Wednesday | June 17, 2026 |

ಕೋಟ್ಯಂತರ ಮೊತ್ತದ ವರಮಾನ ಸೋರಿಕೆ; ವರ್ತಕರ ದಂಡ ಮನ್ನಾಕ್ಕೆ ಸಿಎಜಿ ಆಕ್ಷೇಪ

Support THE-FILE

spot_img

ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯು ಕರ್ನಾಟಕ ಮೌವತೆ ಅಧಿನಿಯಮ ಪರಿಚ್ಛೇದ 74(4) ರ ಅಡಿಯಲ್ಲಿ ದಂಡ ವಸೂಲು ಮಾಡದೇ ವರಮಾನ ಸೋರಿಕೆಯಾಗುತ್ತಿರುವುದನ್ನು ಮುನ್ನೆಲೆಗೆ ತಂದಿದೆ.

ಬಳ್ಳಾರಿ, ಬೆಂಗಳೂರು, ಬಿದರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹೊಸಪೇಟೆ, ಕಲಬುರಗಿ ಹಾಗೂ ರಾಯೂಚೂರು ಜಿಲ್ಲೆಗಳ 22 ಕಚೇರಿ ವ್ಯಾಪ್ತಿಯಲ್ಲಿ ಕರ್ನಾಟಕ ಮೌವತೆ ಅಧಿನಿಯಮ ಪರಿಚ್ಛೇದ 74(4) ರ ಅಡಿಯಲ್ಲಿ17.62 ಕೋಟಿ ದಂಡ ವಿಧಿಸಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಈ ನಷ್ಟ ಸಂಭವಿಸಿದೆ. ಈಗಿನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಕಳೆದಿದ್ದರೂ ಅಧಿಕಾರಿಗಳಿಗೆ ನೋಟೀಸ್‌ ನೀಡಿದೆಯೇ ವಿನಃ ಇನ್ನೂ ಪೂರ್ಣ ಪ್ರಮಾಣದಲ್ಲಿ ದಂಡ ವಸೂಲು ಮಾಡಿಲ್ಲ ಎಂದು ತಿಳಿದು ಬಂದಿದೆ.

ಕರದಾತರು ಸ್ಥಳೀಯ ಸನ್ನದು ಲೆಕ್ಕಪರಿಶೋಧಕರಿಂದ ಲೆಕ್ಕ ತಪಾಸಣೆ ನಡೆಸಿರುವುದಿಲ್ಲ. ಕರ ನಿರ್ಧರಣಾ ಅಧಿಕಾರಿಗಳು ಅಧಿನಿಯಮದ ಪ್ರಕಾರ ನೋಟೀಸ್‌ ನೀಡುವ ಮೂಲಕ ಅಥವಾ ಕಡ್ಡಾಯವಾಗಿ ವಿಧಿಸಬಹುದಾಗಿದ್ದ ದಂಡವನ್ನು ವಿಧಿಸುವ ಮೂಲಕ ಅನುಸರಣಾ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿರಲಿಲ್ಲ.

‘ವ್ಯವಸ್ಥೆಯಲ್ಲಿ ಅಂತರ್ಗತವಾಗಿರುವ ನಿಯಂತ್ರಣಗಳನ್ನು ಜಾರಿಗೊಳಿಸುವಲ್ಲಿನ ವಿಫಲತೆಯು ವರಮಾನದ ಸೋರಿಕೆಯಲ್ಲಿ ಪರಿಣಿಮಿಸುತ್ತದೆ, ‘ ಎಂದು ಸಿಎಜಿ ವರದಿ ಅಭಿಪ್ರಾಯಪಟ್ಟಿದೆ.
ಇಂತಹ ಪ್ರಕರಣಗಳನ್ನು 2019ರ ಅಗಸ್ಟ್‌ ಡಿಸೆಂಬರ್‌ 2019ರ ನಡುವೆ ಸರ್ಕಾರ ಹಾಗೂ ಇಲಾಖೆ ಗಮನಕ್ಕೆ ತಂದ ನಂತರ 3 ಪ್ರಕರಣಗಳಲ್ಲಿ 0.84 ಲಕ್ಷ ಮೊತ್ತವನ್ನಷ್ಟೇ ವಸೂಲು ಮಾಡಲಾಗಿದೆ. 1,081 ಪ್ರಕರಣಗಳಲ್ಲಿ 4.20 ಕೋಟಿ ಮೊತ್ತದಷ್ಟು ದಂಡದ ಪಾವತಿಸಲು ಆದೇಶ ಹೊರಡಿಸಿದೆ. 10.02 ಲಕ್ಷ ಮೊತ್ತವು ಒಳಗೊಂಡಂತೆ 67 ಪ್ರಕರಣಗಳಲ್ಲಿ ತಗಾದೆ ನೋಟೀಸ್‌ಗಳನ್ನು ನೀಡಿದೆ ಎಂದು ಇಲಾಖೆ ಸಿಎಜಿಗೆ ಉತ್ತರಿಸಿರುವುದು ತಿಳಿದು ಬಂದಿದೆ.

4 ವರ್ತಕರು ನಮೂನೆ ಮೌವತೆ 240ರಲ್ಲಿ 15.15 ಲಕ್ಷ ಮೊತ್ತದಷ್ಟು ಹೆಚ್ಚುವರಿ ತೆರಿಗೆ ಬಾಧ್ಯತೆಯನ್ನು ಘೋಷಿಸಿಕೊಂಡಿದ್ದರು. ಈ ಪೈಕಿ ಕೇವಲ ಇಬ್ಬರು ವರ್ತಕರು ಮಾತ್ರ 3.63 ಲಕ್ಷ ಮೊತ್ತವನ್ನು ಪಾವತಿಸಿದ್ದರು. ಇಬ್ಬರು ವರ್ತಕರುಗಳಿಂದ ಪಾವತಿ ಆಗಬೇಕಿದ್ದ ತೆರಿಗೆ ಬಾಧ್ಯತೆ 11.52 ಲಕ್ಷ ಮೊತ್ತವು ವಾಣಿಜ್ಯ ತೆರಿಗೆಗಳ ಇಲಾಖೆಯ ವಿದ್ಯುನ್ಮಾನ ಸಲ್ಲಿಕೆ ವ್ಯವಸ್ಥೆಯಲ್ಲಿ ಪಾವತಿಯಾಗದೇ ಬಾಕಿ ಉಳಿದಿತ್ತು. ಅಲ್ಲದೆ ಈ ರೀತಿಯಾಗಿ ಹೆಚ್ಚುವರಿ ತೆರಿಗೆ ಬಾಧ್ಯತೆಯ ಪಾವತಿಯನ್ನು ಖಚಿತಪಡಿಸಿಕೊಳ್ಳದೆಯೂ ಕೂಡ ದಂಡಗಳನ್ನು ಮನ್ನಾ ಮಾಡಲಾಗಿತ್ತು ಎಂದು ಸಿಎಜಿ ವರದಿ ಗಮನಿಸಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img