Wednesday | June 17, 2026 |

ಮುಖ್ಯಮಂತ್ರಿಯ ಸಿ.ಡಿ.; ಸರ್ಕಾರದ ಗಮನಕ್ಕೇ ಬಂದಿಲ್ಲವೆಂಬ ಲಿಖಿತ ಉತ್ತರ ನೀಡಿದ ಬಿಎಸ್‌ವೈ

Support THE-FILE

spot_img

ಬೆಂಗಳೂರು; ಮುಖ್ಯಮಂತ್ರಿಗಳ ಸಿ. ಡಿ. ಕುರಿತಂತೆ ಶಾಸಕರನ್ನೊಳಗೊಂಡಂತೆ ಕೇಳಿ ಬಂದಿದ್ದ ಆರೋಪ, ಪ್ರತ್ಯಾರೋಪ ಹೇಳಿಕೆಗಳು ಮತ್ತು ಸಿ.ಡಿ ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಬ್ಲಾಕ್‌ಮೇಲ್‌ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಬಹಿರಂಗವಾಗಿ ನೀಡಿದ್ದ ಸಾರ್ವಜನಿಕ ಹೇಳಿಕೆಯೂ ಸರ್ಕಾರದ ಗಮನಕ್ಕೇ ಬಂದಿಲ್ಲ!

ಹೀಗೆಂದು ಖುದ್ದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ವಿಧಾನಪರಿಷತ್‌ಗೆ ಲಿಖಿತ ಉತ್ತರ ಒದಗಿಸಿದ್ದಾರೆ. ಸಿ ಡಿ ಕುರಿತಾದ ಆರೋಪ-ಪ್ರತ್ಯಾರೋಪ ಹೇಳಿಕೆಗಳು ಸರ್ಕಾರದ ಗಮನಕ್ಕೆ ಬರದ ಕಾರಣ ತನಿಖೆ ಮಾಡುವ ಅಥವಾ ಆರೋಪಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೂ ಇಲ್ಲಿ ಉದ್ಭವಿಸುವುದಿಲ್ಲ ಎಂದೂ ಉತ್ತರ ನೀಡಿದ್ದಾರೆ.

ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾದ ಸಿ ಡಿ ಬಹಿರಂಗವಾಗಿತ್ತು. ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅರು ದೂರು ದಾಖಲಿಸಿದ್ದರು. ಒಂದೇ ದಿನದ ಅಂತರದಲ್ಲಿ ದೂರನ್ನು ಹಿಂಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಡಾ ಕೆ ಸುಧಾಕರ್‌ ಸೇರಿದಂತೆ ಇನ್ನುಳಿದ 6 ಮಂದಿ ಸಚಿವರು ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನೂ ತಂದಿದ್ದರು. ಸಿ ಡಿ ವಿಚಾರವಾಗಿ ಸಾರ್ವಜನಿಕವಾಗಿ ಸಾಕಷ್ಟು ಚರ್ಚೆಗೊಳಗಾಗುತ್ತಿದ್ದರೂ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಯಡಿಯೂರಪ್ಪ ಅವರು ನೀಡಿರುವ ಉತ್ತರವು ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ವಿಧಾನಪರಿಷತ್‌ ಸದಸ್ಯ ಸಿ ಎಂ ಇಬ್ರಾಹಿಂ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಯಡಿಯೂರಪ್ಪ ಅವರು ರಾಜ್ಯದ ಜನರ ಪ್ರತಿನಿಧಿಯಾಗಿ ಸರ್ಕಾರ ನಡೆಸುತ್ತಿರುವ ಮುಖ್ಯಮಂತ್ರಿಗಳನ್ನು ಸಿ.ಡಿ ವಿಚಾರವಾಗಿ ಬ್ಲಾಕ್‌ಮೇಲ್‌ ಮಾಡುವ ನಿಟ್ಟಿನಲ್ಲಿ ಅಥವಾ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡುವಂತೆ ಮಾಡುವ ಹುನ್ನಾರವಿದ್ದರೆ ಸತ್ಯಾಸತ್ಯತೆಯನ್ನು ಹೊರಗೆ ತರಲು ಸರ್ಕಾರವು ತನಿಖೆಗೆ ಆದೇಶಿಸಿಲ್ಲವೇಕೆ ಎಂದು ಪ್ರಶ್ನಿಸಿದ್ದರು.

ಅಲ್ಲದೆ ಆರೋಪ ಮಾಡಿದವರು ಸಾಕ್ಷಿ ನೀಡಿದ್ದಾರೆಯೇ ಇಲ್ಲದಿದ್ದರೆ ಅವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗವುದೇ ಎಂದು ಕೇಳಿದ್ದ ಪ್ರಶ್ನೆಗೂ ‘ಉದ್ಭವಿಸುವುದಿಲ್ಲ’ ಎಂದು ಯಡಿಯೂರಪ್ಪ ಅವರು ಉತ್ತರಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಸಿಡಿ ಬಾಂಬ್ ಸಿಡಿಸಿದ್ದ ಬಿಜೆಪಿ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ನೋಡಲು ಆಗದಂತಹ ಯಡಿಯೂರಪ್ಪ ಸಿಡಿಗಳೂ ಇವೆ ಎನ್ನುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದರು.

‘ನಾನು ನೇರವಾಗಿ ಮುಖ್ಯಮಂತ್ರಿಗಳ ಬಗ್ಗೆಯೇ ಮಾತನಾಡಿದ್ದೇನೆ. ಯಡಿಯೂರಪ್ಪನವರ ಸಿಡಿಗಳಲ್ಲೇ ಇಟ್ಟುಕೊಂಡು ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ. ಕಾಲ ಕ್ರಮೇಣದಲ್ಲಿ ಈ ಸಿಡಿಗಳು ಬಹಿರಂಗ ಆಗುವ ಸಾಧ್ಯತೆ ಇದೆ. ಹೀಗಾಗಿ ಮುಕ್ತ ತನಿಖೆಯಾಗಬೇಕಾದರೆ ಸಿಬಿಐ ತನಿಖೆಗೆ ಕೊಡಬೇಕು,’ ಎಂದು ಯತ್ನಾಳ್‌ ಹೇಳಿದ್ದರು.

‘ಸಿ ಡಿ ತೋರಿಸಿ ಹೆದರಿಸಿ ಮಂತ್ರಿಯಾದವರ ಬಗ್ಗೆ ನಾನು ಮಾತನಾಡಿದ್ದು ನಿಜ. ಸಿಡಿಗಳಲ್ಲಿ ಭ್ರಷ್ಟಾಚಾರ ಆರೋಪದ ಸಿಡಿಗಳು ಮಾತ್ರವಲ್ಲ, ನೋಡಲು ಆಗದಂತಹ ಸಿಡಿಗಳೂ ಇವೆ. ಈ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಯತ್ನಾಳ್ ಅವರು ಆಗ್ರಹಿಸಿದ್ದರು. ಕೆಲ ತಿಂಗಳ ಹಿಂದೆ 3 ಜನ ನನ್ನ ಹತ್ತಿರ ಬಂದು ಕೆಲ ಸಿಡಿಗಳನ್ನು ತೋರಿಸಿದರು. ನಾನು ಸಿಡಿಗಳನ್ನು ಇಟ್ಟುಕೊಂಡು ಆಟವಾಡುವ ವ್ಯಕ್ತಿ ನಾನಲ್ಲ. ಅಂತಹ ಆಟ ಆಡಿದ್ದರೆ ಎಂದೋ ಡಿಸಿಎಂ ಆಗುತ್ತಿದ್ದೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದನ್ನು ಸ್ಮರಿಸಬಹುದು.

ಇದೊಂದು ಲಂಪಟ ಸಂಪುಟ. ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಎನ್ನುವುದೇ ಇಲ್ಲ. ಹಾದಿಬೀದಿಯಲ್ಲಿ ಜಗಜ್ಜಾಹೀರಾಗಿರುವ ಸಾರ್ವಜನಿಕವಾಗಿ ಬಹಿರಂಗವಾಗಿರುವ ಪತ್ರಿಕೆಗಳಲ್ಲಿ ಪುಟಗಟ್ಟಲೇ ಬರೆಯಲ್ಪಟ್ಟಿರುವ, ನ್ಯೂಸ್‌ ಚಾನಲ್‌ಗಳಲ್ಲಿ ದಿನಗಟ್ಟಲೇ ಚರ್ಚಿಸಲ್ಪಟ್ಟಿರುವ, ಆಡಳಿತ ಪಕ್ಷದ ಶಾಸಕರೇ ಸಾರ್ವಜನಿಕವಾಗಿ ಹೇಳಿರುವ ವಿಷಯ ಸರ್ಕಾರದ ಗಮನಕ್ಕೇ ಬಂದಿಲ್ಲ ಎನ್ನುವುದು ನಾಚಿಕೆಗೇಡಿತನ ಪರಮಾವಧಿ. ಇಷ್ಟೊಂದು ಲಜ್ಜೆಗೆಟ್ಟ ಸರ್ಕಾರವನ್ನು ಕರ್ನಾಟಕ ಹಿಂದೆಂದೂ ಕಂಡಿರಲಿಲ್ಲ. ಪ್ರಶ್ನೆ ಕೇಳಿದ ಶಾಸಕರು ನಿಜಕ್ಕೂ ಗಂಭೀರವಾಗಿದ್ದರೆ ತಮಗೆ ಸುಳ್ಳು ಮಾಹಿತಿ ನೀಡಿರುವ ತಮ್ಮ ಹಕ್ಕಿಗೆ ಚ್ಯುತಿ ತಂದಿರುವ ಮುಖ್ಯಮಂತ್ರಿ ವಿರುದ್ಧವೇ ಹಕ್ಕು ಚ್ಯುತಿ ಮಂಡಿಸಬೇಕು.

ರವಿ ಕೃಷ್ಣಾರೆಡ್ಡಿ, ಅಧ್ಯಕ್ಷರು, ಕರ್ನಾಟಕ ರಾಷ್ಟ್ರಸಮಿತಿ

ಡಿ ಕೆ ಶಿವಕುಮಾರ್, ಜಮೀರ್ ಅಹಮದ್ ಖಾನ್ ಬಳಿಯೂ ಹಲವು ಮಹತ್ವದ ಸಿಡಿಗಳಿವೆ. ಯಡಿಯೂರಪ್ಪ-ವಿಜಯೇಂದ್ರ ಜತೆ ಕಾಂಗ್ರೆಸ್ ನಾಯಕರು ಅಡ್ಜಸ್ಟ್ ಮೆಂಟ್ ಮಾಡಿಕೊಂಡಿದ್ದಾರೆ. ಇಲ್ಲ ಎನ್ನುವುದಾದರೆ ಸಿಡಿ ರಿಲೀಸ್ ಮಾಡಿ ನಿಜವಾದ ಪ್ರತಿಪಕ್ಷ ಎಂಬುದನ್ನು ಸಾಬೀತು ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಯತ್ನಾಳ್‌ ಅವರು ಸವಾಲು ಹಾಕಿದ್ದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನನ್ನ ಬೆಂಬಲ ಕೋರಿದ್ದ ಮೂವರು ಇದೀಗ ಯಡಿಯೂರಪ್ಪ ಅವರನ್ನು ಹೆದರಿಸಿ ಸಿ. ಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ, ಹಣ ನೀಡಿ ಸಚಿವ ಸ್ಥಾನ ಪಡೆದುಕೊಂಡು ಸಂಪುಟ ಸೇರಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದರು.
ಆದರೆ ಆ ಸಿ.ಡಿ ಯಾರದ್ದು..? ಅದರಲ್ಲಿ ಏನಿದೆ..? ಯಾರ ಬಳಿ ಇದೆ..? ಎನ್ನುವುದು ಮಾತ್ರ ಸ್ಪಷ್ಟವಾಗಿ ಹೇಳಿರಲಿಲ್ಲ. ಇದರಿಂದ ಈ ಸಿಡಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img