Saturday | September 12, 2026 |

ಸಚಿವ ಬಿ ಸಿ ಪಾಟೀಲ್‌ರಿಂದ ಲಂಚ ಸಂಗ್ರಹ ಆರೋಪ; ವಸೂಲಿಗಿಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ

Support THE-FILE

spot_img

ಬೆಂಗಳೂರು; ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರ ಮೂಲಕ ಸಚಿವ ಬಿ ಸಿ ಪಾಟೀಲ್‌ ಅವರು 50 ಸಾವಿರದಿಂದ 1 ಲಕ್ಷ ರು.ವರೆಗೆ ಲಂಚ ಸಂಗ್ರಹ ಮಾಡುತ್ತಿದ್ದಾರೆ ಎಂಬ ಗುರುತರ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಸಲ್ಲಿಕೆಯಾಗಿರುವ ಹತ್ತಾರು ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಾಗೃತ ಕೋಶದ ಹೆಚ್ಚುವರಿ ನಿರ್ದೇಶಕರಿಗೆ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿನಿರ್ದೇಶನ ನೀಡಿದ್ದಾರೆ.

 

ತುಮಕೂರು ಜಿಲ್ಲೆಯ ಪಾವಗಡ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ವಿವಿಧೆಡೆ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು ಸಚಿವ ಬಿ ಸಿ ಪಾಟೀಲ್‌ ಅವರಿಗೆ ಹಣ ಸಂಗ್ರಹ ಮಾಡುತ್ತಿದ್ದಾರೆ ಎಂದು ಮಂಡ್ಯ ತಾಲೂಕಿನ ಎಂ ಡಿ ಕೇಶವಮೂರ್ತಿ ಎಂಬುವರು ದೂರು ಸಲ್ಲಿಸಿದ್ದರು. ಈ ದೂರಿನ ಮೇಲೆ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಅವರು ಜಾಗೃತ ಕೋಶದ ಹೆಚ್ಚುವರಿ ನಿರ್ದೇಶಕರಿಗೆ 2022ರ ಮೇ 25ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕೃಷಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಬರೆದಿರುವ ಪತ್ರದ ಪ್ರತಿ

 

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌, ಡಬ್ಯ್ಲೂಡಿಸಿ, ಐಡಬ್ಲ್ಯೂಎಂಪಿ, ಕೆಡಬ್ಲ್ಯೂಡಿಪಿ, ಎನ್‌ಎಂಎಸ್‌ಎ, ಆರ್‌ಎಡಿ ಮತ್ತು ನಾಲಾ ಬದು ಕಾಮಗಾರಿಗೆ ಸಂಬಂಧಿಸಿದಂತೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದೆಯೇ ಅವ್ಯವಹಾರ, ಅಕ್ರಮ ಎಸಗಿ ಕಳಪೆ ಕಾಮಗಾರಿ ನಡೆಸಲಾಗಿದೆ. ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರದ ಹಣವನ್ನೂ ಲಪಟಾಯಿಸಲಾಗಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

‘ಸಚಿವ ಬಿ ಸಿ ಪಾಟೀಲ್‌ ಅವರಿಗೆ 50 ಸಾವಿರ ರು.ಗಳಿಂದ 1 ಲಕ್ಷ ರು.ವರೆಗೆ ಲಂಚ ಸಂಗ್ರಹ ಮಾಡಿರುವ ಬಗ್ಗೆ ಸಿಬಿಐ, ಸಿಒಡಿ, ಇಡಿ, ಎಸಿಬಿ, ಲೋಕಾಯುಕ್ತ ತನಿಖೆ ನಡಸಬೇಕು. ಅಲ್ಲದೆ ಮಹಾಲೇಖಪಾಲರಿಂದ ಲೆಕ್ಕ ಪರಿಶೋಧನೆ ನಡೆಸಿ ಮೊಕದ್ದಮೆ ದಾಖಲಿಸಬೇಕು,’ ಎಂದು ಕೇಶವಮೂರ್ತಿ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ತುಮಕೂರು ಜಿಲ್ಲೆಯ ಉಪ ನಿರ್ದೇಶಕ ಅಶೋಕ ಟಿ ಎನ್‌, ಡಿ ಉಮೇಶ್‌, ತಿಪಟೂರು ತಾಲೂಕಿನ ಸಹಾಯಕ ನಿರ್ದೇಶಕ ಬಿ ಜಿ ಜಯಪ್ಪ, ಜಗನ್ನಾಥಗೌಡ, ಎನ್‌ ಕೆಂಗೇಗೌಡ, ಪಾವಗಡ ತಾಲೂಕಿನ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ (ಪ್ರಭಾರ), ಎನ್‌ ವಿಜಯಮೂರ್ತಿ, ಕೊರಟಗೆರೆ ತಾಲೂಕಿನ ಅಧಿಕಾರಿ ರಾಮಹನುಯ್ಯ, ಎಚ್‌ ನಾಗರಾಜು, ಚಿಕ್ಕನಾಯಕಹಳ್ಳಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಎಚ್‌ ಹೊನ್ನದಾಸೇಗೌಡ, ಡಿ ಅರ್‌ ಹನುಮಂತರಾಜು, ಶಿರಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಎಚ್‌ ರಂಗರಾಜು, ರಂಗನಾತ್‌, ಮಧುಗಿರಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಪರಶುರಾಮ್‌, ಹನುಮಂತಪ್ಪ, ತುರುವೆಕೆರೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಹನುಮಂತರಾಯಪ್ಪ, ಪ್ರಮೋದ್‌ ಕುಮಾರ್‌, ಬಿ ಪೂಜಾ, ಮಂಡ್ಯ ವಿಭಾಗದ ಡಿಡಿ ಪ್ರತಿಭ ಎಚ್‌ ಜಿ ಅವರ ಹೆಸರನ್ನು ಉಲ್ಲೇಖಿಸಿರುವುದು ದೂರಿನಿಂದ ತಿಳಿದು ಬಂದಿದೆ.

 

ಅಧಿಕಾರಿ, ನೌಕರರಿಂದ ಲಂಚ ಸಂಗ್ರಹಿಸುತ್ತಿದ್ದಾರೆ ಎಂದು ಬಿ ಸಿ ಪಾಟೀಲ್‌ ಅವರ ವಿರುದ್ಧ ಈ ಹಿಂದೆಯೂ ಆರೋಪ ಕೇಳಿ ಬಂದಿತ್ತು. ಈ ಕುರಿತು ಅಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ರಾಜ್ಯಪಾಲರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ದೂರು ಸಲ್ಲಿಕೆಯಾಗಿತ್ತು.

 

ಸ್ಥಳ ನಿಯೋಜನೆ, ವರ್ಗಾವಣೆ, ಹಾಲಿ ಸ್ಥಳ ಮತ್ತು ಹುದ್ದೆಯಲ್ಲಿಯೇ ಮುಂದುವರೆಸಲು ಕೃಷಿ ಇಲಾಖೆಯ ಜಂಟಿ, ಉಪ, ಸಹಾಯಕ ನಿರ್ದೇಶಕರುಗಳು ಲಂಚದ ಹಣವನ್ನು ಸಂಗ್ರಹಿಸಿ ಬಿ ಸಿ ಪಾಟೀಲ್‌ ಅವರಿಗೆ ತಲುಪಿಸಲಾಗಿದೆ ಎಂದು ಕೆಲ ಅಧಿಕಾರಿ, ನೌಕರರು ದೂರಿನಲ್ಲಿ ಪಟ್ಟಿಯನ್ನೂ ಒದಗಿಸಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img