Monday | June 15, 2026 |

ಸರ್ಕಾರಿ ಶಾಲೆ ಕೊಠಡಿಗಳಿಗಿಲ್ಲ ದುರಸ್ತಿ ಭಾಗ್ಯ; ಜಿಪಂ, ತಾಪಂಗಳಿಗೆ ಅನುದಾನ ಸ್ಥಗಿತ

Support THE-FILE

spot_img

ಬೆಂಗಳೂರು; ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿ ದುರಸ್ತಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ 2019-20ನೇ ಸಾಲಿನಿಂದಲೇ ಅನುದಾನ ನಿಲ್ಲಿಸಲಾಗಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳಿಗೆ ದುರಸ್ತಿ ಭಾಗ್ಯವೇ ಇಲ್ಲದಂತಾಗಿದೆ.

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ಅಥವಾ ಕೊಠಡಿಗಳ ದುರಸ್ತಿಗೆ ಸಂಪನ್ಮೂಲ ಕ್ರೋಡೀಕರಿಸಲು ದಾನಿಗಳಿಗೆ ಬಿಜೆಪಿ ಸರ್ಕಾರ ಮೊರೆ ಹೋಗಿರುವ ಬೆನ್ನಲ್ಲೇ ಶಾಲೆಗಳ ಕೊಠಡಿ ದುರಸ್ತಿಗೊಳಿಸಲು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ ಅನುದಾನ ಸ್ಥಗಿತಗೊಳಿಸಿರುವ ವಿಚಾರ ಮುನ್ನೆಲೆಗೆ ಬಂದಿದೆ. ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿಗೆ ಅನುದಾನ ಸ್ಥಗಿತಗೊಳಿಸಿ ವರ್ಷ ಕಳೆದರೂ ಸಚಿವ ಈಶ್ವರಪ್ಪ ಅವರು ಈ ಕುರಿತು ಗಮನಹರಿಸಿಲ್ಲ. ಇದು ಸರ್ಕಾರಿ ಶಾಲೆಗಳ ಮೇಲಿನ ಕಾಳಜಿ ಇಲ್ಲದಿರುವುದಕ್ಕೆ ಕೈಗನ್ನಡಿಯಾಗಿದೆ.

ವಾರ್ಷಿಕ ಆಯವ್ಯಯದಲ್ಲಿ ಪ್ರತಿ ವರ್ಷ ಎಲ್ಲಾ ಜಿಲ್ಲಾ ಪಂಚಾಯ್ತಿಗಳಿಗೆ ಲೆಕ್ಕ ಶೀರ್ಷಿಕೆ (2202-00-102-0-34)ರಲ್ಲಿ ಪ್ರೌಢಶಾಲೆಗಳ ಕೊಠಡಿಗಳ ದುರಸ್ತಿಗೆ ಪ್ರತಿ ಜಿಲ್ಲೆಗೆ 1 ಕೋಟಿ ಮತ್ತು ತಾಲೂಕು ಪಂಚಾಯ್ತಿಗಳಿಗೆ (ಲೆಕ್ಕ ಶೀರ್ಷಿಕೆ- 2202-00-01-101-0-66) ತಲಾ 50 ಲಕ್ಷ ರು.ನಂತೆ ಅನುದಾನ ಬಿಡುಗಡೆಯಾಗುತ್ತಿತ್ತು. ಅದರಲ್ಲಿ ತುರ್ತು ದುರಸ್ತಿಗೆ ಕ್ರಿಯಾ ಯೋಜನೆ ತಯಾರಿಸಿ ಕೊಠಡಿಗಳನ್ನು ದುರಸ್ತಿಪಡಿಸಲಾಗುತ್ತಿತ್ತು.

ಆದರೆ 2019-20ನೇ ಸಾಲಿನಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ ಅನುದಾನ ನಿಲ್ಲಿಸಿದೆ. 30 ಜಿಲ್ಲಾ ಪಂಚಾಯತ್‌ಗಳಿಗೆ ಪ್ರತಿ ವರ್ಷ ತಲಾ 1 ಕೋಟಿಯಂತೆ 30 ಕೋಟಿ ಹಾಗೂ ಪ್ರತಿ ತಾಲೂಕು ಪಂಚಾಯತ್‌ಗೆ ತಲಾ 50 ಲಕ್ಷ ರು.ನಂತೆ 254 ತಾಲೂಕು ಪಂಚಾಯತ್‌ಗಳಿಗೆ ಒಟ್ಟು 127 ಕೋಟಿ ಹಣದ ಕೊರತೆಯಾಗಿದೆ. ಅನುದಾನ ಸ್ಥಗಿತಗೊಂಡಿರುವ ಕಾರಣ ಈವರೆವಿಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳ ದುರಸ್ತಿ ಕಾಮಗಾರಿ ನಡೆದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿರುವ ಟಿಪ್ಪಣಿ ಹಾಳೆ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸರ್ಕಾರಿ ಪ್ರೌಢಶಾಲೆಗಳ ದುರಸ್ತಿಗೆ 2021-21ನೇ ಸಾಲಿನ ಆಯವ್ಯಯದಲ್ಲಿ ಅನುದಾನ ನಿಗದಿಪಡಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಲವತ್ತುಕೊಂಡಿದೆ. 2021-22ನೇ ಸಾಲಿನ ಆಯವ್ಯಯದಲ್ಲಿ ಪ್ರತಿ ಜಿಲ್ಲಾ ಪಂಚಾಯತ್‌ಗೆ 3.00 ಕೋಟಿಯಂತೆ ಎಲ್ಲಾ ಜಿಲ್ಲಾ ಪಂಚಾಯತ್‌ಗಳಿಗೆ 100 ಕೋಟಿ ಹಾಗೂ ಪ್ರತಿ ತಾಲೂಕು ಪಂಚಾಯತ್‌ಗೆ 1 ಕೋಟಿಯಂತೆ ಒಟ್ಟು 254 ಕೋಟಿ ಅನುದಾನ ನಿಗದಿಪಡಿಸಬೇಕು ಎಂದು ಬೇಡಿಕೆ ಪಟ್ಟಿ ಸಲ್ಲಿಸಿದೆ ಎಂದು ಗೊತ್ತಾಗಿದೆ.

ಕೊಠಡಿಗಳ ದುರಸ್ತಿಗಾಗಿ 2018-19ರಲ್ಲಿ 4603.00 ಲಕ್ಷ, 2019-20ರಲ್ಲಿ 5103.00 ಲಕ್ಷ ರು.ಗಳನ್ನು ಹಿಂದಿನ ಸರ್ಕಾರ ಅನುದಾನ ಒದಗಿಸಿತ್ತು. 2020-21ರಲ್ಲಿ ಬಿಡಿಗಾಸನ್ನೂ ನೀಡಿಲ್ಲ. ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 2018-19ರಲ್ಲಿ 29480.45 ಲಕ್ಷ ರು., 2019-20ರಲ್ಲಿ 39409.50 ಲಕ್ಷ ರು., 2020-21ರಲ್ಲಿ 19210.00 ಲಕ್ಷ ರು., ಶಾಲೆಗಳ ಕೊಠಡಿಗಳ ಮರು ನಿರ್ಮಾಣಕ್ಕೆ ಆರ್‌ಐಡಿಎಫ್‌ ಯೋಜನೆಯಡಿ 2018-19 ಮತ್ತು 2019-20ರಲ್ಲಿ ಬಿಡಿಗಾಸಿನ ಅನುದಾನವನ್ನೂ ಒದಗಿಸಿರಲಿಲ್ಲ. 2020-21ರಲ್ಲಿ 25000.00 ಲಕ್ಷ ರು. ಅನುದಾನ ಒದಗಿಸಿರುವುದು ತಿಳಿದು ಬಂದಿದೆ.

ಹಾಗೆಯೇ ಕಳೆದ 3 ವರ್ಷಗಳಲ್ಲಿ ಮುಂದುವರೆದ ಯೋಜನೆಗಳ ಅಡಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೂಲಭೂತ ಸೌಕರ್ಯಕ್ಕಾಗಿ 2017-18ರಲ್ಲಿ 13038.72 ಲಕ್ಷ ರು., 2018-19ರಲ್ಲಿ 17445.68 ಲಕ್ಷ ರು. ಅನುದಾನ ಬಿಡುಗಡೆಯಾಗಿತ್ತು.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ಅಥವಾ ಕೊಠಡಿಗಳ ದುರಸ್ತಿಗೆ ಅಗಾಧ ಸಂಪನ್ಮೂಲ ಅಗತ್ಯವಿದೆ. ದಾನಿಗಳಿಂದ ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಕರೆದ ಸಭೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ನೆರೆ ಹಾವಳಿಗೆ 6,196 ಶಾಲೆಗಳ 13,260 ಕೊಠಡಿಗಳು ಹಾನಿಗೀಡಾಗಿವೆ. ಈ ಪೈಕಿ ಅಲ್ಪ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ ಮಾಡಿದೆ. 713 ಕೋಟಿ ರೂ. ಪ್ರಾಥಮಿಕ ಹಾಗೂ 69 ಕೋಟಿ ರೂ. ಪ್ರೌಢಶಾಲೆ ಕಟ್ಟಡಗಳ ಮರು ನಿರ್ಮಾಣಕ್ಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಒಟ್ಟು 43,282 ಪ್ರಾಥಮಿಕ ಹಾಗೂ 4,724 ಪ್ರೌಢಶಾಲಾ ಕಟ್ಟಡಗಳಿವೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img