Sunday | June 14, 2026 |

ಪಿಂಚಣಿ, ನಿವೃತ್ತಿ ಸೌಲಭ್ಯದ ಮೇಲೆ ಕಣ್ಣು;1.28 ಲಕ್ಷ ಕೋಟಿ ಅನುತ್ಪಾದಕ ವೆಚ್ಚ ಕಡಿತ!

Support THE-FILE

spot_img

ಬೆಂಗಳೂರು; ಒಕ್ಕೂಟ ಸರ್ಕಾರವು ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಮೊತ್ತದ ಬಿಡುಗಡೆಗೆ ಒತ್ತಡ ಹೇರಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಹೊರಗುತ್ತಿಗೆ, ದಿನಗೂಲಿ ನೌಕರರ ವೇತನ ಸೇರಿದಂತೆ ಒಟ್ಟು 6 ವಿಭಾಗಗಳಲ್ಲಿನ 1.28 ಲಕ್ಷ ಕೋಟಿ ರು. ಮೊತ್ತದ ಅನುತ್ಪಾದಕ ವೆಚ್ಚವನ್ನು ಕಡಿತಗೊಳಿಸಲು ಮುಂದಾಗಿದೆ.

ಇದಕ್ಕೆ ಪೂರಕವಾಗಿ ಒಂದೇ ಉದ್ದೇಶವಿರುವ ರಾಜ್ಯ ಸರ್ಕಾರದ ಯೋಜನೆಗಳನ್ನು ಕೇಂದ್ರ ಸರ್ಕಾರದ ಯೋಜನೆಗಳೊಂದಿಗೆ ಸಮೀಕರಣ ಮಾಡಿ ಸಿಬ್ಬಂದಿ ಸಂಖ್ಯೆ ಕಡಿತಗೊಳಿಸಿ ನಿರ್ವಹಣೆ ವೆಚ್ಚಗಳನ್ನು ಕಡಿಮೆಗೊಳಿಸಲು ಉದ್ದೇಶಿಸಿದೆ. ಇದರಲ್ಲಿ ಪಿಂಚಣಿ, ನಿವೃತ್ತಿ ನಂತರದ ಸೌಲಭ್ಯಗಳೂ ಸೇರಿವೆ. ಸಂಪನ್ಮೂಲ ಕ್ರೋಢೀಕರಣದಲ್ಲಿ ಹಿಂದೆ ಬಿದ್ದಿರುವ ರಾಜ್ಯ ಬಿಜೆಪಿ ಸರ್ಕಾರವು ಅನುತ್ಪಾದಕ ವೆಚ್ಚಗಳ ಕಡಿಮೆಗೊಳಿಸುವ ನೆಪದಲ್ಲಿ ಪಿಂಚಣಿ ಮತ್ತು ನಿವೃತ್ತಿ ನಂತರದ ಸೌಲಭ್ಯಗಳಿಗೂ ಕತ್ತರಿ ಹಾಕಲು ಹೊರಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿರವಿಕುಮಾರ್‌ ಅವರು ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ 2021ರ ಸೆಪ್ಟಂಬರ್‌ 2ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜ್ಯದ ಒಟ್ಠಾರೆ ಆಯವ್ಯಯ 2,46,206,92 ಕೋಟಿ ರು.ಗಳ ಪೈಕಿ 1,17,287,80 ಕೋಟಿ ರು. ಉತ್ಪಾದಕತೆ ಆಯವ್ಯಯ ಮತ್ತು 1,28,919.13 ಕೋಟಿ ರು. ಅನುತ್ಪಾದಕ ವೆಚ್ಚ ಎಂದು ಸರ್ಕಾರವು ಲೆಕ್ಕ ಹಾಕಿದೆ. ಉತ್ಪಾದಕತೆಯು ಶೇ. 48ರಷ್ಟಿದ್ದರೆ ಅನುತ್ಪಾದಕ ವೆಚ್ಚವು ಶೇ.52ರಷ್ಟಿದೆ ಎಂಬುದು ಮುಖ್ಯ ಕಾರ್ಯದರ್ಶಿಗಳು ಬರೆದಿರುವ ಪತ್ರದಿಂದ ತಿಳಿದು ಬಂದಿದೆ.

‘ಕನಿಷ್ಠ ಶೇ.5ರಷ್ಟು ಅನುತ್ಪಾದಕ ವೆಚ್ಚಗಳನ್ನು ಕಡಿಮೆಗೊಳಿಸಲು ಕ್ರಮ ಜರುಗಿಸಬೇಕು. ಒಂದೇ ಉದ್ದೇಶವಿರುವ ರಾಜ್ಯ ಸರ್ಕಾರದ ಯೋಜನೆಗಳನ್ನು ಕೇಂದ್ರ ಸರ್ಕಾರದ ಯೋಜನೆಗಳೊಂದಿಗೆ ಸಮೀಕರಣವನ್ನು ಮಾಡಿದರೆ ನಿರ್ವಹಣೆ ವೆಚ್ಚಗಳನ್ನು ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಆದಷ್ಟು ಮಟ್ಟಿಗೆ ಕಡಿಮೆಗೊಳಿಸಬಹುದಾಗಿದೆ,’ ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಸೂಚಿಸಿದ್ದಾರೆ.

ಹೊರಗುತ್ತಿಗೆ, ದಿನಗೂಲಿ ವೇತನ 5157783.58 ಲಕ್ಷ ರು., (ಶೇ.20.95) ಪಿಂಚಣಿ ಮತ್ತು ನಿವೃತ್ತಿ ಭತ್ಯೆ 2421183.74 ಲಕ್ಷ ರು.(ಶೇ.9.83) ಆಡಳಿತಾತ್ಮಕ ವೆಚ್ಚ 229568.65 ಲಕ್ಷ (ಶೇ.0.93), ನಿರ್ವಹಣಾ ವೆಚ್ಚ 404877.12 ಲಕ್ಷ (ಶೇ.1.64), ಸಾಲ ಸೇವೆ 4959949.00 ಲಕ್ಷ (ಶೇ. 20.15), ಆಂತರಿಕ ಖಾತೆಗಳ ವರ್ಗಾವಣೆ 28149.48 ಲಕ್ಷ (ಶೇ.-1.14) ರು.ಅನುತ್ಪಾದಕ ವೆಚ್ಚವೆಂದು ಸರ್ಕಾರವು ಗುರುತಿಸಿರುವುದು ಮುಖ್ಯ ಕಾರ್ಯದರ್ಶಿಗಳ ಪತ್ರದಿಂದ ಗೊತ್ತಾಗಿದೆ.

ಅನುತ್ಪಾದಕ ವೆಚ್ಚಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸಮಾನಾಂತರ ಉದ್ದೇಶವಿರುವ ರಾಜ್ಯ ವಲಯ ಯೋಜನೆಗಳನ್ನು ಕೇಂದ್ರದ ಪುರಸ್ಕೃತ ಯೋಜನೆಗಳಿಗೆ ಸಮೀಕರಿಸಿದಲ್ಲಿ ರಾಜ್ಯದ ಬೊಕ್ಕಸಕ್ಕೆ ಉಳಿತಾಯವಾಗಲಿದೆ ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ಅದೇ ರೀತಿ ವಿದ್ಯಾರ್ಥಿವೇತನ ಇನ್ನಿತರೆ ಸೌಲಭ್ಯ 91732.65 ಲಕ್ಷ (ಶೇ.20.95), ಸಬ್ಸಿಡಿ (1571377.22 ಲಕ್ಷ (ಶೆ.6.38), ಇನ್ನಿತರೆ ಯೋಜನಾ ವೆಚ್ಚ 10065670.00 ಲಕ್ಷ ರು. (ಶೇ.40.88) ಸೇರಿದಂತೆ ಒಟ್ಟು 1, 17, 287.80 ಕೋಟಿ ರು. ಉತ್ಪಾದಕ ವೆಚ್ಚವೆಂದು ಸರ್ಕಾರ ಹೇಳಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img