Sunday | June 14, 2026 |

ವನ್ಯಜೀವಿ ಮಂಡಳಿಗೆ ದಿನೇಶ್‌ ಸಿಂಗಿ ನಾಮನಿರ್ದೇಶನ; ಪಿಐಎಲ್‌ ದಾಖಲು

Support THE-FILE

spot_img

ಬೆಂಗಳೂರು; ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಮತ್ತು ಬಿಎಂಎಂ ಇಸ್ಪಾತ್‌ ಲಿಮಿಟೆಡ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಿರುವ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವರು ಹೈಕೋರ್ಟ್‌ನಲ್ಲಿ 2021ರ ಜನವರಿ 4ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಾಧೀಶರ ವಿಭಾಗೀಯ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಈ ಕುರಿತು ಸರ್ಕಾರಕ್ಕೆ ನೋಟೀಸ್‌ ಜಾರಿಗೊಳಿಸಿದೆ. ಪ್ರಕರಣವನ್ನು 2021ರ ಫೆ.16ಕ್ಕೆ ಮುಂದೂಡಿದೆ.

 

ವನ್ಯಜೀವಿ ಮಂಡಳಿಗೆ ದಿನೇಶ್‌ ಸಿಂಗಿ ಅವರನ್ನು ನಾಮನಿರ್ದೇಶನ ಮಾಡಲು ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಶಿಫಾರಸ್ಸು ಮಾಡಿದ್ದರು. ವನ್ಯಜೀವಿ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದ ರಾಜ್ಯದಲ್ಲಿ ಹಲವರಿದ್ದರೂ ದಿನೇಶ್‌ ಸಿಂಗಿ ಅವರನ್ನೇ ನಾಮನಿರ್ದೇಶನ ಮಾಡುವ ಔಚಿತ್ಯವೇನಿತ್ತು ಎಂಬ ಆಕ್ಷೇಪ ಕೇಳಿ ಬಂದಿತ್ತು. ಈ ಕುರಿತು ಅರಣ್ಯ ಸಚಿವ ಆನಂದ್‌ಸಿಂಗ್‌ ಮೌನ ವಹಿಸಿದ್ದರು.

ಅದೇ ರೀತಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಅವರ ಪುತ್ರ ಅಲೋಕ್‌ ವಿಶ್ವನಾಥ್‌ ಸೇರಿದಂತೆ ಒಟ್ಟು 4 ಮಂದಿಯನ್ನು ಮಂಡಳಿಗೆ ನಾಮನಿರ್ದೆಶನ ಮಾಡಲು ಸಚಿವ ಸಿ ಸಿ ಪಾಟೀಲ್‌ ಮತ್ತು ಕಂದಾಯ ಸಚಿವ ಆರ್‌ ಅಶೋಕ್‌ ಅವರು ಶಿಫಾರಸ್ಸು ಮಾಡಿದ್ದರು.

ಗಣ್ಯರ ಶಿಫಾರಸ್ಸನ್ನು ಪರಿಗಣಿಸಿ ನಾಮನಿರ್ದೇಶನ ಮಾಡಲು ಮಂಡಳಿಯ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು 2019ರ ಡಿಸೆಂಬರ್‌ 17ರಂದು ಅನುಮೋದಿಸಿದ್ದರು. ಈ ಕುರಿತು ‘ದಿ ಫೈಲ್‌’ 2020ರ ಅಕ್ಟೋಬರ್‌ 21ರಂದು ದಾಖಲೆ ಸಮೇತ ವರದಿ ಪ್ರಕಟಿಸಿತ್ತು.

ವನ್ಯಜೀವಿ ಮಂಡಳಿ; ಬೇಲೇಕೇರಿ ಪ್ರಕರಣದ ಆರೋಪಿತರಿಗೆ ಅಶ್ವಥ್‌ನಾರಾಯಣ್‌ ಶಿಫಾರಸ್ಸು

ಕಾನೂನುಬಾಹಿರವಾಗಿ ಅದಿರು ರಫ್ತು ಮಾಡಿದ್ದ ದಿನೇಶ್‌ ಸಿಂಗಿ

ದಿನೇಶ್‌ ಸಿಂಗಿ ಅವರು ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ (ಬಿಎಂಎಂ) ಬೇಲೇಕೇರಿ ಬಂದರಿನಿಂದ 2.11 ಲಕ್ಷ ಟನ್‌ನಷ್ಟು ಕಬ್ಬಿಣದ ಅದಿರನ್ನು ರಫ್ತು ಮಾಡಿತ್ತು ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾಗಿದೆ.

16,368 ಮೆಟ್ರಿಕ್‌ ಟನ್‌ನಷ್ಟು ಅದಿರನ್ನು ರಫ್ತು ಮಾಡಲು ಪರವಾನಿಗೆ ಪಡೆದಿದ್ದ ಈ ಕಂಪನಿಯು 2.11 ಲಕ್ಷ ಟನ್‌ನಷ್ಟು ಅದಿರನ್ನು ರಫ್ತು ಮಾಡಿತ್ತು. 1,27,566 ಮೆಟ್ರಿಕ್‌ ಟನ್‌ ಪ್ರಮಾಣದ ಅದಿರನ್ನು ಕಾನೂನುಬಾಹಿರವಾಗಿ ರಫ್ತು ಮಾಡಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಹೇಳಲಾಗಿದೆ. ಆದರೂ ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ದಿನೇಶ್‌ ಸಿಂಗಿ ಅವರನ್ನೇ ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಲು ಶಿಫಾರಸ್ಸು ಮಾಡುವ ಮೂಲಕ ವಿವಾದಕ್ಕೆ ದಾರಿಮಾಡಿಕೊಟ್ಟಿದ್ದರು.

ಅಲ್ಲದೆ ರಾಜ್ಯ ವನ್ಯಜೀವಿ ಮಂಡಳಿಗೆ ಹೊಸದಾಗಿ ಅಧಿಕಾರೇತರ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶವಿಲ್ಲ ಎಂದು ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿ ಸಚಿವ ಆರ್‌ ಅಶೋಕ್‌, ಸಿ ಸಿ ಪಾಟೀಲ್‌, ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಸೇರಿದಂತೆ ಗಣ್ಯ ವ್ಯಕ್ತಿಗಳು ಮಾಡಿದ್ದ ಶಿಫಾರಸ್ಸನ್ನು ಪರಿಗಣಿಸಿ ನಾಮ ನಿರ್ದೇಶನ ಮಾಡಿರುವುದೂ ಹಲವು ಆಕ್ಷೇಪಗಳಿಗೆ ಕಾರಣವಾಗಿತ್ತು.

ಬಿಎಸ್ಸಿ ಪದವೀಧರ ಚೇತನ್‌ ಬಿ ಅವರು ವನ್ಯಜೀವಿಗಳ ಬಗ್ಗೆ ಕಾಳಜಿ ಹೊಂದಿದ್ದು, ಮಾನವ ಪ್ರಾಣಿಗಳ ಸಂಘರ್ಷ, ಕಾಡಿನಂಚಿನ ಬುಡಕಟ್ಟು ಜನಾಂಗದವರಿಗೆ ಸರ್ಕಾರದಿಂದ ನೀಡುತ್ತಿರುವ ಸವಲತ್ತುಗಳು ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಹೀಗಾಗಿ ಇವರನ್ನು ವನ್ಯಜೀವಿ ಮಂಡಳಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಬೇಕು ಎಂದು ಸಿ ಸಿ ಪಾಟೀಲ್‌ ಅವರು 2019ರ ಅಕ್ಟೋಬರ್‌ 3ರಂದು ಶಿಫಾರಸ್ಸು ಮಾಡಿದ್ದನ್ನು ಸ್ಮರಿಸಬಹುದು.

ಅದೇ ರೀತಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ವಿಚಾರವಾಗಿ ಕನ್ಸರ್‌ವೇಷನ್‌ ಆವೇರ್‌ನೆಸ್‌ ಟ್ರಸ್ಟ್‌(ಸಿಎಟಿಟಿ) ಮತ್ತು ಬನ್ನೇರುಘಟ್ಟ ಕನ್ಸರ್‌ವೇಷನ್‌ ಟ್ರಸ್ಟ್‌(ಬಿಎನ್‌ಸಿಟಿ) ಕಾರ್ಯನಿರ್ವಹಿಸಿರುವ ಎಂಸಿಎ ಪದವೀಧರ ನವೀನ್‌ ಜೆ ಎಸ್‌ ಎಂಬುವರನ್ನು ನಾಮನಿರ್ದೇಶನ ಮಾಡಲು ಸಚಿವ ಅಶೋಕ್‌ ಅವರು 2019ರ ಅಕ್ಟೋಬರ್‌ 10ರಂದು ಶಿಫಾರಸ್ಸು ಮಾಡಿದ್ದರು ಎಂಬುದು ಗೊತ್ತಾಗಿದೆ.

ಅವಧಿಪೂರ್ವ ನಾಮನಿರ್ದೇಶನಕ್ಕೆ ನಡೆದಿತ್ತು ಯತ್ನ

ಹಾಗೆಯೇ ವನ್ಯ ಜೀವಿ ಮಂಡಳಿಗೆ ವನ್ಯಜೀವಿ (ಸಂರಕ್ಷಣಾ) ಕಾಯ್ದೆ 1972 ಸೆಕ್ಷನ್‌ 6(1)ರ ಅಧಿಕಾರದನ್ವಯ 2018ರ ಫೆ. 15ರಂದು 10 ಮಂದಿ ಅಧಿಕಾರೇತರ ಸದಸ್ಯರನ್ನು 3 ವರ್ಷದ ಅವಧಿಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಅಧಿಕಾರಾವಧಿ ಪೂರ್ಣಗೊಳ್ಳುವ ಮುನ್ನವೇ ಹೊಸದಾಗಿ ನಾಮನಿರ್ದೇಶನ ಮಾಡಲಾಗಿತ್ತು.

ಸಂಜಯ್‌ ಗುಬ್ಬಿ ಸೇರಿದಂತೆ ಒಟ್ಟು 10 ಮಂದಿಯನ್ನು ರಾಜ್ಯ ವನ್ಯಜೀವಿ ಮಂಡಳಿಗೆ 2017ರಲ್ಲಿ ನಾಮನಿರ್ದೇಶನ ಮಾಡಲಾಗಿತ್ತು. ಆದರೂ ಹೊಸದಾಗಿ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲು ಯತ್ನಿಸಲಾಗಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ. 2017ರಲ್ಲಿ ನಾಮನಿರ್ದೇಶನಗೊಂಡಿದ್ದ ಅಧಿಕಾರೇತರ ಸದಸ್ಯರ ಸದಸ್ಯತ್ವನ್ನು ರದ್ದುಗೊಳಿಸಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಲೋಕ್‌ ವಿಶ್ವನಾಥ್‌, ಚೇತನ ಬಿ ಅವರನ್ನು ನಾಮನಿರ್ದೇಶನಗೊಳಿಸಲು ಹಿಂದಿನ ಅರಣ್ಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಡತ ಸಲ್ಲಿಸಿದ್ದರು ಎಂಬುದು ಗೊತ್ತಾಗಿದೆ.

ಸಚಿವರ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಾ ಎನ್‌ ಸಿ ಶಿವಪ್ರಕಾಶ್‌, ಬಿ ಎಂ ಕಾಡಯ್ಯ, ರಾಮಚಂದ್ರಶೆಟ್ಟಿ, ಕೆ ಶ್ಯಾಮರಾಜು ಇವರ ಅಧಿಕಾರವಾಧಿಯನ್ನು ರದ್ದಗೊಳಿಸಿ ಇವರ ಬದಲಿಗೆ ಅಲೋಕ್‌ ವಿಶ್ವನಾಥ್‌, ನವೀನ್‌ ಜೆ ಎಸ್‌, ಚೇತನ ಬಿ, ದಿನೇಶ್‌ ಸಿಂಗಿ ಅವರನ್ನು ನಾಮನಿರ್ದೇಶನ ಮಾಡಲು ಅನುಮೋದಿಸಿದ್ದರು.

ಆದರೆ ಕಡೇ ಗಳಿಗೆಯಲ್ಲಿ ಡಾ ಎನ್‌ ಸಿ ಶಿವಪ್ರಕಾಶ್‌ ಅವರು ಮುಂದುವರೆದಿದ್ದರು. ಮೈಸೂರಿನ ಸಂತೃಪ್ತ ಎಂ ಡಿ ಅವರನ್ನು ಕೈಬಿಟ್ಟು ಶಿವಪ್ರಕಾಶ್‌ ಅವರನ್ನು ಮುಂದುವರೆಸಿ ಆದೇಶ ಹೊರಡಿಸಲು ಹಿಂದಿನ ಅರಣ್ಯ ಸಚಿವ ಸಿ ಸಿ ಪಾಟೀಲ್‌ ಅವರು ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img