Monday | September 14, 2026 |

ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ; ಬಿಬಿಎಂಪಿ ಕೌನ್ಸಿಲ್‌ ನಿರ್ಣಯ ರದ್ದುಗೊಳಿಸಿದ ಸರ್ಕಾರ

Support THE-FILE

spot_img

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ವೊಂದರ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ.

ಬೆಂಗಳೂರು ಮಹಾನಗರಪಾಲಿಕೆಯ ಜೋಗುಪಾಳ್ಯ ವ್ಯಾಪ್ತಿಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಪಾಲಿಕೆಯಲ್ಲಿ 2020ರ ಜೂನ್‌ 30ರಂದು ನಡೆದಿದ್ದ ಸಾಮಾನ್ಯ ಸಭೆಯು ನಿರ್ಣಯ ಕೈಗೊಂಡಿತ್ತು. ಆದರೆ ಈ ನಿರ್ಣಯವನ್ನು ಏಕಪಕ್ಷೀಯವಾಗಿ ತೀರ್ಮಾನಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯು ನಿರ್ಣಯವನ್ನು ರದ್ದುಪಡಿಸಿ 2021ರ ಮಾರ್ಚ್‌ 4ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಅಲ್ಲದೆ ಬಿಬಿಎಂಪಿಯು ಕೈಗೊಂಡಿದ್ದ ನಿರ್ಣಯವು ಕರ್ನಾಟಕ ಮುನ್ಸಿಪಲ್‌ ಕಾರ್ಪೋರೇಷನ್‌ (ಸಾರ್ವಜನಿಕ ಸ್ಥಳಕ್ಕೆ ನಾಮಕರಣ ಮಾಡುವುದು) 2008ರ ನಿಯಮ 7ಕ್ಕೆ ವಿರುದ್ಧವಾಗಿತ್ತು ಎಂಬ ಅಂಶ ಆದೇಶದಿಂದ ತಿಳಿದು ಬಂದಿದೆ.

ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು ಕರ್ನಾಟಕ ಮುನಿಸಿಪಲ್‌ ಕಾರ್ಪೋರೇಷನ್‌ ಅಧಿನಿಯಮ 1976 293ನೇ ಪ್ರಕರಣದ 1ನೇ ಉಪಪ್ರಕರಣದಡಿಯಲ್ಲಿ ಪಾಲಿಕೆಯ ಕೌನ್ಸಿಲ್‌ ಸಭೆಯ (ವಿಷಯ ಸಂಖ್ಯೆ; 14(102)/2020-21)ಲ್ಲಿ ನಿರ್ಣಯ ಕೈಗೊಂಡಿತ್ತು.

‘1998ರ ಅಕ್ಟೋಬರ್‌ 27ರಂದು ಬಿಬಿಎಂಪಿ ವ್ಯಾಪ್ತಿಯ ಹನುಮಂತ ನಗರದ ಹಳೇ ವಾರ್ಡ್ ಸಂಖ್ಯೆ 52ರ ವ್ಯಾಪ್ತಿಯಲ್ಲಿನ ಶ್ರೀನಗರದ 4ನೇ ಮುಖ್ಯರಸ್ತೆಗೆ ಬಸವಣ್ಣ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಹೀಗಾಗಿ ಜೋಗುಪಾಳ್ಯ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಎಂದು ನಾಮಕರಣ ಮಾಡಲು 2020ರ ಜೂನ್‌ 30ರಂದು ಕೈಗೊಂಡಿದ್ದ ನಿರ್ಣಯವು ನಿಯಮಗಳಿಗೆ ವಿರುದ್ಧವಾಗಿತ್ತು. ಹೀಗಾಗಿ ಕೆಎಂಸಿ ಕಾಯ್ದೆ 1976ರ ಕಲಂ 98ರ ಮೇರೆಗೆ ನಿರ್ಣಯವನ್ನು ರದ್ದುಗೊಳಿಸಲು ಸರ್ಕಾರವನ್ನು ಆಯುಕ್ತರು ಕೋರಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img