Tuesday | September 15, 2026 |

ಸಂಸ್ಕೃತ ವಿವಿಯಲ್ಲಿ ಅವ್ಯವಹಾರ; ಸ್ವಜಾತಿ, ಒಳಪಂಗಡಕ್ಕೆ ಮನ್ನಣೆ, ಕನ್ನಡ ಸಂಸ್ಕೃತಿಗೆ ನಿಂದನೆ

Support THE-FILE

spot_img

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸ್ವಜಾತಿ, ಒಳಪಂಗಡ, ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷಾ ಅವ್ಯವಹಾರದಲ್ಲಿ ನಿರತರಾಗಿದ್ದಾರೆ! ಆಂತರಿಕ ಅಂಕ ನೀಡಿಕೆಯಲ್ಲಿಯೂ ಪ್ರಾಧ್ಯಾಪಕರು ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಮತ್ತು ಮಲೆಯಾಳಿ ಭಾಷೆಗೆ ಒತ್ತು ನೀಡಿ ಕನ್ನಡ ಸಂಸ್ಕೃತಿಯನ್ನು ನಿಂದಿಸುತ್ತಿದ್ದಾರೆ ಎಂಬ ಗುರುತರವಾದ ಆರೋಪವೂ ಇದೀಗ ಕೇಳಿ ಬಂದಿದೆ.

ಬೆಂಗಳೂರಿನ ಅನಂತ್‌ ಐತಾಳ್‌ ಎಂಬುವರು ಈ ಕುರಿತು ಲಿಖಿತ ದೂರನ್ನು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಈ ದೂರನ್ನಾಧರಿಸಿ ಕ್ರಮ ಕೈಗೊಳ್ಳುವ ಸಂಬಂಧ ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವರಿಗೆ 2021ರ ಅಕ್ಟೋಬರ್‌ 1ರಂದು ಪತ್ರ ಬರೆದಿದ್ದಾರೆ. ದೂರಿನ ಪತ್ರ ‘ದಿ ಫೈಲ್‌’ಗೆ ಲಭ್ಯವಾಗಿದೆ.

ವಿಶ್ವವಿದ್ಯಾಲಯದದಲ್ಲಿ ಹಲವು ಪ್ರಾಧ್ಯಾಪಕರು ಕಳೆದ ಹಲವು ವರ್ಷಗಳಿಂದಲೂ ತಮಗೆ ಬೇಕಾದ ಹಾಗೆ ಮನಸೋ ಇಚ್ಛೆಯಿಂದ ವರ್ತಿಸುತ್ತಿದ್ದರೂ ಉನ್ನತ ಶಿಕ್ಷಣ ಇಲಾಖೆ ಮತ್ತು ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

‘ವ್ಯಾಕರಣ ವಿಭಾಗದ ಮುಖ್ಯಸ್ಥೆ ಶಿವಾನಿ ಅವರು ಎರಡನೇ ಷಣ್ಮಾಸಿಕದಲ್ಲಿ ಬೋಧನೆ ಸಂದರ್ಭದಲ್ಲಿ ಮಲೆಯಾಳಿ ಸಂಸ್ಕೃತಿಯನ್ನು ಹೊಗಳಿ ಕನ್ನಡ ಸಂಸ್ಕೃತಿಯನ್ನು ನಿಂದಿಸಿದ್ದಾರೆ. ಈ ಬಗ್ಗೆ ಕುಲಪತಿಗಳನ್ನು ಗಮನ ಸೆಳೆದಿದ್ದೇನೆ,’ ಎಂದು ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ದೂರಿನಲ್ಲಿ ವಿವರಿಸಿದ್ದಾರೆ.

ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪಾಠ ಪ್ರವಚನಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯುವುದಿಲ್ಲ. ಅವ್ಯವಸ್ಥೆಯಿಂದ ಕೂಡಿವೆ. ವ್ಯಾಕರಣದ ಕುರಿತು ಪ್ರಾಧ್ಯಾಪಕರಿಗೆ ಸರಿಯಾದ ತಿಳಿವಳಿಕೆ ಇಲ್ಲ. ತೋರಿಕೆಗೆ ಮಾತ್ರ ಅಲ್ಪಾವಧಿಯಲ್ಲಿಯೇ ವಿಷಯವನ್ನು ಅಪೂರ್ಣವಾಗಿ ಪೂರ್ಣಗೊಳಿಸುತ್ತಿದ್ದಾರೆ. ಹಲವು ಬಾರಿ ಕುಲಪತಿ, ಕುಲಸಚಿವರು ಮತ್ತು ವಿಭಾಗದ ಮುಖ್ಯಸ್ಥರಿಗೆ ಅನಂತ್‌ ಐತಾಳ್‌ ಅವರು ಗಮನಕ್ಕೆ ತಂದಿರುವುದು ದೂರಿನಿಂದ ತಿಳಿದು ಬಂದಿದೆ.

ಪರೀಕ್ಷಾ ಅವ್ಯವಹಾರ

ಪ್ರಥಮ ವರ್ಷದ ಷಣ್ಮಾಸಿಕ ಪರೀಕ್ಷೆ ಫಲಿತಾಂಶ ನೀಡಿಕೆಯಲ್ಲಿ ಅವ್ವವಹಾರ ನಡೆದಿದೆ ಎಂದು ದೂರಿರುವ ಅನಂತ್‌ ಐತಾಳ್‌ ಅವರು ಸ್ವ ಜಾತಿ, ಒಳಪಂಗಡ, ತಮ್ಮ ಭಾಷೆ ಆಧಾರದ ಮೇಲೆ ಅಂಕಗಳನ್ನು ನೀಡುತ್ತಿದ್ದಾರೆ. ವಿಷಯದ ಬಗ್ಗೆ ತಿಳಿವಳಿಕೆ ಇಲ್ಲದಿರುವವರಿಗೂ ಪ್ರತಿಶತ 70ರಿಂದ 80 ಅಂಕಗಳನ್ನು ನೀಡುತ್ತಿದ್ದಾರೆ ಎಂದು ಅರೋಪಿಸಿದ್ದಾರೆ.

ಕಾರೇಕಾ ವೃತ್ತಿ ಪತ್ರಿಕೆಯ ಆಂತರಿಕ ಅಂಕಗಳನ್ನು ನೀಡುವಾಗ 25 ಅಂಕಗಳಲ್ಲಿ 23 ರಷ್ಟು ಆಂತರಿಕ ಅಂಕಗಳನ್ನು ಪಡೆದಿದ್ದರೂ ಪರೀಕ್ಷೆ ಫಲಿತಾಂಶದಲ್ಲಿ 20 ಅಂಕಗಳನ್ನು ನೀಡಿ ಎಲ್ಲರಿಗಿಂತಲೂ ಕಡಿಮೆ ಅಂಕ ನಮೂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಲೋಪವನ್ನು ಸರಿಪಡಿಸಬೇಕು ಎಂದು ನೀಡಿದ್ದ ಮನವಿ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅನಂತ್‌ ಐತಾಳ್‌ ಅವರು ದೂರಿನಲ್ಲಿ ವಿವರಿಸಿದ್ದಾರೆ. ಈ ದೂರನ್ನಾಧರಿಸಿ ಕೂಡಲೇ ಕ್ರಮ ಕೈಗೊಳ್ಳಿ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್‌ನಾಯಕ್‌ ಅವರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರಿಗೆ ಸೂಚಿಸಿರುವುದು ಪತ್ರದಿಂದ ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img