Sunday | September 13, 2026 |

ಅಗಸ್ತ್ಯ ಫೌಂಡೇಷನ್‌ ಒಪ್ಪಂದ ನವೀಕರಣ; ಖಾಸಗಿಗೆ 4.23 ಕೋಟಿ, ವಿಜ್ಞಾನ ಸಮಿತಿಗಳಿಗಿಲ್ಲ ಅನುದಾನ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ಭಾರತ ಜನ ವಿಜ್ಞಾನ ಸಮಿತಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗಳು ವಿಶೇಷವಾಗಿ ಗ್ರಾಮೀಣ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ವಿಜ್ಞಾನ ಕಲಿಕೆಗೆ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಷೇರು ಮಾರುಕಟ್ಟೆಯ ದೈತ್ಯ ರಾಕೇಶ್‌ ಜುಂಜನ್‌ವಾಲಾ ಅವರು ಪ್ರಮುಖ ಪೋಷಕರಾಗಿರುವ ಅಗಸ್ತ್ಯ ಫೌಂಡೇಷನ್‌ಗೆ ಮತ್ತೊಮ್ಮೆ ಮಣೆ ಹಾಕಿದೆ.

 

ಈ ಫೌಂಡೇಷನ್‌ನೊಂದಿಗೆ 2010ರಲ್ಲಿ ಮಾಡಿಕೊಂಡಿದ್ದ 10 ವರ್ಷದ ಒಡಂಬಡಿಕೆಯು ಮುಕ್ತಾಯಗೊಂಡಿದ್ದರೂ 2022-23ನೆ ಸಾಲಿನಿಂದ 2026-27ರವರೆಗೆ ಒಟ್ಟು 5 ವರ್ಷಗಳ ಅವಧಿಯವರೆಗೆ ನವೀಕರಿಸಿರುವ ಸರ್ಕಾರವು 2022ರ ಜೂನ್‌ 9ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಳೆದ ಹತ್ತಾರು ವರ್ಷಗಳಿಂದಲೂ ವಿಜ್ಞಾನ ಕಲಿಕೆ, ಶಿಕ್ಷಣದಲ್ಲಿ ಕ್ರಿಯಾಶೀಲವಾಗಿರುವ ವಿಜ್ಞಾನ ಸಮಿತಿಗಳನ್ನು ಕಡೆಗಣಿಸುವ ಮೂಲಕ ವಿಜ್ಞಾನ ಯೋಜನೆಗಳ ಅನುಷ್ಠಾನದಲ್ಲಿ ಅಗಸ್ತ್ಯ ಫೌಂಡೇಷನ್‌ನ ಏಕಸ್ವಾಮ್ಯತೆಯನ್ನು ಮುಂದುವರೆಸುವ ಮೂಲಕ ಬಲಪಡಿಸಿದಂತಾಗಿದೆ.

 

ಬಾಗಲಕೋಟೆ, ಬೀದರ್‌, ಬಿಜಾಪುರ, ಶಿವಮೊಗ್ಗ, ಧಾರವಾಡ ಜಿಲ್ಲೆಗಳಲ್ಲಿ ಕೋರ್‌ ವಿಜ್ಞಾನ ಚಟುವಟಿಕೆ ಕೇಂದ್ರಗಳ ನಿರ್ವಹಣೆ ಅವಧಿಯನ್ನು ಅಗಸ್ತ್ಯ ಫೌಂಡೇಷನ್‌ಗೆ ನೀಡಿ ಆದೇಶಿಸಿದೆ. ಇದಕ್ಕೆ ಸಚಿವ ಬಿ ಸಿ ನಾಗೇಶ್‌ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ.

 

ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಗಸ್ತ್ಯ ಫೌಂಡೇಷನ್‌ಗೆ ವಿದೇಶಿ ಹಣ ಹಾಗೂ ಸಿ.ಎಸ್.ಆರ್. ಫಂಡ್‌ನ ನೆರವು ದೊರೆಯುತ್ತಿದೆ. ಆದರೂ ರಾಜ್ಯದಲ್ಲಿ ಕೋರ್‌ ವಿಜ್ಞಾನ ಕೇಂದ್ರ ಮತ್ತು ಪ್ರಯೋಗಾಲಯಗಳ ಕಾರ್ಯನಿರ್ವಹಣೆಗೆ ಸಮಗ್ರ ಶಿಕ್ಷಣ ಅಭಿಯಾನದ ಅನುದಾನವನ್ನು ಒದಗಿಸಿದೆ.

 

ಈ 10 ವರ್ಷದ ಅವಧಿಯಲ್ಲಿ ಕೋರ್‌ ವಿಜ್ಞಾನ ಕೇಂದ್ರಗಳು, ಸಂಚಾರಿ ಪ್ರಯೋಗಾಲಯಗಳ ಮೇಲು ಉಸ್ತುವಾರಿ, ಪರ್ಯಾಯ ವ್ಯವಸ್ಥೆಯನ್ನು ಸರ್ಕಾರವು ಬಲಪಡಿಸಬೇಕಿತ್ತು. ಅಲ್ಲದೆ ಇಂತಹ ಯೋಜನೆಗಳನ್ನು ಇಲಾಖೆಯ ಮಾಲೀಕತ್ವದಡಿಯಲ್ಲಿ ನಿರ್ವಹಿಸುವಲ್ಲಿ ಆಸಕ್ತಿ ವಹಿಸಬೇಕಿತ್ತು. ಆದರೆ ಸರ್ಕಾರವು ವಿಫಲವಾಗಿರುವುದರಿಂದಲೇ ವಿಜ್ಞಾನ ಕಲಿಕೆ ಯೋಜನೆಗಳು ಅಗಸ್ತ್ಯ ಫೌಂಡೇಷನ್‌ ಪಾಲಾಗಿದೆ. ಈ ಮೂಲಕ ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನದ ಸಂಪನ್ಮೂಲವನ್ನು ಅಗಸ್ತ್ಯ ಫೌಂಡೇಷನ್‌ಗೆ ಧಾರೆಯೆರೆದಂತಾಗಿದೆ ಎಂಬ ಮಾತು ಶಿಕ್ಷಣ ತಜ್ಞರ ವಲಯದಲ್ಲಿ ಕೇಳಿ ಬರುತ್ತಿದೆ.

 

2021-222ನೇ ಸಾಲಿಗೆ ಕೋರ್‌ ವಿಜ್ಞಾನ ಕೇಂದ್ರಗಳನ್ನು ಅಗಸ್ತ್ಯ ಫೌಂಡೇಷನ್‌ ಸಂಸ್ಥೆಯೊಂದಿಗೆ ನಿರ್ವಹಿಸಲು ಒಡಂಬಡಿಕೆ ನವೀಕರಿಸಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ಉಳಿಕೆ ಇರುವ 4.23 ಕೋಟಿ ರು. ವೆಚ್ಚ ಮಾಡಲಿದೆ.  2020-21 ಮತ್ತು 2021-22ನೇ ಸಾಲಿನ ಕಾರ್ಯಕ್ರಮದ ವೆಚ್ಚಗಳಿಗೆ 4.43 ಕೋಟಿ ಅನುದಾನದ ಅವಶ್ಯಕತೆಯನ್ನು ಪ್ರಸ್ತುತ ಸಮಗ್ರ ಶಿಕ್ಷಣ ಕರ್ನಾಟಕ ಸಂಸ್ಥೆಯಲ್ಲಿ ಐಡಿಎಫ್‌ ಕಾರ್ಯಕ್ರಮದದ ಅನುದಾನದಲ್ಲಿ ಉಳಿಕೆ ಇರುವ ಒಟ್ಟು 4.23 ಕೋಟಿ ರು.ಗಳನ್ನು ಅನುದಾನದಿಂದ ಬಳಸಿಕೊಳ್ಳಲು ಚಾಲ್ತಿ ವರ್ಷಕ್ಕೆ ಅನುಮತಿ ನೀಡಲಾಗಿತ್ತು.

 

ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಸಂಪನ್ಮೂಲ ಶಿಕ್ಷಕರಿದ್ದರೂ ಅವರಿಂದಲೇ ವಿಜ್ಞಾನ ಪ್ರಯೋಗಾಲಯ, ಸಂಚಾರಿ ವಿಜ್ಞಾನ ಪ್ರಯೋಗಾಲಯಗಳನ್ನು ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿಯೇ ಆರಂಭಿಸಲು ಅವಕಾಶಗಳಿವೆ.

 

ಷೇರು ಮಾರುಕಟ್ಟೆಯ ದೈತ್ಯ ಎಂದೇ ಹೇಳಲಾಗಿರುವ ರಾಕೇಶ್‌ ಜುಂಜನ್‌ವಾಲಾ ಅವರು ಈ ಫೌಂಡೇಷನ್‌ಗೆ ಪ್ರಮುಖ ಪೋಷಕರು. ಅಲ್ಲದೆ ದೇಶ ವಿದೇಶಗಳಿಂದಲೂ ದೇಣಿಗೆ ಪಡೆಯುತ್ತಿರುವ ಈ ಫೌಂಡೇಷನ್‌ಗೆ ಒಡಂಬಡಿಕೆಯನ್ನು ನವೀಕರಿಸಿ ಕೋಟ್ಯಂತರ ರುಪಾಯಿ ನೀಡುತ್ತಿರುವುದಕ್ಕೆ ಕ್ರಿಯಾಶೀಲ ವಿಜ್ಞಾನ ಸಮಿತಿಗಳಿಂದಲೇ ಆಕ್ಷೇಪ ಕೇಳಿ ಬಂದಿದೆ.

 

ಸುಮಾರು ಹದಿನೈದು ವರ್ಷಗಳ ಹಿಂದೆ ವಿದೇಶಿ ಹಣ ಹಾಗೂ ಸಿ.ಎಸ್.ಆರ್. ಫಂಡ್‌ನಿಂದ ತನ್ನ ಕೆಲಸ ಪ್ರಾರಂಭಿಸಿದ ಅಗಸ್ತ್ಯ ಇಂಟರ್ ನ್ಯಾಷನಲ್ ಸಂಸ್ಥೆಯು ಕಳೆದ ಹತ್ತು ವರ್ಷದಿಂದಲೂ ಸಮಗ್ರ ಶಿಕ್ಷಣ ಅಭಿಯಾನದಿಂದ ನಿರಾಯಾಸವಾಗಿ ಹಣ ಪಡೆಯುತ್ತಿದೆ. ಇತರ ಶೈಕ್ಷಣಿಕ ಹಾಗೂ ವೈಜ್ಞಾನಿಕ ಸಂಸ್ಥೆಗಳು ಸಲ್ಲಿಸುವ ಪ್ರಸ್ತಾವನೆಗಳನ್ನು ಕಡೆಗಣಿಸುವ ಈ ಸಮಗ್ರ ಶಿಕ್ಷಣ ಅಭಿಯಾನ ಯಾವ ಮಾನದಂಡಗಳನ್ನು ಅನುಸರಿಸಿ ಈ ರೀತಿಯಲ್ಲಿ ಹಣ ನೀಡುತ್ತಿದೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

 

ಕ್ಲಸ್ಟರ್ ಸಂಪನ್ಮೂಲ ಕೇಂದ್ರಗಳ ಬಗ್ಗೆ ಮಾತನಾಡದೇ ಸುಮ್ಮನಿರುವುದೇ ಲೇಸು. ಅಲ್ಲಿರುವ ಸಂಪನ್ಮೂಲ ವ್ಯಕ್ತಿಯನ್ನು ಶಾಲೆಗಳಿಂದ ಮಾಹಿತಿ ತರುವುದಷ್ಟಕ್ಕೇ ಉಪಯೋಗಿಸಿಕೊಳ್ಳಲಾಗುತ್ತಿದೆ. ಖಾಸಗಿ ಫೌಂಡೇಷನ್‌ಗಳಿಗೆ ಶಿಕ್ಷಣ ಅಭಿಯಾನದ ಸಂಪನ್ಮೂಲವನ್ನು ಹರಿಸುವುದಕ್ಕಿಂತ ಸರ್ಕಾರಿ ಸ್ವಾಮ್ಯದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರ, ಕ್ರಿಯಾಶೀಲ ವಿಜ್ಞಾನ ಸಂಘಟನೆಗಳ ಮೂಲಕ ಇಂತಹ ಕಾರ್ಯಕ್ರಮಗಳನ್ನು ನಿರ್ವಹಿಸಬೇಕು. ಒಂದು ಸಂಸ್ಥೆಗೆ ಹಣ ನೀಡಬೇಕಾದರೆ ಒಂದು ನಿಯಮ ಅನುಸರಿಸಬೇಕು. ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ವಿವಿಧ ವಿಜ್ಞಾನ ಸಂಸ್ಥೆಗಳನ್ನು ಆಹ್ವಾನಿಸಿ ಅವಕಾಶಗಳನ್ನು ನೀಡಬೇಕು. ಆದರೆ ಅಂಥ ಯಾವುದೇ ಪ್ರಯತ್ನಗಳಾದಂತೆ ಕಾಣುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

 

2004-05 ರಲ್ಲಿ ಸಾಫ್ಟ್‌ವೇರ್‌ ಸಂಸ್ಥೆಗಳಿಂದ ವಾಹನಗಳನ್ನು ಹಾಗೂ ವಿಜ್ಞಾನ ಬೋಧಿಸುವ ಕಲಿಕೋಪಕರಣಗಳನ್ನು ಹೊಂದಿಸಿಕೊಂಡಿರುವ ಅಗಸ್ತ್ಯ ಸಂಸ್ಥೆಯು ಕ್ರಿಯಾಶೀಲವಾಗಿರುವ ವಿಜ್ಞಾನ ಸಂಘಟನೆಗಳ ನೆರವಿನೊಂದಿಗೆ ಶಾಲೆಗಳನ್ನು ತಲುಪಿದೆ. ಅಂದಿನಿಂದಲೂ ಈ ಫೌಂಡೇಷನ್‌ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕೋರ್‌ ವಿಜ್ಞಾನ ಕೇಂದ್ರಗಳ ಮೇಲೆ ಏಕಸ್ವಾಮ್ಯತೆಯನ್ನು ಪಡೆದಿದೆ.

 

ರಾಜ್ಯದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಯಟ್)ಗಳನ್ನು ನಡೆಸುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಿವೆ ಮತ್ತು ಕ್ಲಸ್ಟರ್ ಸಂಪನ್ಮೂಲ ಕೇಂದ್ರಗಳಿವೆ. ಇವುಗಳ ನಿರ್ವಹಣೆಗೆ ಸಾಕಷ್ಟು ಮಾನವ ಸಂಪನ್ಮೂಲವೂ ಇದೆ. ಆದರೆ ಈ ಕೇಂದ್ರಗಳು ಕೊಠಡಿಗಳಿಗಷ್ಟೇ ಮೀಸಲಾಗಿದೆಯಲ್ಲದೆ ಶಿಕ್ಷಕರಿಗೆ ತರಬೇತಿ ನೀಡುವುದಕ್ಕಷ್ಟೇ ಸೀಮಿತಗೊಂಡಿವೆ ಎಂದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img