Monday | September 14, 2026 |

ಪ್ರತ್ಯೇಕ ರಾಜ್ಯದ ಗುಂಗಿನಲ್ಲೇ ಮುಳುಗಿದ ಕತ್ತಿ;ಅರಣ್ಯ ಇಲಾಖೆಯಲ್ಲೇ 4,199 ಕಡತಗಳು ವಿಲೇವಾರಿಗೆ ಬಾಕಿ

Support THE-FILE

spot_img

ಬೆಂಗಳೂರು; ಪ್ರತ್ಯೇಕ ರಾಜ್ಯದ ಬಗ್ಗೆ ಆಗಾಗ್ಗೆ ಹೂಂಕರಿಸುವ ಸಚಿವ ಉಮೇಶ್‌ ವಿ ಕತ್ತಿ ಅವರು ನಿಭಾಯಿಸುತ್ತಿರುವ ಅರಣ್ಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗದೇ ಧೂಳಿಡಿದು ಕೂತಿವೆ. ಸಚಿವಾಲಯ ವಾಹಿನಿ, ಇ-ಆಫೀಸ್‌ ಸೇರಿ ಒಟ್ಟು 4,199 ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.

 

ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2022ರ ಜೂನ್‌ 23ರಂದು ನಡೆದ ಸಭೆಯಲ್ಲಿ ಕಡತಗಳು ವಿಲೇವಾರಿಯಾಗದೇ ಕುರಿತು ಚರ್ಚೆಯಾಗಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಇರುವ ಕಡತಗಳ ಸಂಖ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿವೆ. ಸಭೆ ನಡವಳಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಕಡತ ವಿಲೇವಾರಿ ಕುರಿತು ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸದಿರುವುದೇ 4,199 ಕಡತಗಳು ಬಾಕಿ ಇರುವುದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳೂ ನಡೆಯುವ ಕೆಡಿಪಿ ಸಭೆಯಲ್ಲಿಯೂ ಎಲ್ಲಾ ಇಲಾಖೆಗಳ ಕಡತಗಳ ವಿಲೇವಾರಿ ಕುರಿತು ಚರ್ಚೆ ನಡೆಯುತ್ತಾದರೂ ಅರಣ್ಯ ಇಲಾಖೆಯಲ್ಲಿ ಮಾತ್ರ ವಿಲೇವಾರಿಯಾಗದ ಕಡತಗಳು ಬೆಟ್ಟದಂತೆ ಏರುತ್ತಿದೆ.

 

2022ರ 16ರಿಂದ ಜೂನ್‌ 15ರವರೆಗಿನ ಅಂಕಿ ಅಂಶಗಳ ಪ್ರಕಾರ ಸಚಿವಾಲಯ ವಾಹಿನಿಯಲ್ಲಿ 2,399 ಮತ್ತು ಇ-ಆಫೀಸ್‌ನಲ್ಲಿ 1,800 ಕಡತಗಳು ಸೇರಿ ಒಟ್ಟು 4,199 ಕಡತಗಳು ಬಾಕಿ ಇವೆ. ಈ ಪೈಕಿ 03 ವರ್ಷಗಳಿಗಿಂತ ಹಳೆಯದಾದ ಕಡತಗಳ ಸಂಖ್ಯೆ 1,069ರಷ್ಟಿದೆ. ಇದರಲ್ಲಿ ನ್ಯಾಯಾಲಯ, ಲೋಕಾಯುಕ್ತ, ಕರ್ನಾಟಕ ಆಡಳಿತ ನ್ಯಾಯಮಂಡಳಿ, ಇಲಾಖೆ ವಿಚಾರಣೆ, ಅರಣ್ಯ ವಿಮೋಚನಾ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳೇ ಹೆಚ್ಚಿರುವುದು ನಡವಳಿಯಿಂದ ತಿಳಿದು ಬಂದಿದೆ.

 

ಕರ್ತವ್ಯಲೋಪ, ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಹಣಕಾಸು ದುರುಪಯೋಗ ಸೇರಿದಂತೆ ಇನ್ನಿತರೆ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಗುರಿಯಾಗಿರುವ ಅಧಿಕಾರಿ, ನೌಕರರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಭಾಗದಲ್ಲಿ ಇದುವರೆಗೆ ಒಟ್ಟು 25 ಕಡತಗಳು ಬಾಕಿ ಇವೆ. ಕಾರಣ ಕೇಳುವ ನೋಟೀಸ್‌ಗೆ ಆಪಾದಿತರೆಂದು ಹೇಳಲಾಗಿರುವ ಬಹುತೇಕ ಅಧಿಕಾರಿಗಳಿಂದ ಉತ್ತರವೂ ಇಲಾಖೆಗೆ ಸ್ವೀಕೃತವಾಗಿಲ್ಲ ಎಂದು ಗೊತ್ತಾಗಿದೆ.

 

ಇನ್ನು ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಲ್ಲಿ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 797 ಪ್ರಕರಣಗಳು ಚಾಲ್ತಿಯಲ್ಲಿವೆ. ಈ ಪೈಕಿ ಸರ್ವೋಚ್ಛ ನ್ಯಾಯಾಲಯದಲ್ಲಿ 70, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 493, ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ 138, ಇತರೆ ನ್ಯಾಯಾಲಯಗಳಲ್ಲಿ 96 ಪ್ರಕರಣಗಳು ಬಾಕಿ ಇವೆ.

 

ಅರಣ್ಯ ಇಲಾಖೆಯಲ್ಲಿ ಕಡತ ವಿಲೇವಾರಿ ಮತ್ತು ವಿವಿಧ ಪ್ರಕರಣಗಳು ಬಾಕಿ ಇದ್ದರೂ ಸಚಿವ ಉಮೇಶ್‌ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸುತ್ತಿಲ್ಲ. ಬದಲಿಗೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇರಿಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವ ಕಾರಣ ಅಧಿಕಾರಿಶಾಹಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img