Tuesday | September 15, 2026 |

ಗಾಂಜಾ ಸರಬರಾಜು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಕೆ

Support THE-FILE

spot_img

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿಯನ್ನು ಗೃಹ ಇಲಾಖೆ ಕಡೆಗೂ ಸಲ್ಲಿಸಿದೆ.

ಕಾರಾಗೃಹ ಇಲಾಖೆಯಲ್ಲಿನ ಆಂತರಿಕ ನಿಯಂತ್ರಣ ವ್ಯವಸ್ಥೆಯ ಕುರಿತಾದ ಅನುಪಾಲನಾ ಲೆಕ್ಕಪರಿಶೋಧನೆ ಕುರಿತು ಅನುಸರಣಾ ವರದಿ ಸಲ್ಲಿಸದ ಒಳಾಡಳಿತ ಇಲಾಖೆಯ ವಿಳಂಬದ ಬಗ್ಗೆ ‘ದಿ ಫೈಲ್‌’ ವರದಿ ಪ್ರಕಟಿಸಿದ ಒಂದು ತಿಂಗಳ ನಂತರ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಒಳಾಡಳಿತ ಇಲಾಖೆಯ ಕಾರ್ಯದರ್ಶಿಗೆ 2020ರ ಅಕ್ಟೋಬರ್ 14ರಂದು ಪತ್ರ ಬರೆದಿತ್ತು.

ಒಳಾಡಳಿತ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ ರೂಪ ಮೌದ್ಗಿಲ್‌ ಅವರು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅನುಸರಣಾ ವರದಿಯನ್ನು ಸಲ್ಲಿಸಿದ್ದಾರೆ ಎಂದು ಗೃಹ ಇಲಾಖೆಯ ಉನ್ನತ ಮೂಲಗಳು ‘ದಿ ಫೈಲ್‌’ಗೆ ಖಚಿತಪಡಿಸಿವೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು 2020ರ ಮಾರ್ಚ್‌ 10ರಂದು ಉಭಯ ಸದನಗಳಿಗೆ ವರದಿ ಮಂಡಿಸಿದ್ದರು. ಸದನಕ್ಕೆ ವರದಿ ಮಂಡನೆಯಾದ 6 ತಿಂಗಳೊಳಗೆ ಸಂಬಂಧಿಸಿದ ಇಲಾಖೆಯು ಅನುಸರಣಾ ವರದಿಯನ್ನು ಸಮಿತಿಗೆ ಸಲ್ಲಿಸಬೇಕು. ಆದರೆ ಒಳಾಡಳಿತ ಇಲಾಖೆಯು ಕಾಲಮಿತಿಯೊಳಗೆ ಅನುಸರಣಾ ವರದಿ ಸಲ್ಲಿಸಿರಲಿಲ್ಲ. ಡಿ ರೂಪಾ ಅವರು ಗೃಹ ಇಲಾಖೆಗೆ ಕಾರ್ಯದರ್ಶಿಯಾದ ನಂತರವೂ ವರದಿ ಸಲ್ಲಿಕೆಯಾಗಿರಲಿಲ್ಲ. ಈ ಕುರಿತು ‘ದಿ ಫೈಲ್‌’ ಸೆ.14ರಂದು ವರದಿ ಪ್ರಕಟಿಸಿತ್ತು.

ಜೈಲುಗಳಿಗೆ ಗಾಂಜಾ, ಮಾದಕ ವಸ್ತುಗಳ ಪ್ರವೇಶ; ಸಲ್ಲಿಕೆಯಾಗದ ಅನುಸರಣಾ ವರದಿ

ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ 15ನೇ ವಿಧಾನಸಭೆಯ 2ನೇ ವರದಿಯನ್ನು 2020ರ ಮಾರ್ಚ್‌ 10ರಂದು ವಿಧಾನಮಂಡಲದಲ್ಲಿ ಮಂಡಿಸಲಾಗಿದ್ದು, ವರದಿಯಲ್ಲಿನ ಸಮಿತಿಯ ಶಿಫಾರಸ್ಸುಗಳಿಗೆ ಇಲಾಖೆಯು ಕೈಗೊಂಡ ಕ್ರಮಗಳ ಬಗ್ಗೆ ಇದುವರೆವಿಗೂ ಅನುಸರಣಾ ವರದಿಯು ಈ ಸಚಿವಾಲಯದಲ್ಲಿ ಸ್ವೀಕೃತವಾಗಿಲ್ಲ. ಹೀಗಾಗಿ ಅನುಸರಣಾ ವರದಿಯನ್ನು ಸಮಿತಿಗೆ ತಲುಪಿಸಬೇಕು,’ ಎಂದು ವಿಧಾನಸಭೆ ಕಾರ್ಯದರ್ಶಿ ಪತ್ರದಲ್ಲಿ ನಿರ್ದೇಶಿಸಿದ್ದರು.

ಜೈಲುಗಳಿಗೆ ಗಾಂಜಾ ಸರಬರಾಜು; ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಸಲು ನಿರ್ದೇಶನ

ಲೆಕ್ಕಪತ್ರ ಸಮಿತಿಯ ವರದಿಯಲ್ಲೇನಿದೆ?

ರಾಜ್ಯದ ಕಾರಾಗೃಹಗಳಲ್ಲಿ ನಿಷೇಧಾತ್ಮಕ ವಸ್ತುಗಳ ಪ್ರವೇಶವನ್ನು ಪತ್ತೆ ಹಚ್ಚುವುದು, ತಡೆಗಟ್ಟುವುದು, ಕಣ್ಗಾವಲಿಗೆ, ಕೈಯಲ್ಲಿ ಹಿಡಿಯುವ ಲೋಹ ಪತ್ತೆಕಾರಿಗಳು, ಲೋಹ ಪತ್ತೆಕಾರಿಗಳು ಸೇರಿದಂತೆ ಇನ್ನಿತರೆ ಸಾಧನಗಳನ್ನು ಅಧಿಕಾರಿಗಳು ಬಳಸಿರಲಿಲ್ಲ. ಹೀಗಾಗಿ ಕಾರಾಗೃಹಗಳಲ್ಲಿ ಗಾಂಜಾ, ಅಫೀಮು, ತಂಬಾಕು, ಮಾದಕ ವಸ್ತುಗಳು ಸುಲಭವಾಗಿ ಪ್ರವೇಶಿಸಿದ್ದವು ಎಂದು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು (2014-15) ವರದಿ ಪತ್ತೆ ಹಚ್ಚಿತ್ತು.

‘ಮಾದಕ ವಸ್ತುಗಳು, ಮೊಬೈಲ್‌ ಫೋನ್‌, ಸಿಮ್‌ ಕಾರ್ಡ್‌ಗಳು ಕಾರಾಗೃಹಗಳಲ್ಲಿ ಅಪಾರ ಪ್ರಮಾಣದಲ್ಲಿ ಪತ್ತೆಯಾಗಿರುವುದಕ್ಕೆ ಸಮಿತಿಯು ತೀವ್ರ ಅತೃಪ್ತಿ ವ್ಯಕ್ತಪಡಿಸುತ್ತದೆ. ನಿಷೇಧಿತ ವಸ್ತುಗಳು ಕಾರಾಗೃಹಗಳನ್ನು ಪ್ರವೇಶಿಸದಂತೆ ತಡೆಯಲು ನಿಗದಿಪಡಿಸಿರುವ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದೆ ಅಂತಹ ವಸ್ತುಗಳ ಪ್ರವೇಶಕ್ಕೆ ಜವಾಬ್ದಾರರಾದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು,’ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಶಿಫಾರಸ್ಸು ಮಾಡಿತ್ತು.

ರಾಜ್ಯದ ಎಲ್ಲಾ ಕಾರಾಗೃಹಗಳ ಮುಖ್ಯಸ್ಥರು ಪ್ರತಿನಿತ್ಯ ತಪಾಸಣೆ ನಡೆಸಿ ಅಕ್ರಮವಾಗಿ ನಿಷೇಧಿತ ವಸ್ತುಗಳ ಬಳಕೆ/ಬಳಕೆಯಾಗದಿರುವ ಬಗ್ಗೆ ಕೇಂಧ್ರ ಕಚೇರಿಗೆ ದೃಢೀಕೃತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಇಲಾಖಾ ಮುಖ್ಯಸ್ಥರಿಗೆ ಸಮಿತಿಯು ಸೂಚಿಸಿತ್ತು.

ಕಾರಾಗೃಹಗಳಲ್ಲಿನ ಮಾದಕ ವಸ್ತುಗಳನ್ನು ಮತ್ತು ಮಾದಕ ವ್ಯಸನಿಗಳನ್ನು ಪತ್ತೆ ಹಚ್ಚಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಕೇಂದ್ರ ಸರ್ಕಾರವು 2010ರಲ್ಲೇ ಸೂಚಿಸಿತ್ತು. ಆದರೆ ಕರ್ನಾಟಕ ಕಾರಾಗೃಹಗಳ ಇಲಾಖೆಯು ಆ ಸೂಚನೆಗಳನ್ನು ಪಾಲಿಸಿರಲಿಲ್ಲ. ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಬೀದರ್‌, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ ಕಾರಾಗೃಹಗಳಲ್ಲಿನ ಅನಿರೀಕ್ಷಿತ ತಪಾಸಣೆಗಳನ್ನೂ ನಡೆಸಿರಲಿಲ್ಲ.

‘ಕಾರಾಗೃಹಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮಾದಕ ವಸ್ತುಗಳು, ಮೊಬೈಲ್‌ಗಳು, ಸಿಮ್‌ ಕಾರ್ಡ್‌ಗಳು, ಪೆನ್‌ಡ್ರೈವ್‌ಗಳು, ಸ್ಕ್ರೂ ಡ್ರೈವರ್‌ಗಳ ಕುರಿತು ಇಲಾಖೆ ನಡೆಸುತ್ತಿರುವ ವಿಚಾರಣೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಬೇಕು. ಅಲ್ಲದೆ ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಆ ಬಗ್ಗೆ ವರದಿಯನ್ನು ಜರೂರಾಗಿ ನೀಡಬೇಕು,’ ಎಂದು ಸಮಿತಿ ನಿರ್ದೇಶಿಸಿತ್ತು.

ಮೈಸೂರು, ಧಾರವಾಡ, ಬಳ್ಳಾರಿ ಮತ್ತು ಬೆಂಗಳೂರು ಕಾರಾಗೃಹಗಳಲ್ಲಿ ಮೊಬೈಲ್‌ ಜಾಮರ್‌ ಅಳವಡಿಸಲು 28.28 ಕೋಟಿ ರು. ಅನುದಾನ ಒದಗಿಸಲಾಗಿತ್ತು. ಈ ಪೈಕಿ 86.05 ಲಕ್ಷ ವೆಚ್ಚ ಮಾಡಿದ್ದರೂ 2012ರ ಮೇ ತಿಂಗಳಿನಿಂದಲೇ ಮೊಬೈಲ್‌ ಜಾಮರ್‌ಗಳು ಉಪಯೋಗಿಸುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಸಿಎಜಿ ವರದಿ ಮಾಡಿತ್ತು.

ಇದಲ್ಲದೆ ವಿಚಾರಣಾಧೀನ ಕೈದಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವುದು, ಅಭಿರಕ್ಷಣೆಯಿಂದ ತಪ್ಪಿಸಿಕೊಂಡ ಕೈದಿಗಳು, ವೈದ್ಯಕೀಯ ಸೌಲಭ್ಯಗಳು, ಸಂದರ್ಶಕರ ಮಂಡಳಿ ರಚನೆ ಸೇರಿದಂತೆ ಕಾರಾಗೃಹಗಳಲ್ಲಿ ಹಲವು ಸುಧಾರಣೆಗಳ ಕುರಿತು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸಮಿತಿಯು ಶಿಫಾರಸ್ಸುಗಳನ್ನು ಮಾಡಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img