Sunday | June 21, 2026 |

ಉಲ್ಲಂಘನೆ; ಗೋಶಾಲೆ ತೆರೆಯುವ ಪ್ರಸ್ತಾವನೆ ತಿರಸ್ಕರಿಸಿದ್ದ ಸರ್ಕಾರ, ಜನಸೇವಾ ಟ್ರಸ್ಟ್‌ಗೆ 35 ಎಕರೆ ಮಂಜೂರು

Support THE-FILE

spot_img

ಬೆಂಗಳೂರು; ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿರುವ ಗೋಮಾಳ ಜಮೀನಿನಲ್ಲಿ ಗೋ ಶಾಲೆ ತೆರೆಯಲು ಹಲವು ಸಂಘ ಸಂಸ್ಥೆಗಳು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಸ್ಥಳೀಯ ತಹಶೀಲ್ದಾರ್‌, ರಾಜಸ್ವ ನಿರೀಕ್ಷಕರು ಸಂಘ ಪರಿವಾರ ಹಿನ್ನೆಲೆಯ ಜನಸೇವಾ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದರು ಎಂಬುದು ಇದೀಗ ಬಹಿರಂಗವಾಗಿದೆ.

 

ಕುರುಬರಹಳ್ಳಿಯಲ್ಲಿ ರೈತರು ಜಾನುವಾರುಗಳನ್ನು ಮನೆಯಲ್ಲಿಯೇ ಕಟ್ಟಿ ಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಮೇವಿಗಾಗಿ ಜಾಗದ ಅವಶ್ಯಕತೆ ಇರುವ ಕಾರಣ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ವರದಿ ನೀಡಿ ಸಂಘ ಸಂಸ್ಥೆಗಳ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಅಧಿಕಾರಿಗಳೇ ಇದೀಗ ಜನಸೇವಾ ಟ್ರಸ್ಟ್‌ಗೆ ಮಾತ್ರ ಗೋಮಾಳ ಜಮೀನನ್ನು ಹಂಚಿಕೆ ಮಾಡಲು ಪರೋಕ್ಷವಾಗಿ ಸಹಕರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಗೋಮಾಳ ಜಮೀನು ಖಾಯಂ ಮಂಜೂರಾತಿಗಾಗಿ ಜನಸೇವಾ ಟ್ರಸ್ಟ್‌ ಪ್ರಸ್ತಾವನೆ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಕ್ರಿಯೆಗಳನ್ನು ಪಾಲಿಸದೆಯೇ ತಾಲೂಕು ಮೋಜಣಿದಾರರು ಪೂರಕವಾದ ವರದಿ ಸಲ್ಲಿಸಿದ್ದರು. ಅಷ್ಟೇ ಕ್ಷಿಪ್ರಗತಿಯಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ತಹಶೀಲ್ದಾರ್‌ ಕೂಡ ಸ್ಕೆಚ್‌ ವರದಿಯನ್ನು 2021ರ ಜುಲೈ 9ರಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನು ಮಂಜೂರು ಮಾಡುವ ಉದ್ದೇಶದಿಂದಲೇ 2021ರ ಜುಲೈ 15ರಂದು ಚೆಕ್‌ ಲಿಸ್ಟ್‌ಗೆ ಸಹಿ ಮಾಡಿದ್ದಾರೆ. ಕೇವಲ ಒಂಬತ್ತು ದಿನದೊಳಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿರುವುದು ಲಭ್ಯವಿರುವ ದಾಖಲೆಗಳಿಂದ ತಿಳಿದು ಬಂದಿದೆ.

 

ನಾಡಕಚೇರಿ, ತಹಶೀಲ್ದಾರ್‌ ಸೇರಿದಂತೆ ಕಂದಾಯ ಇಲಾಖೆಯು ಜನಸೇವಾ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಲು ತೋರಿಸಿದ್ದ ಅತ್ಯುತ್ಸಾಹವನ್ನು ಮಾತೃ ಫೌಂಡೇಷನ್‌ ದಾಖಲೆ ಸಮೇತ ಸರ್ಕಾರದ ಗಮನಕ್ಕೆ ತಂದಿದ್ದರು. ‘ಕುರುಬರಹಳ್ಳಿಯಲ್ಲಿ ರೈತರು ಮನೆಯಲ್ಲಿಯೇ ಜಾನುವಾರುಗಳನ್ನು ಕಟ್ಟಿಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಮಾತೃ ಫೌಂಡೇಷನ್‌ಗೆ ಹಿಂಬರಹ ನೀಡಿದ್ದಾರೆ. ಆದರೆ ಈ ನಿಯಮ ಜನಸೇವಾ ಟ್ರಸ್ಟ್‌ಗೆ ಅನ್ವಯವಾಗುವುದಿಲ್ಲವೇ,? ಎಂದು ಫೌಂಡೇಷನ್‌ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು. ಇದು ಕಂದಾಯ ಸಚಿವ ಆರ್‌ ಅಶೋಕ್‌ ಅವರ ಗಮನದಲ್ಲೂ ಇತ್ತು ಎಂದು ಗೊತ್ತಾಗಿದೆ.

 

ಅಷ್ಟೇ ಅಲ್ಲ, ಮಾತೃ ಫೌಂಡೇಷನ್‌ ಹೆಸರಿನಲ್ಲಿ ಸರ್ವೆಯಾಗಿದ್ದ ಜಾಗವನ್ನು ಸೇರಿಸಿ ಸರ್ವೆ ಸ್ಕೆಚ್‌ ಮಾಡಿ ರಾಜಸ್ವ ನಿರೀಕ್ಷರು ವರದಿ ಸಲ್ಲಿಸಿದ್ದರು. ಜನಸೇವಾ ಟ್ರಸ್ಟ್‌ ಅರ್ಜಿ ಸಲ್ಲಿಸುವ ಮುನ್ನವೇ ಸರ್ವೆ ಸ್ಕೆಚ್‌ ಮಾಡಿದ್ದ ರಾಜಸ್ವ ನಿರೀಕ್ಷಕರು ತಹಶೀಲ್ದಾರ್‌ಗೆ ಖುದ್ದು ವರದಿ ಸಲ್ಲಿಸಿದ್ದಾರೆ. ಈ ಪ್ರಕ್ರಿಯೆಯನ್ನು ನೋಡಿದರೆ ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನನ್ನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದೂ ಮಾತೃ ಫೌಂಡೇಷನ್‌ ತನ್ನ ದೂರಿನಲ್ಲಿ ಪ್ರಸ್ತಾಪಿಸಿದೆ.

 

‘ಮಾತೃ ಫೌಂಡೇಷನ್‌ಗೆ ಗೋಮಾಳ ಜಮೀನು ಮಂಜೂರು ಮಾಡದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ಮತ್ತು ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡುತ್ತೇವೆ. ಹೀಗಾಗಿ ಜನಸೇವಾ ಟ್ರಸ್ಟ್‌ವೊಂದಕ್ಕೇ 24 ಎಕರೆ ಜಮೀನು ಮಂಜೂರು ಮಾಡಬಾರದು. ಇದೊಂದೇ ಟ್ರಸ್ಟ್‌ಗೆ ಇಷ್ಟೊಂದು ಜಾಗ ನೀಡಬಾರದು,’ ಎಂದು ಮಾತೃ ಫೌಂಡೇಷನ್‌ ರಾಜ್ಯದ ಅಡ್ವೋಕೇಟ್‌ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿತ್ತು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img