Sunday | June 14, 2026 |

ಎಡಿಜಿಪಿ ಅಮೃತ್‌ಪೌಲ್‌, ಐಎಎಸ್‌ ಮಂಜುನಾಥ್‌ ಅಮಾನತು; ಬಂಧನದ ಬೆನ್ನಲ್ಲೇ ಹೊರಬಿದ್ದ ಆದೇಶ

Support THE-FILE

spot_img

ಬೆಂಗಳೂರು; ಅರ್ಜಿದಾರರ ಪರ ಆದೇಶ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದ ಅವಧಿಯಲ್ಲಿ ಲಂಚ ಪಡೆದಿರುವ ಆರೋಪಕ್ಕೆ ಗುರಿಯಾಗಿ ಎಸಿಬಿ ಬಂಧನಕ್ಕೊಳಗಾಗಿರುವ ಐಎಎಸ್‌ ಅಧಿಕಾರಿ ಜೆ. ಮಂಜುನಾಥ್‌ ಮತ್ತು ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಿಐಡಿ ಬಂಧನಕ್ಕೊಳಗಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಸರ್ಕಾರವು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

 

ಎಸಿಬಿ ಡಿವೈಎಸ್‌ಪಿ ಕೆ. ರವಿಶಂಕರ್‌ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಶವಂತಪುರದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರನ್ನು ಬಂಧಿಸಿದ್ದರು. ಅದೇ ರೀತಿ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕನೇ ಬಾರಿ ವಿಚಾರಣೆಗೆ ಕರೆದಿದ್ದ ಸಿಐಡಿ ಅಧಿಕಾರಿಗಳು, ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ವಿಚಾರಣೆ ನಡೆಸಿ ಬಂಧಿಸಿದ್ದರು.

 

ಈ ಇಬ್ಬರೂ ಅಧಿಕಾರಿಗಳು ಬಂಧನಕ್ಕೊಳಗಾಗುತ್ತಿದ್ದಂತೆ ತತ್‌ಕ್ಷಣವೇ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

 

ಆನೇಕಲ್‌ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಅನುಕೂಲಕರ ಆದೇಶ ನೀಡಲು ಬೇಗೂರು ನಿವಾಸಿ ಅಜಂ ಪಾಷಾ ಎಂಬುವವರಿಂದ 5 ಲಕ್ಷ ಲಂಚ ಪಡೆಯುತ್ತಿದ್ದ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಕಚೇರಿ ವ್ಯವಸ್ಥಾಪಕ ಮಹೇಶ್‌ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್‌ ಕುಮಾರ್‌ ಅಲಿಯಾಸ್‌ ಚಂದ್ರು ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮೇ 21ರಂದು ಬಂಧಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರನ್ನು ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

 

ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಮೂರು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ಇಂದು (ಜುಲೈ 4, 2022) ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ವಿಚಾರಣೆ ನಡೆಸಿ ಬಂಧಿಸಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಡಿಜಿಪಿ ದರ್ಜೆ ಅಧಿಕಾರಿಯೊಬ್ಬರನ್ನು ಬಂಧಿಸಿದಂತಾಗಿದೆ.

 

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ವರ್ಗಾಯಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img