೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಸಲು ಹೈಕಮಾಂಡ್‌ ನಿರ್ಧರಿಸಿದ್ದರೇ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ನಾಯಕರ ವಿರುದ್ಧ ಎತ್ತಿಕಟ್ಟುವ ಹುನ್ನಾರವೂ ಅಡಗಿದೆ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಂಪುಟದ ಅನುಮೋದನೆಗೆ ತರಾತುರಿಯಲ್ಲಿ (ಹಿಂವಿ ಸಿ 609/2020) ಪ್ರಸ್ತಾವನೆ ಸಲ್ಲಿಸಿದೆ. ನಾಳೆ ನಡೆಯಲಿರುವ ಸಚಿವ ಸಂಪುಟದ ಅನುಮೋದನೆಯೂ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಸಚಿವ ಸಂಪುಟದ ಕಾರ್ಯಸೂಚಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಕೂಡ ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಮುಂದೆ ಪ್ರತಿಪಾದಿಸಿತ್ತು. ಲಿಂಗಾಯತ ಸಮುದಾಯದಲ್ಲಿ ಒಟ್ಟು 102 ಜಾತಿಗಳನ್ನು ಗುರುತಿಸಲಾಗಿದೆ. ಅದರಲ್ಲಿ ಈಗಾಗಲೇ 30 ಜಾತಿಗಳು ಒಬಿಸಿ ಪಟ್ಟಿಯಲ್ಲಿವೆ. ಒಬಿಸಿ ಪಟ್ಟಿಗೆ ಸೇರಿಸುವುದಾದರೆ ಉಳಿದ 72 ಜಾತಿಗಳನ್ನು ಸೇರಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾದರೆ ಲಿಂಗಾಯತ ಶಿರೋನಾಮೆಯಲ್ಲೇ ಕೊಡಬೇಕು ಎಂದು ಮಹಾಸಭಾ ಹಕ್ಕೊತ್ತಾಯ ಮಂಡಿಸಿತ್ತು.

ಆದರೀಗ ಬಿಜೆಪಿ ಸರ್ಕಾರವು ಲಿಂಗಾಯತ ಶಿರೋನಾಮೆಯಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದೆಯೇ ವೀರಶೈವ ಹೆಸರನ್ನೂ ಸೇರ್ಪಡೆಗೊಳಿಸಿರುವುದು ಜಾಗತಿಕ ಲಿಂಗಾಯತ ಮಹಾಸಭಾದ ಕೆಂಗಣ್ಣಿಗೂ ಗುರಿಯಾಗುವ ಸಾಧ್ಯತೆಗಳಿವೆ.

ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಲ್ಲೇ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮುದಾಯ ಪ್ರತಿನಿಧಿಗಳು ಪ್ರತಿಭಟನೆ ನಡೆಸಿದ್ದನ್ನು ಸ್ಮರಿಸಬಹುದು.
ಲಿಂಗಾಯತ ಸಮುದಾಯದಲ್ಲಿ ನಮಗೆ ಅಲ್ಪಸಂಖ್ಯಾತ ಸ್ಥಾನಮಾನ ಬೇಡ ಆದರೆ ಮೀಸಲಾತಿ ಬೇಕಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಸಮುದಾಯದವರನ್ನು ಗುರುತಿಸಿ ಮೀಸಲಾತಿ ನೀಡಬೇಕು, ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಮರಾಠಿಗರಿಗೆ ನೀಡಿರುವ ರೀತಿಯಲ್ಲಿ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೂ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img