Monday | September 14, 2026 |

ಕೋವಿಡ್‌ 2ನೇ ಅಲೆ ಹೊಡೆತ; 60,000 ಕೋಟಿ ನಷ್ಟ, ಶೇ.14.73ಕ್ಕೇರಿದ ನಿರುದ್ಯೋಗದ ಮಟ್ಟ

Support THE-FILE

spot_img

ಬೆಂಗಳೂರು; ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಮೇ ತಿಂಗಳ ಆರಂಭದಲ್ಲಿಇಯೇ ಸುಮಾರು 60,000 ಕೋಟಿ ರು. (8 ಬಿಲಿಯನ್‌) ನಷ್ಟವಾಗಿದೆ. ಅಲ್ಲದೆ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇ.3.75ನಷ್ಟು ನಷ್ಟವಾಗಿದೆ. ಮೇ 23ರ ಅಂತ್ಯಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ಮಟ್ಟವು ಶೇ.14.73ರಷ್ಟಿದೆ.

ಮೇ ತಿಂಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ತಂದೊಡ್ಡಿರುವ ಆರ್ಥಿಕ ಪರಿಣಾಮಗಳ ಕುರಿತು ಸೆಂಟರ್‌ ಫಾರ್‌ ಮಾನಿಟಿರಿಂಗ್‌ ಇಂಡಿಯನ್‌ ಎಕಾನಮಿ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ ನಿರುದ್ಯೋಗ ಮಟ್ಟವು ನಗರ ಭಾರತದಲ್ಲಿ ಶೇ.17ಕ್ಕಿಂತ ಹೆಚ್ಚು ಹಾಗೂ ಗ್ರಾಮೀಣ ಭಾರತದಲ್ಲಿ ಸುಮಾರು ಶೇ.14ರಷ್ಟಿದೆ.

2021ರ ಏಪ್ರಿಲ್‌ನಲ್ಲಿ ನಿರುದ್ಯೋಗ ದರವು ಶೇ.8ಕ್ಕೇರಿತ್ತು. ಮಾರ್ಗಸೂಚಿಗಳ ಪೈಕಿ ಕೆಲವೊಂದನ್ನು ಸಡಿಲಿಸಿದ ಪರಿಣಾಮ ಕಾರ್ಮಿಕರ ಭಾಗವಹಿಸುವಿಕೆಯು ಶೇ.40ರಷ್ಟಿತ್ತು. ಆದರೆ ಮೇ ತಿಂಗಳಲ್ಲಿ ಇದರ ಪ್ರಮಾಣ ಕುಸಿಯಲಾರಂಭಿಸಿತು. ಹೀಗಾಗಿ ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿದಿದೆ. ಮೇ 23ಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ದರವು ಶೇ.14.5ಕ್ಕೇರಿತು. ಏಪ್ರಿಲ್ 2020 ರಲ್ಲಿ ಭಾರತವು ಸಾಂಕ್ರಾಮಿಕ ರೋಗಕ್ಕೆ ತುತ್ತಾದಾಗ ಸುಮಾರು 126 ಮಿಲಿಯನ್ ಉದ್ಯೋಗ ನಷ್ಟವಾಗಿತ್ತು ಎಂಬುದನ್ನು ಸಮೀಕ್ಷೆಯು ಹೊರಗೆಡವಿದೆ.

2020ರಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದ ಉದ್ಯೋಗ ಮಾರುಕಟ್ಟೆ ಸೆಪ್ಟಂಬರ್‌ನಲ್ಲಿ ಚೇತರಿಕೆ ಕಂಡಿತ್ತಲ್ಲದೇ ಡಿಸೆಂಬರ್ ಹೊತ್ತಿಗೆ ಸ್ವಲ್ಪಮಟ್ಟಿಗೆ ಸುಧಾರಣೆ ಆಗಿತ್ತು. ಆದರೆ ಎರಡನೇ ಅಲೆ ಆರಂಭವಾದ ಜನವರಿಯಲ್ಲಿ ಕುಸಿಯಲಾರಂಭಿಸಿತು. ಮಾರ್ಚ್‌ವರೆಗೂ ಇದೇ ಸ್ಥಿತಿಯಲ್ಲಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಸಂಬಳ ಪಡೆಯುವ ಉದ್ಯೋಗಗಳಲ್ಲಿ ಕುಸಿತ ಸ್ಥಿರವಾಗಿದೆ. ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ಮೊದಲು ದೇಶದಲ್ಲಿ 403.5 ಮಿಲಿಯನ್‌ ಉದ್ಯೋಗಗಳಿದ್ದವು. ಡಿಸೆಂಬರ್‌ 2020 ಮತ್ತು ಜನವರಿ 2021ರಲ್ಲಿ 400 ಮಿಲಿಯನ್‌ಗಿಳಿದಿತ್ತು. ಕೋವಿಡ್‌ 2ನೇ ಅಲೆ ಹೊಡೆತಕ್ಕೆ ಉದ್ಯೋಗ ಮಾರುಕಟ್ಟೆ ಸಿಲುಕಿದ ಪರಿಣಾಮ ಉದ್ಯೋಗಗಳ ಸಂಖ್ಯೆಯನ್ನು 3.5 ಮಿಲಿಯನ್‌ಗಿಳಿಸಲಾಗಿದೆ. ಇದೇ ಹೊತ್ತಿನಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಪ್ರಮಾಣವೂ ಕುಸಿಯಲಾರಂಭಿಸಿವೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img