Tuesday | September 15, 2026 |

ವಾಜೀದ್‌ ಖಾನ್‌,ರಮ್ಯಾ ವಿವಾಹ;ವೈಯಕ್ತಿಕ ಸಂಬಂಧ ಸ್ವಾತಂತ್ರ್ಯವನ್ನು ಅತಿಕ್ರಮಿಸುವಂತಿಲ್ಲ

Support THE-FILE

spot_img

ಬೆಂಗಳೂರು; ಯಾವುದೇ ಪ್ರಾಪ್ತ ವಯಸ್ಕ ವ್ಯಕ್ತಿಯು ಅವನ / ಅವಳ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕು, ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕಾಗಿದೆ ಎಂದು ನ್ಯಾಯಮೂರ್ತಿಗಳಾದ ಎಸ್.ಸುಜಾತ ಮತ್ತು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದುಮ್ ಅವರಿದ್ದ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಲವ್‌ ಜಿಹಾದ್‌ಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರ ಮುಂದುವರೆಯುತ್ತಿರುವ ಮಧ್ಯೆಯೇ ಕರ್ನಾಟಕ ಹೈಕೋರ್ಟ್‌ ಪಟ್ಟಿರುವ ಅಭಿಪ್ರಾಯ ಮಹತ್ವ ಪಡೆದುಕೊಂಡಿದೆ. ಇಬ್ಬರು ವ್ಯಕ್ತಿಗಳ ವೈಯಕ್ತಿಕ ಸಂಬಂಧಗಳಿಗೆ ಸಂಬಂಧಿಸಿದ ಸ್ವಾತಂತ್ರ್ಯವನ್ನು ಯಾರೂ ಅತಿಕ್ರಮಿಸುವಂತಿಲ್ಲ ಎಂದು ಹೇಳಿದೆ.

ಹೈಕೋರ್ಟ್‌ ಅಭಿಪ್ರಾಯವಿದು

ತನ್ನ ಪ್ರೇಮಿ ರಮ್ಯಾಳನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಕೋರಿ ವಾಜೀದ್ ಖಾನ್‌ ಎಂಬುವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಲೇವಾರಿ ಮಾಡುವಾಗ ನ್ಯಾಯಪೀಠವು “ಯಾವುದೇ ಪ್ರಾಪ್ತ ವಯಸ್ಕ ವ್ಯಕ್ತಿಯು ಅವನ/ಅವಳ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕಾಗಿದೆ ಮತ್ತು ಇಬ್ಬರು ವ್ಯಕ್ತಿಗಳ ವೈಯಕ್ತಿಕ ಸಂಬಂಧಗಳಿಗೆ ಸಂಬಂಧಿಸಿದ ಸ್ವಾತಂತ್ರ್ಯವನ್ನು ಯಾರೊಬ್ಬರೂ ಅತಿಕ್ರಮಿಸುವಂತಿಲ್ಲ” ಎಂದು ಅಭಿಪ್ರಾಯಪಟ್ಟಿತು.

ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ರಮ್ಯಾ ಅವರು, ತಾನು ಪ್ರಸ್ತುತ ವಿದ್ಯಾರಣ್ಯಪುರದ ಮಹಿಳಾ ದಕ್ಷ ಸಮಿತಿಯಲ್ಲಿ ತಂಗಿದ್ದೇನೆ ಎಂದು ತಿಳಿಸಿದರು. ಅಲ್ಲದೇ ಆಕೆಯ ಪೋಷಕರು, ಅರ್ಜಿದಾರರೊಂದಿಗಿನ ಅವಳ ಮದುವೆಗೆ ಸಂಬಂಧಿಸಿದಂತೆ ಆಕೆಯ ವೈಯಕ್ತಿಕ ಸ್ವಾತಂತ್ರ್ಯ ಹಕ್ಕನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಆಕೆ ಜನೋದಯ ಸಾಂತ್ವಾನಾ ಕೇಂದ್ರಕ್ಕೆ ದೂರಿನ ನೀಡಿರುವುದಾಗಿ ತಿಳಿಸಿದರು. ತನ್ನ ಸಹೋದ್ಯೋಗಿಯಾಗಿರುವ ಅರ್ಜಿದಾರರನ್ನು ಮದುವೆಯಾಗಲು ನಿರ್ಧರಿಸಿದ್ದೇನೆ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರಲ್ಲದೆ, ಅರ್ಜಿದಾರರ ತಾಯಿಯು ತನ್ನ ಮಗ, ತನ್ನೊಂದಿಗೆ ಮದುವೆಯಾಗಲು ಯಾವುದೇ ಆಕ್ಷೇಪಣೆಗಳನ್ನು ಹೊಂದಿಲ್ಲ. ಆದರೆ, ತನ್ನ ಪೋಷಕರು ಈ ಮದುವೆಗೆ ಒಪ್ಪಿಗೆ ನೀಡುತ್ತಿಲ್ಲ ಎಂದು ಸಹಾ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

ನ್ಯಾಯಪೀಠವು “ಹೇಬಿಯಸ್ ಕಾರ್ಪಸ್ ವ್ಯಕ್ತಿಯನ್ನು ಹಾಜರುಪಡಿಸಲು ಸೀಮಿತವಾಗಿದೆ ಮತ್ತು ಅವಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ, ಅವಳ ಹೇಳಿಕೆಯನ್ನು ಸಹಾ ಮೇಲ್ಕಂಡಂತೆ ದಾಖಲಿಸಲಾಗಿದೆ, ಹಾಗಾಗಿ ರಿಟ್ ಅರ್ಜಿಯನ್ನು ವಿಲೇವಾರಿ ಮಾಡುತ್ತೇವೆ” ಎಂದು ನ್ಯಾಯಪೀಠವು ತಿಳಿಸಿತು.

ಅಲ್ಲದೇ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರಮ್ಯಾ, ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿಳಿಸಿದ ನ್ಯಾಯಪೀಠವು ನ್ಯಾಯಾಲಯವು ಮಹಿಳಾ ದಕ್ಷತಾ ಸಮಿತಿಗೆ ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶಿಸಿತು.

ವಾಕ್ಸಮರಕ್ಕೆ ಕಾರಣವಾದ ಲವ್‌ ಜಿಹಾದ್‌

ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ.ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ. ಇದು ವಿವೇಕ- ವಿವೇಚನೆಯಿಲ್ಲದೆ ರಚನೆಯಾದ ಕಾನೂನು. ಹಿಂದೂ ಮುಸ್ಲಿಂನನ್ನು, ಮುಸ್ಲಿಂ ಹಿಂದೂವನ್ನು ಮದುವೆಯಾಗುವಂತಿಲ್ಲ ಎಂಬ ನಿಯಮ ರೂಪಿಸುವುದು ತಪ್ಪು ಎಂದು ಸಿದ್ದರಾಮಯ್ಯ ಅವರು ಹೇಳಿದ್ದನ್ನು ಸ್ಮರಿಸಬಹುದು.

ಹಿಂದೆ ಮೊಘಲರ ಆಳ್ವಿಕೆ ಕಾಲದಲ್ಲಿ ಸಾಕಷ್ಟು ಅಂತರ್ಧರ್ಮೀಯ ವಿವಾಹವಾಗಿವೆ. ಹಿಂದೂ ಮುಸ್ಲಿಂ ದಂಪತಿ ಗಳಿಗೆ ಜನಿಸಿರುವ ಸಾಕಷ್ಟು ಮಂದಿ ಇದ್ದರು. ಇಂಥಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ ಎಂದು ತಿರುಗೇಟು ನೀಡಿದ್ದಾರೆ.

ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ. ಆದರೂ ಇಂತದ್ದೊಂದು ಕೆಲಸಕ್ಕೆ ಸರ್ಕಾರ ಕೈಹಾಕಿದೆ ಅಂದರೆ ಅದು ದುರುದ್ದೇಶದಿಂದ ಕೂಡಿದ ಕೆಲಸವಲ್ಲದೆ ಬೇರೇನು? ಸಮಾಜದ ಶಾಂತಿ ಕದಡಬೇಕು ಎಂಬ ಬಿಜೆಪಿಯವರ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img