Sunday | June 14, 2026 |

250 ಕೋಟಿ ಮೌಲ್ಯದ ಗೋಮಾಳ ಪರಭಾರೆ; ಪಂಚಾಯ್ತಿಯಲ್ಲಿ ಮೂಲ ದಾಖಲೆಗಳೇ ಇಲ್ಲ

Support THE-FILE

spot_img

ಬೆಂಗಳೂರು; ಬೆಂಗಳೂರು ಪೂರ್ವ ತಾಲೂಕು ಮುಳ್ಳೂರು ಗ್ರಾಮದ ಸರ್ವೆ ನಂಬರ್‌ 44, 45, 47, 48, 49, 49/6, 91ರಲ್ಲಿ ಅಂದಾಜು 1,250 ಕೋಟಿ ರು. ಮೌಲ್ಯದ ಸರ್ಕಾರಿ ಆಸ್ತಿ ಅಕ್ರಮವಾಗಿ ಪರಭಾರೆ ಆಗಿರುವ ಪ್ರಕರಣ ಇದೀಗ ಹೊರಬಿದ್ದಿದೆ.

ಈ ಪೈಕಿ ಸರ್ವೆ ನಂಬರ್‌ 44ರಲ್ಲಿ ಭೂ ಪರಿವರ್ತನೆಯಾಗದ ಮತ್ತು ಗ್ರಾಮ ಠಾಣೆ ವ್ಯಾಪ್ತಿಗೆ ಒಳಪಡದ ಜಾಗಕ್ಕೆ ನಮೂನೆ 9, 10 ಮತ್ತು 11ರ ದಾಖಲೆಗಳನ್ನು ನೀಡಿ ಅಂದಾಜು 250 ಕೋಟಿ ರು. ಮೌಲ್ಯದ ಸರ್ಕಾರಿ ಗೋಮಾಳ ಜಾಗವನ್ನು ಕಬಳಿಸಿರುವುದು ತನಿಖೆಯಿಂದ ದೃಢಪಟ್ಟಿದೆ. ಕೊಡತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿರುವ ಈ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಕೊಡತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಳ್ಳೂರು ಗ್ರಾಮದ ಸರ್ವೆ ನಂಬರ್‌ 44ರಲ್ಲಿ ಒಟ್ಟು 23.38 ಎಕರೆ ವಿಸ್ತೀರ್ಣದ ಸರ್ಕಾರಿ ಗೋಮಾಳವಿದೆ. ಇದರಲ್ಲಿ 2 ಎಕರೆ ವಿಸ್ತೀರ್ಣದ ಭೂಮಿಯನ್ನು ಜನತಾ ನಿವೇಶನ ನೀಡಲು ಹಲವು ವರ್ಷಗಳ ಹಿಂದೆಯೇ ಮಂಜೂರಾಗಿದೆ. ಉಳಿದಂತೆ 4 ಎಕರೆ ವಿಸ್ತೀರ್ಣದ ಜಾಗ ನಾಗಮಣಿ ಎಂಬುವರಿಗೆ ಮಂಜೂರಾಗಿದೆ ಎಂದು ಆರ್‌ಟಿಸಿಯಲ್ಲಿ ದಾಖಲಾಗಿದೆ. ಆದರೆ ಈ ಮಂಜೂರಾತಿ ಯಾವ ರೀತಿ ಆಗಿದೆ ಎಂಬ ವಿವರಗಳು ಗ್ರಾಮ ಪಂಚಾಯ್ತಿಯಲ್ಲೇ ಇಲ್ಲ ಎಂಬುದು ತನಿಖಾ ವರದಿಯಿಂದ ಗೊತ್ತಾಗಿದೆ.

ನಾಗಮಣಿ ಎಂಬುವರ ಹೆಸರಿಗೆ ಮಂಜೂರಾಗಿರುವ 4 ಎಕರೆ ಜಮೀನಿಗೆ ಸಂಬಂಧಿಸಿದಂತೆ ಮ್ಯುಟೇಷನ್‌ ದಾಖಲೆಗಳು ಮೇಲ್ನೋಟಕ್ಕೆ ಖೊಟ್ಟಿ ದಾಖಲೆಗಳು ಎಂದು ಕಂಡು ಬಂದಿದೆ. ಇದೇ ಜಾಗವನ್ನು ಮತ್ತೊಬ್ಬರಿಗೆ ಪರಭಾರೆ ಮಾಡಿದ್ದಾರೆ. ಅಲ್ಲದೆ ಈ ಜಾಗದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಹಂತದಲ್ಲಿದೆ. ಆದರೂ ಈ ಪ್ರಕರಣದ ಬಗ್ಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಸಚಿವ ಈಶ್ವರಪ್ಪ ಮತ್ತು ಕಂದಾಯ ಸಚಿವ ಆರ್‌ ಅಶೋಕ್‌ ಅವರು ಕಠಿಣ ಕ್ರಮ ಕೈಗೊಂಡಿಲ್ಲ.

ತನಿಖಾ ವರದಿಯಲ್ಲೇನಿದೆ?

ಕ್ರಮ ಸಂಖ್ಯೆ;01ರಲ್ಲಿನ 876/4ರ ಸ್ವತ್ತಿಗೆ ಸಂಬಂಧಿಸಿದಂತೆ ಸಂಖ್ಯೆ 12ರ ಮನೆ ಕಟ್ಟಡದ ಅನುಮತಿ ಪತ್ರದ ಪ್ರತಿಯು ಗ್ರಾಮ ಪಂಚಾಯ್ತಿಯ ಕಟ್ಟಡ ಲೈಸೆನ್ಸ್‌ಗೆ ಸಂಬಂಧಿಸಿದ ಮೂಲ ದಾಖಲೆಗಳಲ್ಲಿ ಕಂಡು ಬಂದಿಲ್ಲ.

ಕ್ರಮ ಸಂಖ್ಯೆ 02ರಲ್ಲಿನ 876/4 ರ ಸ್ವತ್ತಿಗೆರ ಸಂಬಂಧಿಸಿದಂತೆ ಆಕ್ಷೇಪಣೆ ರಹಿತ ಪತ್ರದ ಪ್ರತಿಯು ಗ್ರಾಮ ಪಂಚಾಯ್ತಿಯ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿದ ಮೂಲ ದಾಖಲೆಗಳಲ್ಲಿ ಕಂಡು ಬಂದಿಲ್ಲ.

ಕ್ರಮ ಸಂಖ್ಯೆ 03ರಲ್ಲಿನ ಸ್ವತ್ತಿಗೆ ಸಂಬಂಧಿಸಿದಂತೆ ನಮೂನೆ-9, ನಮೂನೆ-11ರ ದಾಖಲೆಯ ಪ್ರತಿಗಳು ಗ್ರಾಮ ಪಂಚಾಯ್ತಿಯ ಡಿಮ್ಯಾಂಡ್‌ ರಿಜಿಸ್ಟರ್‌ ವಹಿಯ ಮೂಲ ದಾಖಲೆಗಳಲ್ಲೂ ಕಂಡುಬಂದಿಲ್ಲ.

ಕ್ರಮ ಸಂಖ್ಯೆ 4ರಲ್ಲಿನ ನಿವೇಶನಕ್ಕೆ ಸಂಬಂಧಿಸಿದಂತೆ ಸಾಮಾನ್ಯ ರಸೀತಿಯ ಸಂಖ್ಯೆ;120110 ಮತ್ತು ಸಂಖ್ಯೆ ;120112 ದಾಖಲೆಯ ಪ್ರತಿಗಳು ಗ್ರಾಮ ಪಂಚಾಯ್ತಿಯ ರಸೀದಿ ಪುಸ್ತಕದ ಮೂಲ ದಾಖಲೆಗಳಲ್ಲಿ ಕಂಡು ಬಂದಿಲ್ಲ ಎಂದು ತನಿಖಾ ವರದಿಯಲ್ಲಿ ವಿವರಿಸಲಾಗಿದೆ.
ನಾಗವೇಣಿ ಎಂಬುವರಿಗೆ 4 ಎಕರೆ ಯಾವ ರೀತಿ ಮಂಜೂರಾಗಿದೆ ಎಂಬ ವಿವರಗಳು ಗ್ರಾಮ ಪಂಚಾಯ್ತಿಯಲ್ಲಿ ಯಾವುದೇ ಮೂಲ ದಾಖಲೆಗಳು ಇಲ್ಲದಿದ್ದರೂ ಸ್ಥಳೀಯ ನೋಂದಣಾಧಿಕಾರಿಗಳು ಕ್ರಯ ಪತ್ರವನ್ನು ನೋಂದಣಿ ಮಾಡಿರುವುದು ವರದಿಯಿಂದ ತಿಳಿದು ಬಂದಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸರ್ಕಾರಿ ಗೋಮಾಳ, ಬಿ ಖರಾಬಿನಂತಹ ಜಾಗಗಳು ಕಬಳಿಕೆ ಆಗುತ್ತಿದ್ದರೂ ಗ್ರಾಮೀಣಾಭಿವೃದ್ಧಿ, ಕಂದಾಯ ಮತ್ತು ನೋಂದಣಿ ಮುದ್ರಾಂಕ ಇಲಾಖೆಗಳು ಆರೋಪಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಕಬಳಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img