Monday | June 15, 2026 |

ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

Support THE-FILE

spot_img

ಬೆಂಗಳೂರು; ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟ ಸಂಭವಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೊಳಗಾಗಿರುವ ಬಿಡಿಎನ ಹಾಲಿ ಆಯುಕ್ತ ಐಎಎಸ್‌ ಅಧಿಕಾರಿ ರಾಜೇಶ್‌ಗೌಡ, ಚೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಜಯ ವಿಭವಸ್ವಾಮಿ ಮತ್ತು ಒಬ್ಬ ಕೆಎಎಸ್‌ ಅಧಿಕಾರಿ ಸೇರಿದಂತೆ ಒಟ್ಟು 8 ಅಧಿಕಾರಿಗಳ ವಿರುದ್ಧ ಸಹಕಾರ ಇಲಾಖೆ ಈವರೆಗೂ ಕ್ರಮ ಕೈಗೊಂಡಿಲ್ಲ.

ಅಲ್ಲದೆ ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾಪಿಸಿಲ್ಲ. ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟಕ್ಕೆ ಕಾರಣರಾಗಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಈ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಪಟ್ಟಿಯನ್ನೂ ತಯಾರಿಸಿ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸಲು ಸೂಚಿಸಿ 6 ತಿಂಗಳಾದರೂ ಈವರೆಗೂ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ. ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಕೂಡ ಈ ಕುರಿತು ಗಮನಹರಿಸಿಲ್ಲ ಎಂದು ಗೊತ್ತಾಗಿದೆ.

2015-16ರಲ್ಲಿ ರಾಜ್ಯದಲ್ಲಿ ಜಾರಿಗೊಂಡಿದ್ದ ಡಬ್ಲ್ಯೂಐಎಫ್‌, ಎನ್‌ಡಬ್ಲ್ಯೂಎಸ್‌ ಮತ್ತು ಗ್ರಾಮೀಣ ಮೂಲಸೌಕರ್ಯಗಳ ಯೋಜನೆ ಅನುಷ್ಠಾನದಲ್ಲಿ ಆಡಳಿತ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಬಿಡಿಎ ನ ಹಾಲಿ ಆಯುಕ್ತ ಐಎಎಸ್‌ ಅಧಿಕಾರಿ ರಾಜೇಶ್‌ಗೌಡ ಮತ್ತು ಮತ್ತೊಬ್ಬ ಐಎಎಸ್‌ ಅಧಿಕಾರಿ ಜಯ ವಿಭವ ಸ್ವಾಮಿ ಸೇರಿದಂತೆ ಒಟ್ಟು 8 ಅಧಿಕಾರಿಗಳು ಗುರಿಯಾಗಿದ್ದರು.

ಬಿಡಿಎ ಆಯುಕ್ತ ಐಎಎಸ್‌ ಅಧಿಕಾರಿ ರಾಜೇಶ್‌ಗೌಡ, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಐಎಎಸ್‌ ಅಧಿಕಾರಿ ಜಯ ವಿಭವಸ್ವಾಮಿ, ಕೆಎಎಸ್‌ ಅಧಿಕಾರಿ ಡಾ ಎನ್‌ ನವೀನ್‌ಕುಮಾರ್‌ ರಾಜು, ಕಾರ್ಯಪಾಲಕ ಅಭಿಯಂತರ ಹನುಮಂತರಾಯಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಅರಣಿ ಗಿರೀಶ್‌, ಮಲ್ಲಿಕಾರ್ಜುನ ಆಲೀಪುರ, ಸಿ ಎಸ್‌ ಹೆಗಡೆ ಮತ್ತು ಸಿ ಎಸ್‌ ಗಾಂಜಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಡಾ ಆನಂದ ಕೆ ಅವರು ಸಹಕಾರ ಇಲಾಖೆಗೆ 2021ರ ಆಗಸ್ಟ್‌ 17ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿ ಆರ್‌ ಬೆನಕನಹಳ್ಳಿ ಅವರು ವರದಿ ನೀಡಿದ್ದರು. ‘ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೇ ವಿಳಂಬ ಮಾಡಿದ್ದರಿಂದ ಅಭಿವೃದ್ಧಿ ಕುಂಠಿತವಾಗಿತ್ತಲ್ಲದೆ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದರು. ಏರಿಕೆ ವೆಚ್ಚವನ್ನು ಶೇ.50ಕ್ಕಿಂತಲೂ ಹೆಚ್ಚಳಗೊಳಿಸಿದ್ದರು. ಈ ಪ್ರಕರಣದಲ್ಲಿ 8 ಅಧಿಕಾರಿಗಳು ಭಾಗಿಯಾಗಿದ್ದಾರೆ. ಇದೊಂದು ಗಂಭೀರ ದುರ್ನಡತೆ,’ ಎಂದು ಬೆನಕನಹಳ್ಳಿ ಅವರು ವರದಿಯಲ್ಲಿ ಉಲ್ಲೇಖಿಸಿರುವುದು ಡಾ ಆನಂದ ಅವರು ಬರೆದಿರುವ ಪತ್ರದಿಂದ ತಿಳಿದು ಬಂದಿದೆ.

‘ಇಬ್ಬರು ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-1)ಗೆ ಪ್ರಸ್ತಾಪ ಸಲ್ಲಿಸಬೇಕು. ಕೆಎಎಸ್‌ ಅಧಿಕಾರಿ ಮತ್ತು ಉಳಿದ 4 ಮಂದಿ ಅಧಿಕಾರಿಗಳು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಜಂಟಿ ಇಲಾಖೆ ವಿಚಾರಣೆ ಕೈಗೊಳ್ಳಲು ಅನುವಾಗುವಂತೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆದು ಇಲಾಖೆ ಅನುಮೋದನೆಯೊಂದಿಗೆ ಕರಡು ದೋಷಾರೋಪಣೆ ಪಟ್ಟಿ ತಯಾರಿಸಬೇಕು ಎಂದು 2021ರ ಮಾರ್ಚ್‌ ಮತ್ತು ಮೇ 25ರಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಕೋರಿತ್ತು,’ ಎಂಬ ಮಾಹಿತಿ ಪತ್ರದಿಂದ ಗೊತ್ತಾಗಿದೆ.

ಕಳೆದ ಮಾರ್ಚ್‌ ಮತ್ತು ಮೇ ತಿಂಗಳಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಪತ್ರ ಬರೆದಿದ್ದರೂ ಸಹಕಾರ ಇಲಾಖೆಯ ಹಿಂದಿನ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಅವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌ ಜಯರಾಮ್‌ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಮೇಲೂ ಇಲಾಖೆಯು ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img