Sunday | September 13, 2026 |

ವಿಧಾನಸೌಧ, ವಿಕಾಸಸೌಧ ಆವರಣದಲ್ಲೇ ಧಾರ್ಮಿಕ ಚಟುವಟಿಕೆ; ಆದೇಶ ಹೊರಡಿಸಿಲ್ಲವೆಂದ ಸರ್ಕಾರ

Support THE-FILE

spot_img

ಬೆಂಗಳೂರು;  ವಿಧಾನಸೌಧ ಮತ್ತು ವಿಕಾಸಸೌಧ ಆವರಣದಲ್ಲಿರುವ ಅರಳಿಮರದ ಬಳಿ ಧಾರ್ಮಿಕ ಕಾರ್ಯ ಚಟುವಟಿಕೆ ನಡೆಸಲು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯಕಾರಿ ಶಾಖೆಯು ಆರ್‌ಟಿಐ ಅರ್ಜಿಗೆ ಉತ್ತರ ಒದಗಿಸಿದೆ.

 

ತುಮಕೂರು ಮೂಲದ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಅವರು ಮಾಹಿತಿ ಹಕ್ಕು ಅಧಿನಿಯಮ 2005ರ ಅಡಿ ಕೇಳಿದ್ದ ಪ್ರಶ್ನೆಗೆ ‘ ವಿಧಾನಸೌಧ ಮತ್ತು ವಿಕಾಸ ಸೌಧ ಮಧ್ಯೆ ಇರುವ ಅರಳಿ ಮರದ ಬಳಿ ಧಾರ್ಮಿಕ ಕಾರ್ಯ ಚಟುವಟಿಕೆ ನಡೆಸಲು ಯಾವುದೇ ಆದೇಶವಾಗಿರುವುದಿಲ್ಲ,’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯಕಾರಿ ಶಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್‌ ನರಸಿಂಹಯ್ಯ ಅವರು 2022ರ ಫೆ.22ರಂದು ಉತ್ತರ ಒದಗಿಸಿದ್ದಾರೆ.

 

ವಿಧಾನಸೌಧ ಮತ್ತು ವಿಕಾಸಸೌಧ ಆವರಣದೊಳಗೇ ಇರುವ ಅರಳಿಮರಕ್ಕೆ ಹೊಂದಿಕೊಂಡಂತೆ ಶ್ರೀ ಅರಳಿಕಟ್ಟೆ ಮುನೇಶ್ವರಸ್ವಾಮಿ ಹೆಸರಿನಲ್ಲಿ ದೇಗುಲ ಹಲವು ವರ್ಷಗಳಿಂದಲೂ ಪೂಜೆ, ಪುನಸ್ಕಾರ ಸೇರಿದಂತೆ ಧಾರ್ಮಿಕ ಚಟುವಟಿಕೆಗಳು ಹಲವು ವರ್ಷಗಳಿಂದಲೂ ನಡೆಯುತ್ತಿವೆ ಎಂದು ತಿಳಿದು ಬಂದಿದೆ.

 

ಅದೇ ರೀತಿ ಇದೇ ದೇಗುಲದ ಮುಂಭಾಗದಲ್ಲಿ ಧಾರ್ಮಿಕ ಗುರುತುಗಳನ್ನು ಬಿಂಬಿಸುವ ತ್ರಿಶೂಲ, ಗಂಟೆಗಳನ್ನು ಇರಿಸಲಾಗಿದೆ. ಪ್ರತಿ ದಿನವೂ ಒಂದಲ್ಲ ಒಂದು ಧಾರ್ಮಿಕ ಪೂಜಾ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಸರ್ಕಾರದ ಯಾವುದೇ ಆದೇಶವಿಲ್ಲದೆ ಕಳೆದ ಹಲವು ವರ್ಷಗಳಿಂದಲೂ ಧಾರ್ಮಿಕ ಚಟುವಟಿಕೆ ನಡೆಯುತ್ತಿದ್ದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯಕಾರಿ ಶಾಖೆ ಮತ್ತು ಲೋಕೋಪಯೋಗಿ ಇಲಾಖೆಯು ಯಾವುದೇ ಕ್ರಮ ವಹಿಸಿಲ್ಲ ಎಂದು ಗೊತ್ತಾಗಿದೆ.

 

ಈ ಕುರಿತು ‘ದಿ ಫೈಲ್‌’ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಕಾರ್ಯಕಾರಿ ಶಾಖೆ) ಉಪ ಕಾರ್ಯದರ್ಶಿಯನ್ನು ಭೇಟಿ ಮಾಡಿತು. ಈ ಸಂಬಂಧ ಪ್ರತಿಕ್ರಿಯಿಸಿದ ಉಪ ಕಾರ್ಯದರ್ಶಿ ಶಶಿಧರ್‌ ಅವರು ‘ ಅರಳಿಕಟ್ಟೆ ಬಳಿ ಧಾರ್ಮಿಕ ಚಟುವಟಿಕೆ ನಡೆಸಲು ನಮ್ಮ ಶಾಖೆಯಿಂದ ಯಾವುದೇ ಆದೇಶ ಹೊರಡಿಸಿಲ್ಲ. ಈ ಸಂಬಂಧ ಆರ್‌ಟಿಐಗೆ ಉತ್ತರ ಒದಗಿಸಲಾಗಿದೆ,’ ಎಂದಷ್ಟೇ ಪ್ರತಿಕ್ರಿಯಿಸಿದರು.

 

ವಿಕಾಸ ಸೌಧ ನಿರ್ಮಾಣವಾಗುವ ಮುನ್ನ ಅರಳಿ ಮರವೊಂದು ರಸ್ತೆ ಬದಿಯಲ್ಲಿದ್ದ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಿತ್ತು. ಇದಕ್ಕೆ ಹೊಂದಿಕೊಂಡಂತೆ ಸರ್ಕಾರಿ ಮುದ್ರಣಾಲಯವೂ ಇತ್ತು. ವಿಕಾಸ ಸೌಧ ನಿರ್ಮಾಣವಾದ ನಂತರ ಅರಳಿಕಟ್ಟೆ ಮರ ಮತ್ತು ಸುತ್ತಮುತ್ತಲಿನ ಜಾಗವು ವಿಕಾಸಸೌಧದ ಆವರಣದೊಳಗೆ ಸೇರ್ಪಡೆಯಾಯಿತು. ಆರಂಭದಲ್ಲಿ ಯಾವುದೇ ದೇಗುಲವಿರಲಿಲ್ಲ. ಕ್ರಮೇಣ ಅರಳಿ ಮರಕ್ಕೆ ಸುತ್ತಲೂ ಕಟ್ಟೆ ಕಟ್ಟಲಾಯಿತಲ್ಲದೆ ಅರಳಿಕಟ್ಟೆ ಮುನೇಶ್ವರಸ್ವಾಮಿ ಎಂಬ ದೇಗುಲವೂ ಎದ್ದಿತು ಎನ್ನುತ್ತಾರೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಬ್ಬರು.

 

ಸರ್ಕಾರಿ ಕಟ್ಟಡವಾಗಿರುವ ವಿಧಾನಸೌಧ ಮತ್ತು ವಿಕಾಸಸೌಧದ ಆವರಣದಲ್ಲಿ ಒಂದು ಧರ್ಮಕ್ಕೆ ಸೀಮಿತವಾದ ಗುಡಿಯಲ್ಲಿ ಧಾರ್ಮಿಕ ಚಟುವಟಿಕೆ ನಡೆಸುತ್ತಿರುವುದು ಸಂವಿಧಾನದ ಜಾತ್ಯಾತೀತ ತತ್ವಗಳಿಗೆ ವಿರುದ್ಧವಾದ ನಿಲುವಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img