Saturday | June 20, 2026 |

ರಾಷ್ಟ್ರೋತ್ಥಾನ ಪರಿಷತ್‌ ಖಾಸಗಿ ಸಂಸ್ಥೆಯೇ ಹೊರತು, ನೋಂದಾಯಿತ ಸಂಸ್ಥೆಯಲ್ಲವೆಂದ ಕಾನೂನು ಇಲಾಖೆ

Support THE-FILE

spot_img

ಬೆಂಗಳೂರು; ರಾಜ್ಯದ ವಿವಿಧೆಡೆ ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೋತ್ಥಾನ ಪರಿಷತ್‌ ನೋಂದಾಯಿತ ಸಂಸ್ಥೆಯಾಗಿರುವುದಿಲ್ಲ ಎಂದು ಕಾನೂನು ಇಲಾಖೆ ತನ್ನ ಅಭಿಪ್ರಾಯದಲ್ಲಿ ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿಯಲ್ಲಿ 9-32 ಎಕರೆ ಗೋಮಾಳ ಮಂಜೂರಾತಿ ಸಂಬಂಧ ಕಾನೂನು ಇಲಾಖೆಯು ನೀಡಿರುವ ಅಭಿಪ್ರಾಯದಲ್ಲಿ ಈ ಅಂಶವಿದೆ. ಆದರೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೋತ್ಥಾನ ಪರಿಷತ್‌ ಕೂಡ ತನ್ನ ದಾಖಲಾತಿಗಳನ್ನು ಇಲಾಖೆಗೆ ಸಲ್ಲಿಸಿದ್ದು, ಇದರಲ್ಲಿ ಸಂಸ್ಥೆಯು ನೋಂದಾಯಿತ ಎಂದು ಪ್ರಮಾಣ ಪತ್ರ ಸಲ್ಲಿಸಿದೆ.

 

ಹುರುಳಿಚಿಕ್ಕನಹಳ್ಳಿ ಯಲ್ಲಿ 9-32 ಎಕರೆ ಗೋಮಾಳ ಮಂಜೂರಾತಿಗೆ ಸಂಬಂಧಿಸಿದಂತೆ ಕಾನೂನು ಇಲಾಖೆಯು ನೀಡಿರುವ ಅಭಿಪ್ರಾಯದಲ್ಲಿ ‘ಪ್ರಸ್ತಾಪಿತ ಜಮೀನನ್ನು ಮಂಜೂರು ಮಾಡಲು ಕೋರಿರುವ ಉದ್ದೇಶವು ಶೈಕ್ಷಣಿಕ ಉದ್ದೇಶವಾಗಿದ್ದರೂ ಸಹ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ಒಂದು ಖಾಸಗಿ ಸಂಸ್ಥೆಯಾಗಿದ್ದು ಸದರಿ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿರುವುದಿಲ್ಲ ಎಂದು ಹೇಳಿದೆ. ಈ ಟಿಪ್ಪಣಿ ಹಾಳೆಗೆ ಕಾನೂನು ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ನರಹರಿ ಪ್ರಭಾಕರ ಮರಾಠೆ ಮತ್ತು ಕಾನೂನು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯೂ ಅನುಮೋದಿಸಿದ್ದಾರೆ.

 

ಕಾನೂನು ಇಲಾಖೆಯ ಅಪರ ಕಾರ್ಯದರ್ಶಿ ನೀಡಿರುವ ಅಭಿಪ್ರಾಯದ ಪ್ರತಿ

 

ಆದರೆ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ನೋಂದಾಯಿತ ಸಂಸ್ಥೆ ಎಂದು (ನಂ 155, 1964-65 ದಿನಾಂಕ 27.02.1965) ಪ್ರಮಾಣ ಪತ್ರ ಸಲ್ಲಿಸಿದೆ. ಕಾನೂನು ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ನರಹರಿ ಪ್ರಭಾಕರ್‌ ಮರಾಠೆ ಅವರು ನೀಡಿರುವ ಅಭಿಪ್ರಾಯದ ಪ್ರಕಾರ ರಾಷ್ಟ್ರೋತ್ಥಾನ ಪರಿಷತ್‌ ನೋಂದಾಯಿತ ಸಂಸ್ಥೆಯಾಗಿರುವುದಿಲ್ಲ. ಆದರೆ  ರಾಷ್ಟ್ರೋತ್ಥಾನ ಪರಿಷತ್‌ ತಮ್ಮದು ನೋಂದಣಿಯಾಗಿದೆ ಎಂದು ಪ್ರಮಾಣ ಪತ್ರ ಸಲ್ಲಿಸಿರುವುದು ಗೊಂದಲಕ್ಕೆ ದಾರಿಮಾಡಿಕೊಟ್ಟಿದೆ.

 

ಬಹುಕೋಟಿ ಮೌಲ್ಯದ ಜಮೀನನ್ನು ಮಾರುಕಟ್ಟೆ ಬೆಲೆಯ ಶೇ.25ರಷ್ಟು ದರದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡುವ ಸಂಬಂಧ ಆಡಳಿತ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಕೋರಿತ್ತು. ಕಾನೂನು ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿಗಳೂ ಆಡಳಿತ ಇಲಾಖೆ ಸಲ್ಲಿಸಿದ್ದ ದಾಖಲಾತಿಗಳನ್ನು ಪರಿಶೀಲಿಸಿದ ನಂತರವೇ ಅಭಿಪ್ರಾಯ ನೀಡಿದ್ದಾರೆ.
ಈ ಹಂತದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ನೋಂದಾಯಿತವಾಗಿದೆ ಎಂಬ ಪ್ರಮಾಣ ಪತ್ರವನ್ನು ಆಡಳಿತ ಇಲಾಖೆಯು ಕಡತದಲ್ಲಿ ಇರಿಸಲಿಲ್ಲವೇ ಎಂಬ ಪ್ರಶ್ನೆಯೂ ಎದುರಾಗಿದೆ. ಒಂದೊಮ್ಮೆ ನೋಂದಾಯಿತ ಪ್ರಮಾಣಪತ್ರವನ್ನು ಇರಿಸಿದ್ದರೂ ಸಹ ಸಂಸ್ಥೆಯು ನೋಂದಾಯಿತವಾಗಿಲ್ಲ ಎಂದು ಹೇಗೆ ಅಭಿಪ್ರಾಯಿಸಿದರು ಎಂಬುದು ಕೂಡ ಪ್ರಶ್ನಾರ್ಹ.

 

ಗೋಮಾಳ ಮಂಜೂರಾತಿ ಮಾಡಿಸಿಕೊಳ್ಳಲು ಈ ಸಂಸ್ಥೆಯು 80 ಜಿ, 12 ಎ ಪ್ರಮಾಣ ಪತ್ರವನ್ನು ಹೊಂದಿದೆ ಎಂದು ನೋಂದಾಯಿತ ಪ್ರಮಾಣಪತ್ರವನ್ನು ಸಲ್ಲಿಸಿರುವುದು ಕಡತದಿಂದ ತಿಳಿದು ಬಂದಿದೆ.
ಜಿಲ್ಲಾಧಿಕಾರಿಯವರ ವರದಿಯನ್ನು ಪರಿಶೀಲಿಸಲಾಗಿ ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿ ಹುರಳಿಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂಬರ್‌ 69ರ ಜಮೀನು ಮೂಲತಃ ಸರ್ಕಾರಿ ಗೋಮಾಳ ಜಮೀನಾಗಿರುವುದು ಕಂಡು ಬರುತ್ತದೆ. ಈ ಜಮೀನು ಗೋಮಾಳ ಜಮೀನಾಗಿರುವುದರಿಂದ ಕರ್ನಾಟಕ ಭೂ ಕಂದಾಯ ನಿಯಮ 1966ರ ನಿಯಮ 97ನ್ನು ಗಮನಿಸಬೇಕಾಗುತ್ತದೆ.

 

ಕರ್ನಾಟಕ ಭೂ ಕಂದಾಯ ನಿಯಮ 1966ರ ನಿಯಮ 97ರ ಅನ್ವಯ ಗ್ರಾಮದಲ್ಲಿಯ ಪ್ರತಿ ನೂರು ಜಾನುವಾರುಗಳಿಗೆ 12 ಹೆಕ್ಟೇರ್‌ ಪ್ರದೇಶಗಳಂತೆ ಗೋಮಾಳ ಪ್ರದೇಶವನ್ನು ನಿಗದಿಪಡಿಸಲಾಗಿದೆ. ಆಡಳಿತ ಇಲಾಖೆಯ ಪರಿಶೀಲನೆಯಿಂದ ಮೇಲೆ ನಿಗದಿಪಡಿಸಿದ ಪ್ರದೇಶಕ್ಕಿಂತಲೂ ಕಡಿಮೆ ಪ್ರದೇಶವಿರುವುದು ಕಂಡು ಬರುತ್ತದೆ. ಗೋಮಾಳ ಜಮೀನನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಮಂಜೂರು ಮಾಡಲು ಅಥವಾ ಗುತ್ತಿಗೆ ನೀಡಲು ಉದ್ದೇಶಿಸಿದಲ್ಲಿ ಮೊದಲು ಸಾರ್ವಜನಿಕ ಹಕ್ಕಿನಿಂದ ವಿಹಿತಗೊಳಿಸಬೇಕಾಗುತ್ತದೆ. ಗೋಮಾಳ ಶೀರ್ಷಿಕೆಯಿಂದ ತಗ್ಗಿಸದೇ ಜಮೀನನ್ನು ಅನ್ಯ ಉದ್ಧೇಶಕ್ಕೆ ಬಳಸಲು ಅವಕಾಶವಿರುವುದಿಲ್ಲ.

 

ಸರ್ವೋಚ್ಛ ನ್ಯಾಯಾಲಯದ ಜಗಪಾಲ್‌ ಸಿಂಗ್‌ ಮತ್ತಿತರರ ಮತ್ತು ಪಂಜಾಬ್‌ ರಾಜ್ಯ ಸರ್ಕಾರದ ವಿರುದ್ಧದ ಪ್ರಕರಣದಲ್ಲಿ ನೀಡಿರುವ ಎಸ್‌ಸಿಸಿ 396 ಅನ್ವಯ ಗೋಮಾಳ ಜಮೀನನ್ನು ಮಂಜೂರು ಮಾಡಲು ಅವಕಾಶವಿರುವುದಿಲ್ಲ ಎಂದು ಕಾನೂನು ಇಲಾಖೆಯು ಅಭಿಪ್ರಾಯಿಸಿರುವುದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img