Monday | September 14, 2026 |

ಬೊಕ್ಕಸಕ್ಕೆ ಜಮೆಯಾಗದ ಕೋಟ್ಯಂತರ ಮೊತ್ತದ ರಾಜಸ್ವ; ನೋಂದಣಿ ಶುಲ್ಕ ಸೋರಿಕೆ

Support THE-FILE

spot_img

ಬೆಂಗಳೂರು; ವಿವಿಧ ಮೂಲಗಳಿಂದ ಸಂಗ್ರಹಿಸುವ ಕೋಟ್ಯಂತರ ಮೊತ್ತದ ವರಮಾನ/ರಾಜಸ್ವವನ್ನು ಅಧಿಕಾರಿಗಳು ಸರ್ಕಾರದ ಲೆಕ್ಕ ಶೀರ್ಷಿಕೆಗೆ ಪಾವತಿಸುತ್ತಿಲ್ಲ. ಸಂಗ್ರಹವಾಗುವ ವರಮಾನ/ರಾಜಸ್ವ ಲೆಕ್ಕ ಶೀರ್ಷಿಕೆಗೆ ಜಮೆ ಆಗುತ್ತಿದೆಯೇ ಇಲ್ಲವೇ ಎಂಬ ಬಗ್ಗೆ ನೋಂದಣಿ, ಮುದ್ರಾಂಕಗಳ ಆಯುಕ್ತರು ನಿಯತಕಾಲಿಕವಾಗಿ ಸಮೀಕ್ಷೆಯನ್ನೂ ನಡೆಸುತ್ತಿಲ್ಲ.

ಇಂತಹದೊಂದು ಪ್ರಕರಣವನ್ನು ಸಿಎಜಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯು ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕ ಹೇಗೆ ಸೋರಿಕೆಯಾಗುತ್ತಿದೆ ಎಂಬುದರ ಮೇಲೆ ಬೆಳಕು ಚೆಲ್ಲಿದೆ.

ಕಾರವಾರ ಉಪ ನೋಂದಣಿ ಅಧಿಕಾರಿ ಕಚೇರಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸಿಎಜಿ ಅಧಿಕಾರಿಗಳು 2018ರ ಏಪ್ರಿಲ್‌ನಲ್ಲಿ ಪರೀಕ್ಷಾ ಪರಿಶೀಲನೆ ನಡೆಸುವ ವೇಳೆಯಲ್ಲಿ ಒಟ್ಟಾರೆ 3.33 ಕೋಟಿ ಮೊತ್ತದ ನಗದನ್ನು ನೋಡಲ್‌ ಬ್ಯಾಂಕ್‌ಗೆ ಪಾವತಿಸಿರಲಿಲ್ಲ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಹಿಂದಿನ ಕಾಂಗ್ರೆಸ್‌ ಅವಧಿಯಲ್ಲಿ ಪ್ರಕರಣ ನಡೆದಿದೆಯಾದರೂ ಈಗಿನ ಬಿಜೆಪಿ ಸರ್ಕಾರವೂ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಂಗ್ರಹವಾಗುತ್ತಿರುವ ರಾಜಸ್ವ ಸರ್ಕಾರದ ಲೆಕ್ಕಶೀರ್ಷಿಕೆಗೆ ಜಮೆ ಆಗುತ್ತಿದೆಯೇ ಇಲ್ಲವೇ ಎಂಬ ಬಗ್ಗೆ ಸಮೀಕ್ಷೆ ನಡೆಸದೇ ದುರುಪಯೋಗಕ್ಕೆ ಪರೋಕ್ಷ ನೆರವು ನೀಡಿದಂತಾಗಿದೆ. ಸಚಿವ ಆರ್‌ ಅಶೋಕ್‌ ಅವರು ಸಹ ಈ ಕುರಿತು ಇಲಾಖೆಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಗೊತ್ತಾಗಿದೆ.

2017ರ ಜುಲೈನಿಂದ 2018ರ ಏಪ್ರಿಲ್‌ವರೆಗೆ ಕಾರವಾರ ಉಪ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ 5.90 ಕೋಟಿ ಮೊತ್ತದಷ್ಟು ಡಿಮ್ಯಾಂಡ್‌ ಡ್ರಾಫ್ಟ್‌ ಮತ್ತು 2.37 ಕೋಟಿ ಮೊತ್ತದಷ್ಟು ನಗದು ಸಂಗ್ರಹವಾಗಿತ್ತು. ಈ ಪೈಕಿ 3.89 ಕೋಟಿ ಮೊತ್ತದಷ್ಟು ಡಿಮ್ಯಾಂಡ್‌ ಡ್ರಾಫ್‌ ಹಾಗೂ 1.05 ಕೋಟಿ ಮೊತ್ತದಷ್ಟು ನಗದನ್ನು ಮಾತ್ರ ಸರ್ಕಾರಿ ಲೆಕ್ಕ ಶೀರ್ಷಿಕೆಗೆ ನಗದೀಕರಿಸಲು ನೋಡಲ್‌ ಬ್ಯಾಂಕ್‌ ಪಾವತಿ ಮಾಡಲಾಗಿತ್ತು ಎಂಬುದು ಸಿಎಜಿ ವರದಿಯಿಂದ ಗೊತ್ತಾಗಿದೆ.

ಆದರೆ ಇದೇ ಅವಧಿಯಲ್ಲಿ 2.01 ಕೋಟಿ ಮೊತ್ತದಷ್ಟು ಡಿಮ್ಯಾಂಡ್‌ ಡ್ರಾಫ್ಟ್‌ ಹಾಗೂ 1.32 ಕೋಟಿ ಮೊತ್ತದಷ್ಟು ನಗದನ್ನು ನೋಡಲ್‌ ಬ್ಯಾಂಕ್‌ಗೆ ಪಾವತಿಸಿರಲಿಲ್ಲ. ಡಿಮ್ಯಾಂಡ್‌ ಡ್ರಾಫ್ಟ್‌ಗಳನ್ನು ಉಪ ನೋಂದಣಿ ಅಧಿಕಾರಿಯ ಸುಪರ್ದಿಯಲ್ಲೇ ಇತ್ತು. ಅಲ್ಲದೆ ನಗದು ಪಾವತಿ ರಿಜಿಸ್ಟರ್‌ನಲ್ಲಿ ನಮೂದಾಗಿತ್ತು. ಆದರೆ 3.33 ಕೋಟಿಯಷ್ಟು ಒಟ್ಟಾರೆ ಮೊತ್ತ ಸರ್ಕಾರಿ ಲೆಕ್ಕ ಶೀರ್ಷಿಕೆಗೆ ಪಾವತಿ ಆಗಿರಲಿಲ್ಲ. ಇದು ಕರ್ನಾಟಕ ಹಣಕಾಸು ಸಂಹಿತೆ ಉಲ್ಲಂಘನೆ ಮಾತ್ರ ಆಗಿರದೆಯೇ ಸಂಗ್ರಹಿಸಲಾಗಿದ್ದ ಹಣಕಾಸಿನ ಅವ್ಯವಹಾರದ ಸಂಭಾವ್ಯವನ್ನೂ ಸೃಷ್ಟಿ ಮಾಡಿದಂತಾಗಿತ್ತು ಎಂದು ಸಿಎಜಿ ವರದಿ ಅಭಿಪ್ರಾಯಪಟ್ಟಿದೆ.

‘ಡಿಮ್ಯಾಂಡ್‌ ಡ್ರಾಫ್ಟ್‌ಗಳು ಯಾವುದೇ ದುರುಪಯೋಗಕ್ಕೆ ಕಡಿಮೆ ಪ್ರಮಾಣದಲ್ಲಿ ಆಸ್ಪದ ಕೊಡುವುದಾದರೂ ನಗದಿನ ದುರುಪಯೋಗವನ್ನು ತಳ್ಳಿ ಹಾಕುವಂತಿಲ್ಲ. ಹಾಗೆಯೇ ಸರ್ಕಾರದ ಹಣಕಾಸಿನ ಅವ್ಯವಹಾರದಲ್ಲಿ ಒಳಗೊಂಡಿರುವ ವ್ಯಕ್ತಿಗಳ ಮೇಲೆ ಜವಾಬ್ದಾರಿ ನಿಗದಿ ಮಾಡುವ ಸಲುವಾಗಿ ಸೂಕ್ತ ತನಿಖೆ ನಡೆಸುವ ಅಗತ್ಯವಿರುತ್ತದೆ, ‘ ಎಂದು ಸಿಎಜಿ ವರದಿಯಲ್ಲಿ ಶಿಫಾರಸ್ಸು ಮಾಡಿದೆ.

ಕರ್ನಾಟಕ ಹಣಕಾಸು ಸಂಹಿತೆ ಪ್ರಕಾರ ಇಲಾಖಾ ಅಧಿಕಾರಿಗಳು ಸರ್ಕಾರಿ ಲೆಕ್ಕ ಶೀರ್ಷಿಕೆಗೆ ಹಣಕಾಸು ನಗದೀಕರಣಗೊಂಡಿರುವುದು ಅಥವಾ ಸಂಗ್ರಹವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಪಾವತಿಗಳನ್ನು ಖಜಾನೆ ಷೆಡ್ಯೂಲಿನೊಂದಿಗೆ ಪ್ರತಿ ತಿಂಗಳು ಸಮನ್ವಯಗೊಳಿಸಬೇಕು. ಆದರೆ ಇಲಾಖೆಯ ಆಯುಕ್ತರಾದಿಯಾಗಿ ಯಾರೊಬ್ಬರೂ ಇದರ ಬಗ್ಗೆ ಗಮನಹರಿಸಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img