Sunday | September 13, 2026 |

ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿದರೆ ನಿವೃತ್ತಿ; ಅಮಿತ್‌ ಷಾಗೆ ವಿಜಯೇಂದ್ರ ಸವಾಲು?

Support THE-FILE

spot_img

ಬೆಂಗಳೂರು: ಯಾವುದಾದರೂ ಭ್ರಷ್ಟಾಚಾರದ ಆರೋಪಗಳಿದ್ದರೆ ಅವುಗಳನ್ನು ದಾಖಲೆ ಸಮೇತ ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ ಹೊಂದಲು ಸಿದ್ಧನಿದ್ದೇನೆ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರಿಗೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರನೂ ಆದ ಬಿ.ವೈ.ವಿಜಯೇಂದ್ರ ಸವಾಲು ಹಾಕಿ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವಂತಹ ರಾಜಕೀಯ ಬೆಳವಣಿಗೆಗಳು ಬಿರುಸಿನಿಂದ ನಡೆಯುತ್ತಿರುವುದು ಮತ್ತು ಬಿ ವೈ ವಿಜಯೇಂದ್ರ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿ ವೈ ವಿಜಯೇಂದ್ರ ಅವರು ಅಮಿತ್‌ ಶಾ ಅವರಿಗೆ ಸವಾಲು ಎಸೆದು ಬಂದಿದ್ದಾರೆ ಎಂಬ ಸುದ್ದಿ ಇದೀಗ ಮುನ್ನೆಲೆಗೆ ಬಂದಿದೆ. ಅಲ್ಲದೆ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಬೆಂಬಲ ಕೋರುವಂತಹ ನಡೆದಿರುವ ಬೆಳವಣಿಗೆಗಳು ಇನ್ನಷ್ಟು ಮಹತ್ವ ಪಡೆದುಕೊಂಡಿವೆ.

ಜೂನ್ 9ರ ಮಧ್ಯಾಹ್ನ ಚಿತ್ರದುರ್ಗದ ಮುರುಘಾ ಮಠಕ್ಕೆ ದಿಢೀರ್ ಭೇಟಿ ನೀಡಿ ಮುರುಘಾ ಶರಣರ ನೇತೃತ್ವದಲ್ಲಿ 10ಕ್ಕೂ ಹೆಚ್ಚು ದಲಿತ ಮತ್ತು ಹಿಂದುಳಿದ ಮಠಾಧೀಶರನ್ನು ವಿಜಯೇಂದ್ರ ಅವರು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದರು ಎಂದು ವಿಶ್ವಸನೀಯ ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ.

ಮಠದಲ್ಲಿ ಆಯೋಜಿಸಿದ್ದ ಹೋಳಿಗೆ ಸೀಕರಣೆಯ ಪ್ರಸಾದ ಸ್ವೀಕರಿಸಿದ ನಂತರ ಎಲ್ಲ ಮಠಾಧೀಶರೊಂದಿಗೆ ವಿಜಯೇಂದ್ರ ಅವರು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. “ನಾನು ಇತ್ತೀಚೆಗೆ ದೆಹಲಿಗೆ ಹೋಗಿದ್ದ ಸಂದರ್ಭದಲ್ಲಿ ಅಮಿತ್ ಷಾ ಅವರನ್ನು ಭೇಟಿ ಮಾಡಿ, ಈ ಕುರಿತು ಸ್ಪಷ್ಟವಾದ ಮಾತುಗಳಲ್ಲಿ ಹೇಳಿ ಬಂದಿದ್ದೇನೆ” ಎಂದು ತಿಳಿಸಿದ್ದೇನೆ ಎಂದು ಮಾಹಿತಿ ಹಂಚಿಕೊಂಡರು ಎಂದು ಗೊತ್ತಾಗಿದೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದ್ದಾರೆ ಎಂದು ಹೇಳಿರುವ ಕೆಲ ಮೂಲಗಳು “ಇನ್ನೂ ಎರಡು ವರ್ಷಗಳ ಕಾಲ ನಮ್ಮ ತಂದೆಯವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಲು ಸಾಧ್ಯವಿಲ್ಲ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬುದು ತಿಳಿದು ಬಂದಿದೆ.

“ಈ ಮೊದಲಿಗೆ ನಮ್ಮಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರ ವಿರುದ್ಧ ಹಲವಾರು ಸುಳ್ಳು ಕೇಸುಗಳನ್ನು ಹಾಕಲಾಗಿತ್ತು. ಅವುಗಳನ್ನು ಎದುರಿಸಲು ನಾನು ಕಳೆದ 10 ವರ್ಷಗಳಿಂದ ಬಹಳಷ್ಟು ಹೋರಾಟ ಮಾಡಿದ್ದೇನೆ. ಸನ್ಮಾನ್ಯ ಯಡಿಯೂರಪ್ಪ ಒಬ್ಬ ಮುತ್ಸದ್ದಿ ರಾಜಕಾರಣಿ. ಅಂಥವರು ಯಾವುದೇ ಕಾರಣಕ್ಕೂ ಅಧಿಕಾರದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ವಿಶೇಷವಾಗಿ ನನ್ನ ಮೇಲಿದೆ. ಅದಕ್ಕಾಗಿ ಅವರನ್ನು ಅಧಿಕಾರದಲ್ಲಿ ಉಳಿಸಿಕೊಳ್ಳಲು ನಾನು ಎಲ್ಲ ಪ್ರಯತ್ನ ಮಾಡುತ್ತಿದ್ದೇನೆ. ಈ ದಿಸೆಯಲ್ಲಿ ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದ ನನ್ನ ಮೇಲಿರಲಿ” ಎಂದು ಕೋರಿದ್ದಾಗಿ ಮೂಲಗಳು ವಿವರಿಸಿವೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸ್ವಾಮೀಜಿಯೊಬ್ಬರು ಮಾತನಾಡಿ, “ಯಡಿಯೂರಪ್ಪನವರು ಶೋಷಿತರ ಪರವಾಗಿ ಇದ್ದಾರೆ. ಮಠಗಳಿಗೆ ಅನುದಾನ ಒದಗಿಸುವ ಪರಂಪರೆ ಆರಂಭಿಸಿದ್ದೇ ಯಡಿಯೂರಪ್ಪ. ಹೀಗಾಗಿ ಅವರ ಜೊತೆ ನಾವಿದ್ದೇವೆ” ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಮುರುಘಾಮಠದ ಪೀಠಾಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರು, ರಾಜನಹಳ್ಳಿಯ ವಾಲ್ಮೀಕಿ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಹೊಸದುರ್ಗದ ಉಪ್ಪಾರ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಶಿರಸಿಯ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಾವೇರಿ ಹೊಸಮಠದ ಶಾಂತಲಿಂಗ ಸ್ವಾಮೀಜಿ, ಚಳ್ಳಕೆರೆಯ ವಿರಕ್ತ ಮಠದ ಬಸವಕಿರಣ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಚಿತ್ರದುರ್ಗದ ಭೋವಿ ಪೀಠದ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಮೇದಾರ ಪೀಠದ ಕೇತೇಶ್ವರ ಸ್ವಾಮೀಜಿ, ಖನಿಜ ನಿಗಮ ಮಂಡಳಿ ಅಧ್ಯಕ್ಷ ಲಿಂಗಮೂರ್ತಿ ಹಾಗೂ ವರ್ತಕ ಪಟೇಲ್ ಶಿವಕುಮಾರ್ ಹಾಜರಿದ್ದರು ಎಂದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img