Saturday | June 13, 2026 |

‘ಮೋದಿ @ 20′ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 35.69 ಲಕ್ಷ ರು. ವೆಚ್ಚ; ಸರ್ಕಾರದ ಹಣ ದುರ್ಬಳಕೆ ಆರೋಪ

Support THE-FILE

spot_img

ಬೆಂಗಳೂರು; ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ‘ಮೋದಿ @ 20′ ಕನ್ನಡಾನುವಾದದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮತ್ತು ಡಿಜಿಟಿಲ್ ಮೀಡಿಯಾಗಳಲ್ಲಿ ಪ್ರಸಾರ ಸೇರಿದಂತೆ ಒಟ್ಟಾರೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರವು 35.69 ಲಕ್ಷ ರು. ವೆಚ್ಚ ಮಾಡಿರುವುದು ಇದೀಗ ಬಹಿರಂಗವಾಗಿದೆ.

 

ಈ ಕುರಿತು ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ವಕೀಲ ಭೀಮನಗೌಡ ಪರಗೊಂಡ ಅವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ಪಡೆದುಕೊಂಡಿದ್ದಾರೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ 2022ರ ಜುಲೈ 27ರಂದು ಪುಸ್ತಕ ಬಿಡುಗಡೆ ಮಾಡಿದ್ದರು. ಡಿಜಿಟಲ್‌ ಮೀಡಿಯಾ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲು ಛಾಯಾ ಚಿತ್ರೀಕರಣ, ವಿಡಿಯೋ ಚಿತ್ರೀಕರಣ ಸೇರಿದಂತೆ ಕಾರ್ಯಕ್ರಮಕ್ಕೆ ಒಟ್ಟಾರೆ 35.69 ಲಕ್ಷ ರು. ಖರ್ಚಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.

 

ಪ್ರಧಾನಿ ನರೇಂದ್ರ ಮೋದಿ @ 20 ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಡಿಜಿಟಲ್‌ ಮೀಡಿಯಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಅಡಲು ಛಾಯಾ ಚಿತ್ರೀಕರಣ ಮತ್ತು ವಿಡಿಯೋ ಚಿತ್ರೀಕರಣಕ್ಕೆ 12.38 ಲಕ್ಷ ರು. ಖರ್ಚಾಗಿದೆ.

 

ವೇದಿಕೆಗೆ ಹೂವಿನ ಅಲಂಕಾರಕ್ಕೆ 6,39,450 ರು.,, ಬೆಳಕು ವಿನ್ಯಾಸ ಸೇರಿದಂತೆ 24,67,958 ರು. ಖರ್ಚಾಗಿರುವುದು ಆರ್‌ಟಿಐ ಮಾಹಿತಿಯಿಂದ ತಿಳಿದು ಬಂದಿದೆ.

 

‘ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಲ್ಲಿ ಮೋದಿ @20 ಪುಸ್ತಕ ಬಿಡುಗಡೆಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ ಒಂದು ದಿನದ ಕಾರ್ಯಕ್ರಮಕ್ಕೆ ರೂಪಾಯಿ 35, 69, 675/- ಗಳನ್ನು ಬೇಕಾಬಿಟ್ಟಿಯಾಗಿ ಖರ್ಚು ತೋರಿಸಲಾಗಿದೆ. ಸರ್ಕಾರಿ ಹಣವನ್ನು ಕಾರ್ಯಕ್ರಮ ದ ಆಯೋಜಕರು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ಅಕ್ರಮ ಜರುಗಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ. ಶೀಘ್ರದಲ್ಲಿ ಇದರ ವಿರುದ್ಧ ಮೊಕದ್ದಮೆ ಹುಡಲು ಚಿಂತನೆ ನಡೆಸಿದ್ದೇನೆ,’ ಎನ್ನುತ್ತಾರೆ ಭೀಮನಗೌಡ ಪರಗೊಂಡ.

 

ಈ ಪುಸ್ತಕವು ಮೋದಿಯವರು ಗುಜರಾತ್ ಸಿಎಂ ಆಗಿದ್ದ ಅವಧಿಯಿಂದ ಹಿಡಿದು ಭಾರತದ ಪ್ರಧಾನಿ ಆಗುವವರೆಗೆ ಅಂದರೆ ಮೋದಿಯವರ ಕಳೆದ 20 ವರ್ಷಗಳ ರಾಜಕೀಯ ಜೀವನದ ಪಯಣವನ್ನು ವಿವರಿಸುತ್ತದೆ. 2002 ರಲ್ಲಿ ಗುಜರಾತ್‌ನ (Gujrat) ಆಡಳಿತವನ್ನು ವಹಿಸಿಕೊಂಡರು. ಕಳೆದ 8 ವರ್ಷಗಳಿಂದ ರಾಷ್ಟ್ರವನ್ನು ಮುನ್ನಡೆಸುತ್ತಿದ್ದಾರೆ. ಈ ಪುಸ್ತಕವು ಕಳೆದ 20 ವರ್ಷಗಳಲ್ಲಿ ನರೇಂದ್ರ ಮೋದಿಯವರು ರೂಪಿಸಿದ ಮತ್ತು ಜಾರಿಗೆ ತಂದ ಆಡಳಿತದ ಮಾದರಿಯನ್ನು ಎತ್ತಿ ತೋರಿಸುವ ಮತ್ತು ಪ್ರದರ್ಶಿಸುವ ಪ್ರಯತ್ನವಾಗಿದೆ ಎಂದು ಪ್ರಕಾಶಕರು ಹೇಳಿದ್ದನ್ನು ಸ್ಮರಿಸಬಹುದು.

 

ಬುದ್ದಿಜೀವಿಗಳು ಮತ್ತು ತಜ್ಞರು ಬರೆದಿರುವ ತುಣುಕುಗಳ ಸಂಕಲನವಾಗಿರುವ ಈ ಪುಸ್ತಕವು, ಪ್ರಧಾನಿ ಮೋದಿಯವರ ಅನನ್ಯ ಆಡಳಿತ ಮಾದರಿಯ ಖಾತೆಯಲ್ಲಿ ಕಳೆದ 20 ವರ್ಷಗಳಲ್ಲಿ ಗುಜರಾತ್ ಮತ್ತು ದೇಶದ ಮೂಲಭೂತ ಪರಿವರ್ತನೆಯ ಮೇಲೆ ಬೆಳಕು ಚೆಲ್ಲುತ್ತದೆ ಎಂದೂ ಹೇಳಿತ್ತು.

 

ಈ ಪುಸ್ತಕವನ್ನು ರೂಪಾ ಪಬ್ಲಿಕೇಷನ್ಸ್ ಪ್ರಕಟಿಸಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಬುದ್ಧಿಜೀವಿಗಳು ಮತ್ತು ತಜ್ಞರು ಬರೆದಿರುವ ತುಣುಕುಗಳ ಸಂಕಲನವಿದೆ.

 

ಕರ್ನಾಟಕದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಪ್ರಧಾನಿ ಮೋದಿಯವರು ಕನ್ನಡ ನೆಲ, ಜಲ, ಉದ್ಯಮ, ಹೊಸ ತಂತ್ರಜ್ಞಾನ ಬಗೆಗೆ ಅಭಿಮಾನ ಹೊಂದಿದ್ದಾರೆ. ಅವರ ವಿಚಾರಧಾರೆಗಳನ್ನು ಕರ್ನಾಟಕದಲ್ಲಿ ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಅವರ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿ ರಾಜ್ಯದ್ಯಂತ ಹಂಚುವ ಕೆಲಸವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img