Friday | September 11, 2026 |

ಶರಣರ ವಿರುದ್ಧದ ಪ್ರಕರಣ ಹೊರರಾಜ್ಯಕ್ಕೆ ವರ್ಗಾಯಿಸಲು ಮನವಿ; ಪೋಕ್ಸೋ ತನಿಖೆ ಮೇಲೆ ಪ್ರಭಾವ!

Support THE-FILE

spot_img

ಬೆಂಗಳೂರು; ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಸಾಮಾಜಿಕ ಹೋರಾಟಗಾರರು ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

 

ಚಿತ್ರದುರ್ಗದ ಮುರುಘರಾಜೇಂದ್ರ ಮಠವು ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಮಠವಾಗಿದೆ. ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಾಯಕರುಗಳು, ಪೊಲೀಸ್‌ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ವಿಜ್ಞಾನಿಗಳು, ಪತ್ರಕರ್ತರು, ಚಿತ್ರರಂಗ, ಸಾಂಸ್ಕೃತಿಕ ರಂಗ ಹೀಗೆ ವಿವಿಧ ರಂಗಗಳಲ್ಲಿನ ಗಣ್ಯಾತಿ ಗಣ್ಯರು ಈ ಮಠದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮೇಲೆ ಈ ಎಲ್ಲರೂ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾಯಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ, ಭಾರತೀಯ ನಾಗರಿಕ ಸಮಿತಿಯು ಮನವಿಯಲ್ಲಿ ಒತ್ತಾಯಿಸಿದೆ. ಮನವಿಯ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಈ ಮಠದ ಮುಖ್ಯಸ್ಥರಾದ ಡಾ ಶಿವಮೂರ್ತಿ ಶರಣರ ಮೇಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯದ ಗಂಭೀರ ಪ್ರಕರಣವಾಗಿರುವ ಕಾರಣ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿದೆ. ಈ ಮಠದೊಂದಿಗೆ ಸಂಬಂಧವಿಟ್ಟುಕೊಂಡ ರಾಜ್ಯದ ಚುಕ್ಕಾಣಿ ಹಿಡಿದು ಆಡಳಿತ ನಡೆಸಿದ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಸಮಾಜದ ಇತರ ಗಣ್ಯ ವ್ಯಕ್ತಿಗಳು ಈ ಪ್ರಕರಣದ ಮೇಲೆ ಪ್ರಭಾವ ಬೀರಬಹುದು,’ ಎಂದು ಸಾಮಾಜಿಕ ಕಾರ್ಯಕರ್ತ ಎಚ್‌ ಎಂ ವೆಂಕಟೇಶ್‌, ಹೆಚ್ ಜಿ ರಮೇಶ್, ಪ್ರದೀಪ್ ಮೆಂಡೋ, ಹಂದ್ರಾಳ ನಾಗಭೂಷಣ್‌, ತಿಪ್ಪೇಸ್ವಾಮಿ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರಾಥಮಿಕ ತನಿಖೆ ವೇಳೆಯಲ್ಲಿಯೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನೀಡಿರುವ ಹೇಳಿಕೆಯು ದೌರ್ಜನ್ಯಕ್ಕೆ ಒಳಗಾಗಿ ನೊಂದಿರುವ ವಿದ್ಯಾರ್ಥಿನಿಯರಿಗೆ ನ್ಯಾಯ ಸಿಗುವ ವಿಶ್ವಾಸವೂ ಇಲ್ಲವಾಗಿದೆ. ‘ಹೀಗಾಗಿ ಪೋಕ್ಸೋ ಕಾಯಿದೆಯ ಪ್ರಕರಣವನ್ನು ಕರ್ನಾಟಕ ರಾಜ್ಯವನ್ನು ಹೊರತುಪಡಿಸಿ ಬೇರೆ ರಾಜ್ಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಬೇಕು. ಅಲ್ಲಿನ ತನಿಖೆ ಸಂಸ್ಥೆಗೆ ವಿಚಾರಣೆ ಹೊಣೆಯನ್ನು ನೀಡಿ ಅಲ್ಲಿನ ನ್ಯಾಯಾಲಯದಲ್ಲಿ ತನಿಖೆ ಮತ್ತು ವಿಚಾರಣೆ ನಡೆದಲ್ಲಿ ಪ್ರಕರಣದ ಸತ್ಯತೆಯು ಪ್ರಾಮಾಣಿಕವಾಗಿ ಹೊರಬರುವುದರಲ್ಲಿ ಸಂಶಯವಿಲ್ಲ,’ ಎಂದು ಮನವಿಯಲ್ಲಿ ಕೋರಿದೆ.

 

ಸಾಮಾಜಿಕ ಹೋರಾಟಗಾರರು ಈ ಮೈಲ್ ಮೂಲಕ ಸಲ್ಲಿಸಿರುವ ಮನವಿ ಪ್ರತಿ

 

ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ದ ದಾಖಲಾಗಿದ್ದ ಗಂಭೀರ ಪ್ರಕರಣದ ವಿಚಾರಣೆಯನ್ನು ತಮಿಳುನಾಡನ್ನು ಹೊರತುಪಡಿಸಿ ಕರ್ನಾಟಕದ ಬೆಂಗಳೂರಿನಲ್ಲಿ ವಿಚಾರಣೆ ನಡೆದಿತ್ತು. ಆಗ ಸಮರ್ಪಕವಾದ ತೀರ್ಪು ಪ್ರಕಟವಾಗಿತ್ತು. ಅತ್ಯಂತ ಪ್ರಭಾವಿಗಳಾದ ಡಾ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಕಾಯ್ದೆಯ ಪ್ರಕರಣವನ್ನು ಹೊರ ರಾಜ್ಯದಲ್ಲಿ ವಿಚಾರಣೆ, ತನಿಖೆ ನಡೆದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದೂ ಮನವಿಯಲ್ಲಿ ವಿವರಿಸಲಾಗಿದೆ.

 

‘ಮಾಧ್ಯಮಗಳಲ್ಲಿ ಈಗಾಗಲೇ ವರದಿಯಾಗಿರುವಂತೆ ಶಿವಮೂರ್ತಿ ಮುರುಘಾ ಶರಣರು ಸಂಧಾನಕ್ಕೂ ಸಿದ್ಧ ಸಮರಕ್ಕೂ ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ನಡೆದ ದೈಹಿಕ ದೌರ್ಜನ್ಯಕ್ಕೆ ಸಂಧಾನ ಮಾಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಸಾಮಾಜಿಕ ಹೋರಾಟಗಾರರು ಪ್ರಕರಣವನ್ನು ಹೊರಾಜ್ಯಕ್ಕೆ ವರ್ಗಾವಣೆ ಮಾಡುವುದೇ ಒಳಿತು ಎಂದು ಮನವಿಯಲ್ಲಿ ಅಭಿಪ್ರಾಯಿಸಿದ್ದಾರೆ.

 

ಈ ಪ್ರಕರಣದಲ್ಲಿ ಪಾರದರ್ಶಕವಾದ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿಪಡಿಸುವ ಇಚ್ಚಾಶಕ್ತಿ ಇರಬೇಕು. ಪ್ರಕರಣವನ್ನು ಹೊರ ರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಸಾಧ್ಯವಾಗದೇ ಇದ್ದಲ್ಲಿ ಕೊನೆಯ ಪಕ್ಷ ಚಿತ್ರದುರ್ಗದಿಂದ ಮೈಸೂರು ಜಿಲ್ಲೆಗೆ ಪ್ರಕರಣವನ್ನು ವರ್ಗಾವಣೆ ಮಾಡಿ ವಿದ್ಯಾರ್ಥಿನಿಯರ ಆಶೋತ್ತರಗಳಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಸಾಮಾಜಿಕ ಹೋರಾಟಗಾರರು ಕೋರಿದ್ದಾರೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img