Monday | June 15, 2026 |

ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?

Support THE-FILE

spot_img

ಬೆಂಗಳೂರು; ಕಂದಾಯ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಹೇಳಲಾದ ಗಂಗಾಧರ್‌ ಎಂಬುವರು ಶೃಂಗೇರಿ ತಾಲೂಕಿನ ಉಪನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಎಂಬುವರಿಗೆ ಅಕ್ರಮ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಇದೀಗ ಹೊರಬಿದ್ದಿದೆ.

ಅಬಕಾರಿ ಸಚಿವರಾಗಿದ್ದ ಎಚ್‌ ನಾಗೇಶ್‌ ಅವರು ವರ್ಗಾವಣೆಗಾಗಿ ಮತ್ತು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಆಪ್ತ ಸಹಾಯಕರು ಅಧಿಕಾರಿಗಳಿಂದ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಇದೀಗ ಶೃಂಗೇರಿಯ ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರು ಶೃಂಗೇರಿ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಅವರಿಗೆ ಲಿಖಿತವಾಗಿ ದೂರು ಸಲ್ಲಿಸಲು ಚಿಂತಿಸಿದ್ದಾರೆ. ಈ ಬಗ್ಗೆ ಅಧಿಕಾರಿ ಚೆಲುವರಾಜು ಅವರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಕ್ಷರ ಮಿತ್ರ ಕಾರ್ಯಕ್ರಮದಲ್ಲಿ ಸಚಿವ ಆರ್‌ ಅಶೋಕ್‌ ಅವರು ಭಾಗವಹಿಸಿದ್ದರು. 2021ರ ಜನವರಿ 21ರಂದು ಕಂದಾಯ ಸಚಿವರ ಪ್ರವಾಸ ವೇಳಾಪಟ್ಟಿಯನ್ನು ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರ ಖಾಸಗಿ ಮೊಬೈಲ್‌ ನಂಬರ್‌ 9741114815ಗೆ ಸಂದೇಶ ಕಳಿಸಲಾಗಿತ್ತು. ಆದರೆ ಸಂದೇಶ ಕಳಿಸಿದವ ಇವರಿಗೆ ಪರಿಚಯವಿರಲಿಲ್ಲ. ಇದಾಗಿ 3 ದಿನದ ನಂತರ 2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡ ಗಂಗಾಧರ್‌ ಎಂಬ ವ್ಯಕ್ತಿಯು ತಮ್ಮನ್ನು ಮತ್ತು ಸಚಿವ ಅಶೋಕ್‌ ಅವರನ್ನು ಭೇಟಿ ಆಗಬೇಕು ಎಂದು ಸೂಚಿಸಿದ್ದರು ಎಂದು ತಿಳಿದು ಬಂದಿದೆ.

2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರನ್ನು ಭೇಟಿಯಾಗಲು ಶರಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ತೆರಳಿದ್ದ ವೇಳೆಯಲ್ಲಿ ಗಂಗಾಧರ ಎಂಬಾತ ತನಗೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟರು. ಈ ಬಗ್ಗೆ ನನಗೆ ಯಾರಿಗೂ ಈ ರೀತಿ ಹಣ ನೀಡುವ ಅಥವಾ ಯಾರಿಂದಲೂ ಹಣ ಪಡೆಯುವ ಅಭ್ಯಾಸ ನನಗೆ ಇಲ್ಲ ಎಂದು ಸ್ಥಳದಲ್ಲಿಯೇ ತಿಳಿಸಿ ಆತನ ಬೇಡಿಕೆಯನ್ನು ತಿರಸ್ಕರಿಸಿದ್ದೇನೆ. ಅಲ್ಲದೆ ಸಭೆ ಮುಗಿದ ಬಳಿಕ ಮನಗೆ ಬಂದಿದ್ದರು ಎಂದು ಗೊತ್ತಾಗಿದೆ.

ಅದೇ ದಿನ ಗಂಗಾಧರ್‌ (ದೂರವಾಣಿ ಸಂಖ್ಯೆ ; 7760666222) 8-30ರ ಸಮಯದಲ್ಲಿ ತನ್ನ ಮೊಬೈಲ್‌ನಿಂದ ವಾಟ್ಸಾಪ್‌ ಧ್ವನಿ ಕರೆ ಮಾಡಿದ್ದ ಎಂದು ದೂರಿನಲ್ಲಿ ಹೇಳಿರುವ ಚೆಲುವರಾಜು ಅವರು ಗಂಗಾಧರ್‌ ಎಂಬುವರು ಸರ್ಕಾರಿ ಅಧಿಕಾರಿಯನ್ನು ಅಕ್ರಮ ಹಣಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಚೆಲುವರಾಜು ಅವರು ಆರೋಪಿಸಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img