Monday | June 15, 2026 |

ಆರೋಪಿಗಳಿಗೆ ಚಿತ್ರಹಿಂಸೆ; ವೈದ್ಯಕೀಯ ವರದಿ ಮುಚ್ಚಿಟ್ಟು ನ್ಯಾಯಾಲಯದ ದಿಕ್ಕುತಪ್ಪಿಸಿದ್ದ ಪೊಲೀಸರು?

Support THE-FILE

spot_img

ಬೆಂಗಳೂರು; ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿದ್ದರು ಎನ್ನಲಾದ ಇಬ್ಬರು ಮಹಿಳಾ ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ರಾತ್ರಿ ಪಾಳಿಯ ವೈದ್ಯಾಧಿಕಾರಿಗಳು ನೀಡಿದ್ದ ವೈದ್ಯಕೀಯ ವರದಿಯನ್ನೇ ಮುಚ್ಚಿಟ್ಟು ನ್ಯಾಯಾಲಯವನ್ನು ದಾರಿತಪ್ಪಿಸಿದ್ದರು ಎಂಬುದನ್ನು ಜನಾಧಿಕಾರ ಸಂಘರ್ಷ ಪರಿಷತ್‌ ಆರ್‌ಟಿಐ ದಾಖಲೆಗಳ ಮೂಲಕ ಹೊರಗೆಡವಿದೆ.

 

ಯಲಚೇನಹಳ್ಳಿ ನಿವಾಸಿ ಜಿ ಎಂ ರಾಜೇಶ್ವರಿ ಎಂಬುವರು ನೀಡಿದ್ದ ದೂರನ್ನಾಧರಿಸಿ ಅಮೂಲ್ಯ , ಮೇಘನಾ ಎಂಬ ಮಹಿಳಾ ಆರೋಪಿಗಳನ್ನು ಅಕ್ರಮ ಬಂಧನಲ್ಲಿರಿಸಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಆರೋಪಿಗಳಿಗೆ ಚಿತ್ರಹಿಂಸೆ ನೀಡಿದ್ದರು ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ಈ ಮೊದಲು ಆರೋಪಿಸಿತ್ತು. ಆದರೆ ಪೊಲೀಸರು ಇದನ್ನು ಅಲ್ಲಗಳೆದಿದ್ದರು.

 

ಆದರೀಗ ಆರ್‌ಟಿಐ ಅಡಿಯಲ್ಲಿ ವೈದ್ಯಕೀಯ ವರದಿಗಳ ದಾಖಲೆ ಪಡೆದಿರುವ ಜನಾಧಿಕಾರ ಸಂಘರ್ಷ ಪರಿಷತ್‌, ಪೊಲೀಸರು ಆರೋಪಿಗಳಿಗೆ ಚಿತ್ರಹಿಂಸೆ ನೀಡಿದ್ದರು ಎಂಬುದನ್ನು ರಾತ್ರಿ ಪಾಳಿ ವೈದ್ಯರು ನೀಡಿದ್ದ ವೈದ್ಯಕೀಯ ವರದಿಯನ್ನು ಬಹಿರಂಗಗೊಳಿಸಿದೆ. ಈ  ಮೂಲಕ ನ್ಯಾಯಾಲಯವನ್ನು ಪೊಲೀಸರು ಹೇಗೆ ದಿಕ್ಕುತಪ್ಪಿಸಿದ್ದರು ಎಂಬುದನ್ನು ಮುನ್ನೆಲೆಗೆ ತಂದಿದೆ.

 

ಈ ಕುರಿತು ಜನಾಧಿಕಾರ ಸಂಘರ್ಷ ಪರಿಷತ್‌ ಕುಮಾರಸ್ವಾಮಿ ಲೇಔಟ್‌ ಠಾಣೆಯ ಪೊಲೀಸ್‌ ಅಧಿಕಾರಿಗಳ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರು ಮತ್ತು ಬೆಂಗಳೂರುನಗರ ಪೊಲೀಸ್‌ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿದೆ. ದೂರಿನ ಪ್ರತಿ ಮತ್ತು ಆರ್‌ಟಿಐ ಅಡಿಯಲ್ಲಿ ಪಡೆದಿರುವ ವೈದ್ಯಕೀಯ ವರದಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಠಾಣೆಯ ಇನ್ಸ್‌ಪೆಕ್ಟರ್‌ ಕೊಟ್ರೇಶಿ, ಸಬ್‌ ಇನ್ಸ್‌ ಪೆಕ್ಟರ್‌ ನಾಗೇಶ್‌ ಎಚ್‌ ಎಂ, ಎಎಸ್‌ಐ ವೆಂಕಟರಾಮ್‌, ಮುಖ್ಯ ಪೇದೆ ದಿನೇಶ್‌ ಬಿ ವಿ (ಎಚ್‌ ಸಿ 10585) ಸೇರಿದಂತೆ ಮತ್ತಿತರರು ಅಮೂಲ್ಯ ಮತ್ತು ಮೇಘನಾ ಎಂಬುವರನ್ನು ಅಕ್ರಮ ಬಂಧನಲ್ಲಿರಿಸಿ ಚಿತ್ರಹಿಂಸೆ ನೀಡಿದ್ದರು. ಈ ಸಂಬಂಧ ವೈದ್ಯಾಧಿಕಾರಿಗಳು ನೀಡಿದ್ದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

 

ಜನಾಧಿಕಾರ ಸಂಘರ್ಷ ಪರಿಷತ್‌ ಸಲ್ಲಿಸಿರುವ ದೂರಿನ ಪ್ರತಿ

 

ಕುಮಾರಸ್ವಾಮಿ ಲೇಔಟ್‌ ಠಾಣೆಯ ಪೊಲೀಸರು ಅಕ್ರಮ ಬಂಧನದಲ್ಲಿರಿಸಿದ್ದರು ಎನ್ನಲಾದ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲು ಜಯನಗರ ಜನರಲ್‌ ಆಸ್ಪತ್ರೆಗೆ ರಾತ್ರಿ ವೇಳೆಯಲ್ಲಿ ಕರೆದೊಯ್ದಿದ್ದರು.

 

 

ಆ ವೇಳೆಯಲ್ಲಿ ಆರೋಪಿಗಳನ್ನು ರಾತ್ರಿ ಪಾಳಿಯಲ್ಲಿದ್ದ ವೈದ್ಯರು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ನಂತರ ಆರೋಪಿಗಳಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಆರ್‌ಟಿಐ ಅಡಿಯಲ್ಲಿ ನೀಡಿರುವ ದಾಖಲೆಗಳಿಂದ ತಿಳಿದು ಬಂದಿದೆ.

 

ರಾತ್ರಿ ಪಾಳಿ ವೈದ್ಯರು ನೀಡಿದ್ದ ವೈದ್ಯಕೀಯ ವರದಿ

 

ಇದರಿಂದ ವಿಚಲಿತರಾದ ಪೊಲೀಸರು ರಾತ್ರಿ ಪಾಳಿಯ ವೈದ್ಯರು ನೀಡಿದ್ದ ವರದಿಯನ್ನು ಮುಚ್ಚಿಟ್ಟಿದ್ದರಲ್ಲದೆ ಬೆಳಗಿನ ಪಾಳಿಯ ವೈದ್ಯರೊಂದಿಗೆ ಸಮಾಲೋಚಿಸಿ ಬೇರೊಂದು ವರದಿಯನ್ನು ಸಿದ್ಧಪಡಿಸಿದ್ದರು ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ. ಬೆಳಗಿನ ಪಾಳಿಯ ವೈದ್ಯರು 8 ಗಂಟೆ ನಂತರ ನೀಡಿರುವ ವೈದ್ಯಕೀಯ ವರದಿ ಪ್ರಕಾರ ವರದಿಯಲ್ಲಿ ಆರೋಪಿಗಳಿಗೆ ಯಾವುದೇ ಚಿತ್ರಹಿಂಸೆ ನೀಡಿರುವ ಯಾವುದೆ ಉಲ್ಲೇಖಿಸಿಲ್ಲ. ಬೆಳಗಿನ ಪಾಳಿಯ ವೈದ್ಯರು ನೀಡಿದ್ದ ವರದಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂಬುದು ತಿಳಿದು ಬಂದಿದೆ.

 

ಬೆಳಗಿನ ಪಾಳಿ ವೈದ್ಯರು ನೀಡಿರುವ ವೈದ್ಯಕೀಯ ವರದಿ

 

 

ರಾಜೇಶ್ವರಿ ಅವರು ನೀಡಿದ್ದ ದೂರಿನಲ್ಲೇನಿತ್ತು?

 

ಬೆಂಗಳೂರು ನಗರದ ಯಲಚೇನಹಳ್ಳಿಯ ಆಸ್ಪೀನ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿರುವ ಜಿ ಎಂ ರಾಜೇಶ್ವರಿ ಎಂಬುವರ ಪತಿ ಜಯರಾಮ್‌ ಎಂಬುವರನ್ನು ನೋಡಿಕೊಳ್ಳಲು ರಾಜೇಶ್‌ ಎಂಬಾತ ಕೆಲಸಕ್ಕೆ ಸೇರಿಕೊಂಡಿದ್ದರು. ಕಳೆದ 3 ವರ್ಷಗಳ ಹಿಂದೆಯೇ ರಾಜೇಶ್ವರಿ ಅವರ ಪತಿ ಜಯರಾಮ್‌ ಎಂಬುವರು ತೀರಿಕೊಂಡಿದ್ದರು. ಇದಾದ ಬಳಿಕವೂ ರಾಜೇಶ್‌ ಎಂಬಾತ ಅದೇ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಈ ವೇಳೆಯಲ್ಲಿ ರಾಜೇಶ್ವರಿ ಅವರ ಬಳಿ ಇದ್ದ ಚಿನ್ನದ ಒಡವೆಗಳ ಬಗ್ಗೆ ರಾಜೇಶ್‌ನಿಗೆ ಗೊತ್ತಿತ್ತು. ಚಿನ್ನದ ಒಡವೆಗಳನ್ನು ಬೆಡ್‌ ರೂಂನಲ್ಲಿರುವ ಬೀರುವಿನಲ್ಲಿಟ್ಟು ಬೀಗ ಹಾಕಿ ಬೀಗದ ಕೈಯನ್ನು ಅಲ್ಲಿಯೇ ಇಡುತ್ತಿದ್ದರು ಎಂದು ರಾಜೇಶ್ವರಿ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ಬೀರುವಿನಲ್ಲಿದ್ದ ಚಿನ್ನದ ಒಡವೆಗಳು ಕೆಲ ದಿನಗಳ ನಂತರ ಕಾಣಲಿಲ್ಲ. ಇದು ಗಮನಕ್ಕೆ ಬಂದ ಐದು ದಿನಗಳಿಮದ ರಾಜೇಶ್‌ ಮನೆಯಿಂದ ಹೊರಟು ಹೋಗಿದ್ದ. ತಮ್ಮ ಬಳಿ ಇದ್ದ ಚಿನ್ನದ ಒಂದು ಕಲ್ಲಿನ ಡಾಲರ್ ಚೈನ್‌, ಒಂದು ಚೈನ್‌ ಪದಕ, ಎರಡು ಕಲ್ಲಿನ ಬಳೆಗಳು, ಮೂರು ಚಿನ್ನದ ಉಂಗುರುಗಳು, ಎರಡು ಜತೆ ಕಿವಿ ಓಲೆಗಳನ್ನು ರಾಜೇಶ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ ಎಂದು ರಾಜೇಶ್ವರಿ ಅವರು ದೂರು ನೀಡಿದ್ದರು.

 

ಈ ದೂರಿಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ರಾಜೇಶ್‌, ಅಮೂಲ್ಯ, ಮೇಘನಾ ವಿ. ಎಂಬುವರನ್ನು ದಸ್ತಗಿರಿ ಮಾಡಿದ್ದರು. ಆದರೆ ವಾಸ್ತವದಲ್ಲಿ ಆರೋಪಿಗಳನ್ನು ಅಕ್ರಮ ಬಂಧನದಲ್ಲಿರಿಸಿದ್ದರು ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ದೂರಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img