Monday | June 15, 2026 |

ಲಲಿತಾ ಜ್ಯುವೆಲ್ಲರಿ ಮಾರ್ಟ್‌ಗೆ ಬಡ್ಡಿ ವಿಧಿಸದ ಇಲಾಖೆ; ವ್ಯಾಪಾರಿಗಳ ಬಂಡವಾಳ ತೆರೆದಿಟ್ಟ ಸಿಎಜಿ

Support THE-FILE

spot_img

ಬೆಂಗಳೂರು; ಪ್ರತಿಷ್ಠಿತ ಚಿನ್ನ, ಬೆಳ್ಳಿ, ವಜ್ರ ವ್ಯಾಪಾರಿ ಸಂಸ್ಥೆ ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಪ್ರೈವೈಟ್‌ ಲಿಮಿಟೆಡ್‌ ತೆರಿಗೆ ಪಾವತಿ ಮಾಡುವವರೆಗೂ ಬಡ್ಡಿ ವಿಧಿಸದ ವಾಣಿಜ್ಯ ತೆರಿಗೆ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದನ್ನು ಸಿಎಜಿ ವರದಿ ಬಹಿರಂಗಗೊಳಿಸಿದೆ.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯಲ್ಲಿ ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಸೇರಿದಂತೆ ನೋಂದಾಯಿತ ಮತ್ತು ನೋಂದಾಯಿತವಲ್ಲದ ವರ್ತಕರಿಂದ ಖರೀದಿಸಲಾದಂತಹ ಚಿನ್ನ, ಬೆಳ್ಳಿ, ವಜ್ರಗಳ ಖರೀದಿಗಳ ಮೇಲಿನ ತೆರಿಗೆ ಜಮೆಯಲ್ಲಿ ಆಗಿರುವ ಬಡ್ಡಿ ನಷ್ಟದ ಕುರಿತು ವಿವರಿಸಿದೆ.

ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಪ್ರೈ ಲಿ.,ಗೆ ಸಂಬಂಧಿಸಿದಂತೆ 2014-15 ಸಾಲಿಗೆ 20164 ಜೂನ್‌ 27ರಂದು ಜಾರಿಗೊಳಿಸಿದ್ದ ಪುನರ್‌ ಕರ ನಿರ್ಧಾರಣ ಆದೇಶದಂತೆ ನೋಂದಾಯಿತ ವರ್ತಕರು ಮತ್ತು ನೋಂದಾಯಿತರಲ್ಲದ ವರ್ತಕರಿಂದ ಖರೀದಿಸಿದ್ದ ಚಿನ್ನ, ಬೆಳ್ಳಿ, ವಜ್ರಗಳ ಮೇಲೆ ಒಟ್ಟು 8.37 ಕೋಟಿ ಮೊತ್ತದಷ್ಟು ಖರೀದಿಗಳ ಮೇಲಿನ ತೆರಿಗೆ ಜಮೆ ಅನುಮತಿ ನೀಡಲಾಗಿತ್ತು.

ಕರದಾತರು ಸಲ್ಲಿಸಿದ್ದಂತಹ ಖರೀದಿಗಳನ್ನು ಪರಿಶೀಲಿಸಿದ್ದ ಸಿಎಜಿ ಅಧಿಕಾರಿಗಳು ಖರೀದಿಗಳ ಮೇಲಿನ ಒಟ್ಟಾರೆ ಖರೀದಿಗಳ ಮೇಲಿನ ತೆರಿಗೆ ಜಮೆಯು ಕೇವಲ 6.27 ಕೋಟಿ ಆಗಿತ್ತು ಎಂದು ಪರೀಕ್ಷಾ-ತನಿಖೆಯಿಂದ ಪತ್ತೆ ಹಚ್ಚಿದ್ದರು. ಇದರಲ್ಲಿ ನೋಂದಾಯಿತರಿಂದ 4.40 ಕೋಟಿ, ನೋಂದಾಯಿತರಲ್ಲದವರಿಂದ 1.87 ಕೋಟಿಯೂ ಸೇರಿತ್ತು.

ಅದೇ ರೀತಿ ವರ್ತಕರ ಲೆಕ್ಕಪತ್ರಗಳ ಲೆಕ್ಕಪರಿಶೋಧನೆಯ ಆಧಾರದ ಮೇಲೆ ನಮೂನೆ ಮೌವತೆ 240ರಲ್ಲಿಯೂ ಕೂಡ ಖರೀದಿಗಳ ಮೇಲಿನ ಜಮೆಯು 6.27 ಕೋಟಿ ಎಂದು ಘೋಷಿಸಲಾಗಿತ್ತು. ಈ ರೀತಿಯಾಗಿ ಅಧಿಕ ಪ್ರಮಾಣದಲ್ಲಿ ಅನುಮತಿ ನೀಡಿದ್ದಂತಹ ಖರೀದಿಗಳ ಮೇಲಿನ ತೆರಿಗೆ ಜಮೆಯು 2.10 ಕೋಟಿ ಆಗಿತ್ತು. ಅಲ್ಲದೆಯೇ 021 ಕೋಟಿ ಮೊತ್ತದಷ್ಟು ದಂಡ ಮತ್ತು ಹಾಗೂ 0.44 ಕೋಟಿ ಮೊತ್ತದಷ್ಟು ಬಡ್ಡಿಯನ್ನು ಸಹ ವಿಧಿಸಬೇಕಿತ್ತು. ಒಟ್ಟಾರೆ ತೆರಿಗೆ ಜವಾಬ್ದಾರಿಯು 2.75 ಕೋಟಿ ಆಗಿತ್ತು ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

2015ರ ಮೇನಿಂದ ಜೂನ್‌ 2016ರವರೆಗೆ ಅಂದರೆ ಕರ ನಿರ್ಧಾರಣ ಆದೇಶದ ದಿನಾಂಕದವರೆಗೆ 14 ತಿಂಗಳಗಳಿಗೆ ಬಡ್ಡಿ ಲೆಕ್ಕ ಹಾಕಲಾಗಿದೆ. ಆದರೂ ಬಡ್ಡಿಯನ್ನು ವರ್ತಕರು ತೆರಿಗೆ ಪಾವತಿ ಮಾಡುವ ದಿನಾಂಕದವರೆಗೂ ವಿಧಿಸಬೇಕಿದ್ದ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎಂಬುದು ಸಿಎಜಿ ವರದಿಯಿಂದ ಮೇಲ್ನೋಟಕ್ಕೆ ಕಂಡು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img