Saturday | June 20, 2026 |

ರೆಡ್ಡೀಸ್‌ ಲ್ಯಾಬ್‌ ಉದ್ಧಟತನ!; ಮಾರುಕಟ್ಟೆಗೆ 25,117 ರೆಮ್‌ಡಿಸಿವಿರ್‌ ವಯಲ್‌, ಸರ್ಕಾರಕ್ಕೆ ಒಂದೂ ಇಲ್ಲ

Support THE-FILE

spot_img

ಬೆಂಗಳೂರು; ಡಿ2ಜಿ ತಯಾರಿಸುತ್ತಿರುವ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಕಂಪನಿ ಸೇರಿ ಮೂರು ಕಂಪನಿಗಳು ಏಪ್ರಿಲ್‌ 21ರಿಂದ ಮೇ 16ರವರೆಗೂ ಒಂದೇ ಒಂದು ರೆಮ್‌ಡಿಸಿವಿರ್‌ ವಯಲ್‌ನ್ನೂ ಸರ್ಕಾರಕ್ಕೆ ಪೂರೈಕೆ ಮಾಡಿಲ್ಲ. ರೆಮ್‌ಡಿಸಿವಿರ್‌ ಹಂಚಿಕೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿದ್ದ ಗುರಿಯನ್ನು ತಲುಪಬೇಕಿದ್ದ ಈ ಮೂರು ಕಂಪನಿಗಳು ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ನೀಡದೇ ಸರ್ಕಾರದ ಸೂಚನೆಯನ್ನೂ ಗಾಳಿಗೆ ತೂರಿವೆ.

ಕೇಂದ್ರ ಸರ್ಕಾರವು ಮೇ 17ರಿಂದ ಮೇ 23ರವರೆಗೆ ವಿವಿಧ ರಾಜ್ಯಗಳ ಬಳಕೆಗಾಗಿ ಹಂಚಿಕೆ ಮಾಡಿರುವ 23 ಲಕ್ಷ ವಯಲ್ಸ್‌ನಲ್ಲಿ ರಾಜ್ಯಕ್ಕೆ 10 ಲಕ್ಷ ವಯಲ್‌ ಲಭ್ಯವಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಸೇರಿದಂತೆ ಮೂರು ಕಂಪನಿಗಳು ಈವರೆವಿಗೂ ಒಂದೇ ಒಂದು ವಯಲ್‌ ಬಿಡುಗಡೆ ಮಾಡದಿರುವುದು ಮುನ್ನೆಲೆಗೆ ಬಂದಿದೆ.

2021ರ ಏಪ್ರಿಲ್‌ 21ರಿಂದ ಮೇ 16ವರೆಗೆ ರಾಜ್ಯ ಸರ್ಕಾರಕ್ಕೆ 1,83,625 ವಯಲ್‌ಗಳು ಬಿಡುಗಡೆಯಾಗಿವೆ. ಇದೇ ಅವಧಿಯಲ್ಲಿ ಮುಕ್ತ ಮಾರುಕಟ್ಟೆಗೆ 3,31,927 ವಯಲ್‌ ಸೇರಿದಂತೆ ಒಟ್ಟು 5,15,552 ವಯಲ್‌ಗಳು ಸರಬರಾಜು ಆಗಿವೆ.

ಡಾ ರೆಡ್ಡೀಸ್‌ ಲ್ಯಾಬೋರೇಟರಿಗೆ ಒಟ್ಟು 43,700 ವಯಲ್‌ಗಳ ಹಂಚಿಕೆಗೆ ಗುರಿ ನಿಗದಿಪಡಿಸಲಾಗಿತ್ತು. ಆದರೆ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಮೇ 16ರ ಅಂತ್ಯಕ್ಕೆ ಮುಕ್ತ ಮಾರುಕಟ್ಟೆಗೆ 25,117 ವಯಲ್‌ಗಳನ್ನು ಬಿಡುಗಡೆ ಮಾಡಿದೆಯೇ ವಿನಃ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ಸರಬರಾಜು ಮಾಡದಿರುವುದು ಔಷಧ ನಿಯಂತ್ರಕರ ಕಚೇರಿ ದಾಖಲೆಗಳಿಂದ ತಿಳಿದು ಬಂದಿದೆ.

ಅದೇ ರೀತಿ ಹಿಟಾರಿಯೋ, ಸಿಪ್ಲಾ ಮತ್ತು ಕ್ಯಾಡಿಲಾ ಕಂಪನಿಯೂ ಸಹ ರಾಜ್ಯ ಸರ್ಕಾರಕ್ಕೆಒಂದೇ ಒಂದು ವಯಲ್‌ ಬಿಡುಗಡೆ ಮಾಡಿಲ್ಲ. ಆದರೆ ಹಿಟಾರಿಯೋ ಕಂಪನಿಯು 1,43,250 ಮತ್ತು ಕ್ಯಾಡಿಲಾ ಕಂಪನಿಯು 400, ಸಿಪ್ಲಾ ಕಂಪನಿಯು 53,860 ವಯಲ್‌ಗಳನ್ನು ಮುಕ್ತ ಮಾರುಕಟ್ಟೆಗೆ ಪೂರೈಕೆ ಮಾಡಿರುವುದು ದಾಖಲೆಯಿಂದ ಗೊತ್ತಾಗಿದೆ.

ಏಪ್ರಿಲ್‌ 21ರಿಂದ ಮೇ 9ರವರೆಗೆ ಒಟ್ಟು 7 ಕಂಪನಿಗಳು ಒಟ್ಟು 3,01,300 ವಯಲ್‌ಗಳನ್ನು ಸರಬರಾಜು ಮಾಡಬೇಕಿತ್ತು. ಹಿಟಾರಿಯೋ ಕಂಪನಿಯು 83,000, ಮೈಲಾನ್‌ 1,27,300, ಸಿಪ್ಲಾ 30,000, ಸಿನ್‌ಜಿನ್‌ 27,000, ಜ್ಯುಬಿಲಿಯೆಂಟ್‌ 32,000, ಡಾ ರೆಡ್ಡೀಸ್‌ 2,000 ವಯಲ್‌ಗಳನ್ನು ಹಂಚಿಕೆ ಮಾಡಲು ಗುರಿ ನಿಗದಿಪಡಿಸಲಾಗಿತ್ತು.

ನಿಗದಿತ ಗುರಿ ಪ್ರಕಾರ ರೆಮ್‌ಡಿಸಿವಿರ್‌ಗಳನ್ನು ಪೂರೈಕೆ ಮಾಡದ ಕಾರಣಕ್ಕೆ ನೋಟೀಸ್‌ ನೀಡಿದ ನಂತರವೂ ಡಾ ರೆಡ್ಡೀಸ್‌, ಹಿಟಾರಿಯೋ ಕಂಪನಿ ರಾಜ್ಯ ಸರ್ಕಾರಕ್ಕೆ ಒಂದೇ ಒಂದು ವಯಲ್‌ ಬಿಡುಗಡೆ ಮಾಡದೇ ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದು ಲಾಭಕೋರತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img