Monday | June 15, 2026 |

ಜಂಗಲ್‌ ಲಾಡ್ಜ್‌ಸ್‌ ರೆಸಾರ್ಟ್‌ನಲ್ಲೂ ಕಮಿಷನ್‌ ಆರೋಪ; ಬಿಡ್‌ನಲ್ಲಿ ಯಶಸ್ವಿಯಾದ ಕಂಪನಿಗೆ ಸಿಗದ ಕಾರ್ಯಾದೇಶ

Support THE-FILE

spot_img

ಬೆಂಗಳೂರು; ದಾಂಡೇಲಿ ವ್ಯಾಪ್ತಿಯಲ್ಲಿನ ಕಾಳಿ ನದಿಯಲ್ಲಿ ವೈಟ್‌ ವಾಟರ್‌ ರ್ಯಾಪ್ಟಿಂಗ್‌ ನಡೆಸಲು ಕರೆದಿದ್ದ ಟೆಂಡರ್‌ನಲ್ಲಿ ಬಿಡ್‌ ಮಾಡಿ ಯಶಸ್ವಿಯಾಗಿರುವ ಉತ್ತರಾಖಂಡ ಮೂಲದ ಕಂಪನಿ ಜತೆ ಒಪ್ಪಂದ ಪತ್ರಕ್ಕೆ ಸಹಿ ಮಾಡದೇ ಕಮಿಷನ್‌ಗಾಗಿ ಬೇಡಿಕೆ ಇರಿಸಿದೆ ಎಂಬ ಗುರುತರವಾದ ಆರೋಪಕ್ಕೆ ಜಂಗಲ್‌ ಲಾಡ್ಜಸ್‌ ರೆಸಾರ್ಟ್ಸ್‌ ಸಂಸ್ಥೆಯು ಗುರಿಯಾಗಿದೆ.

 

ಒಪ್ಪಂದ ಪತ್ರಕ್ಕೆ ಸಹಿ ಮಾಡದೇ ಈ ಪ್ರಕ್ರಿಯೆಯನ್ನು ತಡೆಹಿಡಿಯಲು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಜಂಗಲ್‌ ಲಾಡ್ಜ್‌ಸ್‌ ರೆಸಾರ್ಟ್ಸ್‌ ಸಂಸ್ಥೆಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ. ಕಮಿಷನ್‌ ನೀಡದೇ ಇರುವುದೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ.

 

ಅರಣ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಮಿಷನ್‌ ಮತ್ತು ಅಧಿಕಾರಿಗಳು ಉದ್ಯಮಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಬಲವಾದ ಆರೋಪಗಳು ಕೇಳಿ ಬರುತ್ತಿರುವ ಮಧ್ಯೆಯೇ ಜಂಗಲ್‌ ಲಾಡ್ಜಸ್‌ ರೆಸಾರ್ಟ್ಸ್‌ ಸಂಸ್ಥೆಯ ಈ ಪ್ರಕರಣವು ಮುನ್ನೆಲೆಗೆ ಬಂದಿದೆ. ಇದಕ್ಕೆ ಸಂಬಂಧಿಸಿದ ಟೆಂಡರ್‌ ದಾಖಲಾತಿಗಳು ಮತ್ತಿತರೆ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

 

ಪ್ರಕರಣದ ಹಿನ್ನೆಲೆ

 

ಜಂಗಲ್‌ ಲಾಡ್ಜ್‌ಸ್‌ ಮತ್ತು ರೆಸಾರ್ಟ್ಸ್‌ ಟೆಂಡರ್‌ ಪ್ರಕಟಣೆ ಸಂಖ್ಯೆ ಮೂಲಕ ಹಳಿಯಾಳ ವಿಭಾಗದ ದಾಂಡೇಲಿ ವಲಯದ ವ್ಯಾಪ್ತಿಯಲ್ಲಿನ ಕಾಳಿ ನದಿಯಲ್ಲಿ ವೈಟ್‌ ವಾಟರ್‌ ರ್ಯಾಪ್ಟಿಂಗ್‌ ನಡೆಸಲು ಟೆಂಡರ್‌ ಆಹ್ವಾನಿಸಲಾಗಿತ್ತು. 2022ರ ಫೆ.15ರಂದು ಈ ಟೆಂಡರ್‌ಗೆ ಬಿಡ್‌ ಸಲ್ಲಿಸಲು ಅಂತಿಮ ದಿನವಾಗಿತ್ತು. ಈ ಟೆಂಡರ್ ಪ್ರಕ್ರಿಯೆಯಲ್ಲಿ ಹಲವು ಕಂಪನಿಗಳು ಭಾಗವಹಿಸಿದ್ದವು. ಈ ಪೈಕಿ ಉತ್ತರಾಖಂಡದ ಹೃಷಿಕೇಷ ಮೂಲದ ಆಲ್ಗೋಟ್ರಿಪ್‌ ಹಾಸ್ಪಿಟಾಲಿಟಿ ಪ್ರೈ ಲಿ ಸಂಸ್ಥೆಯು ಬಿಡ್‌ನಲ್ಲಿ ಯಶಸ್ವಿಯಾಗಿ ಹೊರಹೊಮ್ಮಿತ್ತು.

 

ಈ ಕುರಿತು ಜಂಗಲ್‌ ಲಾಡ್ಜಸ್‌ ರೆಸಾರ್ಟ್ಸ್‌ ಸಂಸ್ಥೆಯು ಹೃಷಿಕೇಷದ ಆಲ್ಗೋಟ್ರಿಪ್‌ ಹಾಸ್ಪಿಟಲಾಟಿ ಪ್ರೈ ಲಿಮಿಟೆಡ್‌ಗೆ 2022ರ ಮಾರ್ಚ್‌ 25ರಂದು ಪತ್ರದ ಮೂಲಕ ತಿಳಿಸಿತ್ತು. ಅಲ್ಲದೆ ಇದರೊಂದಿಗೆ ಷರತ್ತುಗಳು ಮತ್ತು ನಿಯಮಾವಳಿಗಳನ್ನು ಒಳಗೊಂಡ ಒಪ್ಪಂದದ ಕರಡನ್ನೂ ಲಗತ್ತಿಸಿದ್ದರು ಎಂದು ಗೊತ್ತಾಗಿದೆ.

 

ಬಿಡ್‌ನಲ್ಲಿ ಯಶಸ್ವಿಯಾದ ಕಂಪನಿಗೆ ಜಂಗಲ್‌ ಲಾಡ್ಜ್‌ಸ್‌ ನಿರ್ದೇಶಕರು ಬರೆದಿರುವ ಪತ್ರದ ಪ್ರತಿ

 

ಟೆಂಡರ್‌ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಆಲ್ಗೋಟ್ರಿಪ್‌ ಹಾಸ್ಪಿಟಾಲಿಟಿ ಸಂಸ್ಥೆಯು ಈ ಒಪ್ಪಂದ ಪತ್ರಕ್ಕೆ ಸಹಿ ಮಾಡಿದೆ. ಆದರೆ ಈ ಒಪ್ಪಂದ ಪತ್ರಕ್ಕೆ ಜೆಎಲ್‌ಆರ್‌ ಸಂಸ್ಥೆಯುಸಹಿ ಮಾಡಿ ಕಾರ್ಯಚಟುವಟಿಕೆ ನಡೆಸಲು ಅನುಮತಿ ನೀಡುವುದಷ್ಟೇ ಬಾಕಿ ಇದೆ. ಈ ಹಂತದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಇಡೀ ಪ್ರಕ್ರಿಯೆಯನ್ನು ತಡೆಹಿಡಿಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ. ಹೀಗಾಗಿಯೇ ಜಂಗಲ್‌ ಲಾಡ್ಜಸ್‌ ರೆಸಾರ್ಟ್ಸ್‌ ಸಂಸ್ಥೆಯು ಇದುವರೆಗೂ ಸಹಿ ಮಾಡದೆ ಬಾಕಿ ಉಳಿಸಿಕೊಂಡಿದೆ ಎಂದು ತಿಳಿದು ಬಂದಿದೆ.

 

ಟೆಂಡರ್‌ ಪ್ರಕ್ರಿಯೆ ಅಂತಿಮಗೊಂಡು ಒಂದು ತಿಂಗಳು ಕಳೆದರೂ ಕೂಡ ಯಾವುದೇ ಕಾರಣ ನೀಡದೇ ತಡೆಹಿಡಿದಿರುವುದರ ಹಿಂದೆ ಕಮಿಷನ್‌ ವ್ಯವಹಾರವೇ ಮೂಲ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಚಿವರ ಈ ಸೂಚನೆಯಿಂದಾಗಿ ಸರ್ಕಾರಕ್ಕೆ ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದ.ೆ
ಒಂದೊಮ್ಮೆ ಇದಾವುದೂ ಇಲ್ಲದಿದ್ದಲ್ಲಿ ಒಪ್ಪಂದ ಪತ್ರಕ್ಕೆ ಸಹಿ ಮಾಡುವುದು ಮತ್ತು ಕಾರ್ಯಾದೇಶ ನೀಡದೇ ಬಾಕಿ ಉಳಿಸಿಕೊಂಡಿರುವುದಕ್ಕೆ ಸ್ಪಷ್ಟ ಕಾರಣ ನೀಡಬೇಕಿತ್ತು. ಆದರೆ ಈ ಯಾವ ಕಾರಣಗಳನ್ನೂ ನೀಡದೆಯೇ ಬಾಕಿ ಉಳಿಸಿಕೊಂಡಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

 

ಅಲ್ಲದೆ ಆಲ್ಗೋಟ್ರಿಪ್‌ ಹಾಸ್ಪಿಟಲಾಟಿ ಸಂಸ್ಥೆಯು ತನ್ನ ಟೆಂಡರ್‌ ನಲ್ಲಿ ಶೇ.60ಕ್ಕಿಂತ ಹೆಚ್ಚಿನ ಟಿಕೆಟ್‌ ದರದ ಮೊತ್ತವನ್ನು ಜೆಎಲ್‌ಆರ್‌ ಗೆ ನೀಡಲು ಒಪ್ಪಿದೆ. ಉಳಿದ ಸಂಸ್ಥೆಗಳು ಶೇ.50ಕ್ಕಿಂತ ಕಡಿಮೆ ಮೊತ್ತ ನಮೂದಿಸಿದ್ದವು.

 

ಆದರೆ ಇದುವರೆಗೂ ಟೆಂಡರ್‌ನಲ್ಲಿ ಆಯ್ಕೆಯಾದ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳದೇ ಈ ಹಿಂದೆ ಕಡಿಮೆ ಮೊತ್ತವನ್ನು ಹಂಚಿಕೊಳ್ಳುತ್ತಿದ್ದ ಸಂಸ್ಥೆಗೆ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಬೇಸಿಗೆ ರಜೆಯಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಈ ಸಮಯದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿರುವುದು ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img