Sunday | June 14, 2026 |

ರಾಜೀನಾಮೆ ಬಳಿಕವೂ ಮೂಗು ತೂರಿಸಿದ ಈಶ್ವರಪ್ಪ; ಪ್ರಧಾನ ಇಂಜಿನಿಯರ್‌ ಮುಂದುವರಿಕೆಗೆ ಪತ್ರ

Support THE-FILE

spot_img

ಬೆಂಗಳೂರು; ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಗುರುತರವಾದ ಆರೋಪಕ್ಕೆ ಗುರಿಯಾಗಿದ್ದ ಕೆ ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಿದ ನಂತರವೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಮತ್ತು ಅದರ ಅಧೀನ ಸಂಸ್ಥೆಗಳ ದೈನಂದಿನ ಆಡಳಿತಾತ್ಮಕ ಪ್ರಕ್ರಿಯೆಗಳಲ್ಲಿ ಪ್ರಭಾವ ಬೀರುತ್ತಿರುವುದು ಇದೀಗ ಬಹಿರಂಗವಾಗಿದೆ.

 

ಸೇವಾವಧಿ ಪೂರ್ಣಗೊಳಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಹಾಲಿ ಹುದ್ದೆಯಲ್ಲಿಯೇ ಮುಂದುವರೆಸಲು ಕೆ ಎಸ್‌ ಈಶ್ವರಪ್ಪ ಅವರು ಮುಖ್ಯಮಂತ್ರಿಗೆ ಶಿಫಾರಸ್ಸು ಪತ್ರಗಳನ್ನು ನೀಡಿರುವ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ.

 

ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ದಿ ಸಂಸ್ಥೆಯಲ್ಲಿ ಪ್ರಧಾನ ಇಂಜಿನಿಯರ್‌ ಆಗಿರುವ ಪ್ರಭಾಕರ್‌ ಡಿ ಹಮಿಗೆ ಅವರು ಇದೇ ಡಿಸೆಂಬರ್‌ 2022ರ ಅಂತ್ಯಕ್ಕೆ ನಿವೃತ್ತಿಯಾಗುತ್ತಿದ್ದಾರೆ. ಅವರ ನಿವೃತ್ತಿಯವರೆಗೆ ಹಾಲಿ ಹುದ್ದೆಯಲ್ಲಿಯೇ ಮುಂದುವರೆಸಬೇಕು ಎಂದು ಕೆ ಎಸ್‌ ಈಶ್ವರಪ್ಪ ಅವರು ಪ್ರಭಾವ ಬೀರಿದ್ದಾರೆ. ಈ ಸಂಬಂಧ 2022ರ ಮೇ 24ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವನ್ನೂ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪತ್ರದಲ್ಲೇನಿದೆ?

 

ಪ್ರಧಾನ ಇಂಜಿನಿಯರ್‌ ಆಗಿರುವ ಪ್ರಭಾಕರ್‌ ಡಿ ಹಮಿಗೆ ಅವರು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯಲ್ಲಿ ಮುಖ್ಯ ಕಾರ್ಯಾಚರಣೆ ಅಧಿಕಾರಿಯಾಗಿರುವ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ 6 ತಿಂಗಳ ಸೇವಾವಧಿ ಬಾಕಿ ಉಳಿದಿದ್ದು ಡಿಸೆಂಬರ್‌ 2022ರ ಅಂತ್ಯಕ್ಕೆ ವಯೋನಿವೃತ್ತಿ ಹೊಂದಲಿದ್ದಾರೆ. ಸದರಿಯವರು ಪ್ರಸ್ತುತ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್‌, ನಬಾರ್ಡ್‌ನ ರಸ್ತೆ ಕಾಮಗಾರಿಳು ಮತ್ತು ಗ್ರಾಮ ವಿಕಾಸ ಯೋಜನೆಯಡಿ ರಾಜ್ಯ ಸರ್ಕಾರದಿಂದ ಅನುಷ್ಠಾನಗೊಳ್ಳುವ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಗೆ ಅತ್ಯವಶ್ಯವಾಗಿರುವುದರಿಂದ ಅವರ ನಿವೃತ್ತಿಯವರೆಗೆ ಹಾ;ಲಿ ಹುದ್ದೆಯಲ್ಲಿಯೇ ಮುಂದುವರೆಸಬೇಕು,’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

 

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್‌ ಈಶ್ವರಪ್ಪ ಅವರು ರಾಜೀನಾಮೆ ನೀಡಿದ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ನೇರ ಉಸ್ತುವಾರಿಯನ್ನು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಭಾಯಿಸುತ್ತಿದ್ದಾರೆ. ಈ ಖಾತೆಗೆ ಇನ್ನು ಯಾರನ್ನೂ ನೇಮಿಸಿಲ್ಲ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಇಲಾಖೆಗೆ ನೂತನ ಸಚಿವರನ್ನು ನೇಮಿಸಲಾಗುತ್ತದೆ ಎಂದು ತಿಳಿದು ಬಂದಿದೆ.

 

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ಹಲವು ಕಡತಗಳ ವಿಲೇವಾರಿಯಲ್ಲಿಯೂ ಕೆ ಎಸ್‌ ಈಶ್ವರಪ್ಪ ಅವರು ಈಗಲೂ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ, ನಬಾರ್ಡ್‌ನ ರಸ್ತೆ ಕಾಮಗಾರಿಗಳು, ಗ್ರಾಮ ವಿಕಾಸ ಯೋಜನೆಯಡಿ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ಬಿಲ್‌ ಪಾವತಿಯಲ್ಲಿಯೂ ಕೆ ಎಸ್‌ ಈಶ್ವರಪ್ಪ ಅವರು ಪ್ರಭಾವ ಬೀರುತ್ತಿದ್ದಾರೆ ಎಂಬ ಆಪಾದನೆಯೂ ಕೇಳಿ ಬಂದಿವೆ.

 

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಅವರು ಮೊದಲನೇ ಆರೋಪಿಯಾಗಿದ್ದರು.

 

‘ಬಾಕಿ ಬಿಲ್‌ ಪಾವತಿಗೆ ಶೇಕಡ 40ರಷ್ಟು ಲಂಚಕ್ಕೆ ಈಶ್ವರಪ್ಪ ಬೇಡಿಕೆ ಇಟ್ಟಿದ್ದಾರೆ’ ಎಂದು ಆರೋಪಿಸಿದ್ದ ಸಂತೋಷ್‌ ಉಡುಪಿಯ ಲಾಡ್ಜ್‌ ಒಂದರಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಬಹಿರಂಗವಾಗಿತ್ತು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಎಎಪಿ ಪ್ರತಿಭಟನೆ ನಡೆಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img