Friday | June 19, 2026 |

ಕೆಟಿಪಿಪಿ ಕಾಯ್ದೆ ಉಲ್ಲಂಘನೆ; ಸಚಿವ, ಕುಲಪತಿ, ರಿಜಿಸ್ಟ್ರಾರ್‌ ವಿರುದ್ಧ ಕೆಆರ್‌ಎಸ್‌ ಪಕ್ಷದಿಂದ ಲೋಕಾಯುಕ್ತಕ್ಕೆ ದೂರು

Support THE-FILE

spot_img

ಬೆಂಗಳೂರು; ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘನೆ ಮತ್ತು ಟೆಂಡರ್‌ ಮೊತ್ತಕ್ಕಿಂತ ಹೆಚ್ಚು ದರ ನಮೂದಿಸಿ ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಗುರುತರವಾದ ಆರೋಪವನ್ನು ಹೊರಿಸಿರುವ ಕರ್ನಾಟಕ ರಾಷ್ಟ್ರಸಮಿತಿ ಪಕ್ಷವು ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಹಾಗೂ ನೃಪತುಂಗ ವಿಶ್ವವಿದ್ಯಾಲಯದ ಪ್ರೊಛಾನ್ಸಲರ್‌ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌, ರಿಜಿಸ್ಟ್ರಾರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.

 

ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯದ ಹಾಲಿ ಇರುವ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ನಮೂದಿಸಿರುವುದು ಸೇರಿದಂತೆ ಹಲವು ಪ್ರಮುಖ ಅಂಶಗಳಿಗೆ ಸಚಿವ ಸಂಪುಟದ ಅನುಮೋದನೆಯಿಲ್ಲದೆಯೇ ಆದೇಶ ಹೊರಡಿಸಿರುವುದು ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟಿದೆ ಎಂದು ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ ಎನ್‌ ದೀಪಕ್‌ ಅವರು ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಜ್ಯ ಸಚಿವ ಸಂಪುಟವನ್ನೇ ಕತ್ತಲಲ್ಲಿಟ್ಟು ವಂಚಿಸಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾಡಿರುವ ಗಂಭೀರ ಪ್ರಕರಣವಾಗಿರುವುದರಿಂದ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌, ನೃಪತುಂಗ ವಿಶ್ವವಿದ್ಯಾಲಯದ ಕುಲಲಪತಿ ಡಾ ಶ್ರೀನಿವಾಸ ಎಸ್‌ ಬಳ್ಳಿ, ಕುಲಸಚಿವ (ಆಡಳಿತ) ಕೆ ಆರ್‌ ಕವಿತಾ ಅವರ ವಿರುದ್ಧ ತಕ್ಷಣವೇ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅನ್ವಯ ಎಫ್‌ಐಆರ್‌ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಸಿ ಎನ್‌ ದೀಪಕ್‌ ಅವರು ಒತ್ತಾಯಿಸಿದ್ದಾರೆ.

 

ದೂರಿನಲ್ಲಿ ಸಚಿವ ಅಶ್ವಥ್‌ನಾರಾಯಣ್‌ ಅವರನ್ನು ಮೊದಲ ಪ್ರತಿವಾದಿಯನ್ನಾಗಿಸಲಾಗಿದೆ. ‘ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಹಾಗೂ ನೃಪತುಂಗ ವಿವಿಯ ಪ್ರೋ ಛಾನಲ್ಸರ್‌ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ತಮ್ಮ ಸಂಬಂಧಿಯೊಬ್ಬರಿಗೆ ಸೇರಿದ ಕಟ್ಟಡ ನಿರ್ಮಾಣ ಕಂಪನಿಯೊಂದಕ್ಕೆ ವಿಶ್ವವಿದ್ಯಾಲಯದ ಕಾಮಗಾರಿ ಗುತ್ತಿಗೆ ನೀಡುವ ದುರುದ್ದೇಶದಿಂದಲೇ ನಿಯಮಗಳನ್ನು ಗಾಳಿಗೆ ತೂರಲಾಗಿದೆ,’ ಎಂದು ಕರ್ನಾಟಕ ರಾಷ್ಟ್ರಸಮಿತಿಯು ದೂರಿನಲ್ಲಿ ಗುಮಾನಿ ವ್ಯಕ್ತಪಡಿಸಿದೆ.

 

ಅಂದಾಜು ಮೊತ್ತಕ್ಕಿಂತ ಶೇ 5ಕ್ಕಿಂತ ಹೆಚ್ಚಿನ ಲಾಭಾಂಶವುಳ್ಳ ಟೆಂಡರ್‌ ಪ್ರೀಮಿಯಂ ಆಗಿದ್ದಲ್ಲಿ ಆ ಟೆಂಡರ್‌ನ್ನು ಅಂಗೀಕರಿಸಬಾರದು ಎಂದು 2022ರ ಮೇ 10ರಂದೇ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯು ಸೂಚಿಸಿದೆ. ಆದರೆ ಈ ಪ್ರಕರಣದಲ್ಲಿ ಪರಿಷ್ಕೃತ ಟೆಂಡರ್‌ಗಿಟ್ಟ ಮೊತ್ತಕ್ಕಿಂತ ಶೇ.9.9ಕ್ಕಿಂತ ಹೆಚ್ಚಾಗಿದೆ. ಆದರೂ ಇದಕ್ಕೆ ಸಕ್ಷಮ ಪ್ರಾಧಿಕಾರವು ಸೂಕ್ತ ಸಮರ್ಥನೆಯನ್ನು ಒದಗಿಸಿಲ್ಲ ಎಂದು ಪಕ್ಷವು ದೂರಿನಲ್ಲಿ ವಿವರಿಸಿದೆ.

 

‘ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕವಾಗಿ ತೆರಿಗೆ ಹಣದಲ್ಲಿ ಭ್ರಷ್ಟಾಚಾರ ಮಾಡುವ ಉದ್ದೇಶದಿಂದಲೇ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸುವಾಗ ಸಂಬಂಧಿಸಿದ ಇಲಾಖೆ ಸಚಿವ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಉದ್ದೇಶಪೂರ್ವಕವಾಗಿಯೇ ಪ್ರಸ್ತಾವನೆಯನ್ನು ಅಮೂಲಾಗ್ರವಾಗಿ ಪರಿಶೀಲಿಸದೇ ಕರ್ತವ್ಯಲೋಪೆಸಗಿದ್ದಾರೆ. ಇದು ಪೂರ್ವನಿರ್ಧರಿತ ಮತ್ತು ನಿರ್ದಿಷ್ಟ ಕಂಪನಿ/ಗುತ್ತಿಗೆದಾರರಿಗೆ ಕೋಟ್ಯಂತರ ರುಪಾಯಿ ಮೊತ್ತದ ಕಾಮಗಾರಿಯನ್ನು ವಹಿಸುವ ಸಂಚು ರೂಪಿಸಲಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿದೆ.. ಕೆಟಿಪಿಪಿ ಕಾಯ್ದೆ ಉಲ್ಲಂಘಿಸಲಾಗಿದೆ ಎಂದು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರೆ ಅಧಿಕಾರಿಗಳು ಇ-ಕಡತದಲ್ಲಿನ ಟಿಪ್ಪಣಿ ಹಾಳೆಗಳಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ,’ಎಂದು ಕೆಆರ್‌ಎಸ್‌ ಪಕ್ಷವು ದಾಖಲೆಯನ್ನು ಲೋಕಾಯುಕ್ತರಿಗೆ ಒದಗಿಸಿದೆ.

 

 

ಪ್ರಕರಣದ ಹಿನ್ನೆಲೆ

 

ಉನ್ನತ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುವ ನೃಪತುಂಗ ವಿಶ್ವವಿದ್ಯಾಲಯ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನೇರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವರ್ಗಾಯಿಸಿರುವುದೇ ಅಕ್ರಮ ನಡೆದಿದೆ ಎಂಬ ಶಂಕೆಗೆ ಮೂಲ ಕಾರಣ. ವಿಶ್ವವಿದ್ಯಾಲಯದ ಹಾಲಿ ಇರುವ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವಹಿಸಿ 2022ರ ಜನವರಿ 5ರಂದೇ ಸರ್ಕಾರವು ಆದೇಶ ಹೊರಡಿಸಿತ್ತು.

 

ನೃಪತುಂಗ ವಿಶ್ವವಿದ್ಯಾಲಯದ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಸಂಬಂಧ ಈ ಯಾವ ಪ್ರಕ್ರಿಯೆಗಳನ್ನೂ ನಡೆಸದೆಯೇ ನೇರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವರ್ಗಾಯಿಸಲಾಗಿದೆ.

 

‘ಕಾಮಗಾರಿಯನ್ನು ನೇರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್‌ ಘಟಕಕ್ಕೆ ವಹಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ 199ರ ಕಲಂ 4(ಜಿ) ರಡಿ ವಿನಾಯಿತಿ ಪಡೆದು ಕ್ರಮವಹಿಸಬೇಕಿರುತ್ತದೆ. ತದನಂತರ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸುವಾಗ ಈ ಅಂಶಕ್ಕೆ ಅನುಮೋದನೆ ಕೋರಿರುವುದು ಕಂಡುಬಂದಿರುವುದಿಲ್ಲ. ಈ ಕ್ರಮವು ಕೆಟಿಪಿಪಿಯ ನಿಯಮಗಳ ಉಲ್ಲಂಘನೆಯಾಗಿದೆ,’ ಎಂದು ಲಭ್ಯ ಇರುವ ದಾಖಲೆಗಳಿಂದ ತಿಳಿದು ಬಂದಿದೆ.

 

ಅದೇ ರೀತಿ ಈ ಯೋಜನೆ ಕುರಿತು ಯೋಜನೆಯ ಅಂದಾಜು, ರೇಖಾ ನಕ್ಷೆ, ಅಂದಾಜು ಪಟ್ಟಿಗಳಿಗೆ ಯಾವುದೇ ಸಕ್ಷಮ ಅಧಿಕಾರಿ/ ಪ್ರಾಧಿಕಾರ ಸಹಿಯೊಂದಿಗೆ ದೃಢೀಕರಿಸಿರುವುದಿಲ್ಲ (ಅಸಿಸ್ಟಂಟ್‌ ಇಂಜಿನಿಯರ್‌, ಅಸಿಸ್ಟಂಟ್‌ ಎಕ್ಸಿಕ್ಯೂಟಿವ್ ಇಂಜಿನಿಯರ್‌, ಎಕ್ಸಿಕ್ಯೂಟಿವ್ ಇಂಜಿನಿಯರ್‌) ಕೇವಲ ಪದನಾಮವನ್ನು ಮಾತ್ರ ದಾಖಲಿಸಲಾಗಿದೆಯೇ ವಿನಃ ಎಲ್ಲಿಯೂ ಸಹಿ ಕಂಡುಬಂದಿರುವುದಿಲ್ಲ ಎಂದು ಅಧಿಕಾರಿಗಳು ಟಿಪ್ಪಣಿ ಹಾಳೆಯಲ್ಲಿ ದಾಖಲಿಸಿದ್ದರು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img