Sunday | September 13, 2026 |

ಸರ್ಕಾರಕ್ಕೆ ಆದಾಯ ನಷ್ಟ; ಸಂಗ್ರಹಾಲಯಗಳಲ್ಲೇ ಕೊಳೆತ ನಾಟ, ಹಾಳುಬಿದ್ದ ಅರಣ್ಯ ಉತ್ಪನ್ನ

Support THE-FILE

spot_img

ಬೆಂಗಳೂರು; ಸರ್ಕಾರಿ ನಾಟಾ ಸಂಗ್ರಹಾಲಯಗಳಲ್ಲಿ ನಾಟಾ ಮತ್ತು ಇತರೆ ಅರಣ್ಯ ಉತ್ಪನ್ನಗಳನ್ನು ಬಹಿರಂಗ ಹರಾಜು ಮೂಲಕ ವಿಲೇ ಮಾಡಲು ಅನುಮತಿ ಸಿಗದ ಕಾರಣ ಸರ್ಕಾರಿ  ಸಂಗ್ರಹಾಲಯಗಳಲ್ಲಿ ನಾಟ, ಅರಣ್ಯ ಉತ್ಪನ್ನಗಳು ಹಾಳಾಗುತ್ತಿದೆ. ಅಲ್ಲದೇ ಇದರಿಂದ ಸರ್ಕಾರಕ್ಕೆ ಬಹುಕೋಟಿಗಳಷ್ಟು ಆದಾಯವು ನಷ್ಟವುಂಟಾಗುತ್ತಿದೆ.

 

ಬಹಿರಂಗ ಹರಾಜಿಗೆ ಅವಕಾಶ ಮಾಡಿಕೊಡಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಕಳೆದ 2 ವರ್ಷಗಳಿಂದಲೂ ಪ್ರಸ್ತಾವನೆ ಸಲ್ಲಿಸುತ್ತಿದ್ದರೂ ಸರ್ಕಾರ ಮಾತ್ರ ಇದುವರೆಗೂ ಅನುಮತಿ ನೀಡುತ್ತಿಲ್ಲ. ಈ ಸಂಬಂಧ 2022ರ ನವೆಂಬರ್‌ 7ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು) ಅರಣ್ಯ ಪರಿಸರ ಜೀವಿಶಾಸ್ತ್ರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ನಾಟಾ ಮತ್ತು ಅರಣ್ಯ ಉತ್ಪನ್ನಗಳನ್ನು 2017ರ ನವೆಂಬರ್‌ 30ರಿಂದ ಇ-ಹರಾಜು ಮೂಲಕ ವಿಲೇ ಮಾಡುತ್ತಿದೆ. ಆದರೆ ಇ-ಹರಾಜಿನಲ್ಲಿ ಸರ್ಕಾರಿ ನಾಟಾ ಸಂಗ್ರಹಾಲಯಗಳಲ್ಲಿನ ಅರಣ್ಯ ಉತ್ಪನ್ನಗಳನ್ನು ವಿಲೇ ಮಾಡುವಲ್ಲಿ ನಿರೀಕ್ಷಿತ ಪ್ರಗತಿ ಕಂಡು ಬಂದಿಲ್ಲ. ಅಲ್ಲದೆ ಹರಾಜಾಗದೇ ಉಳಿದಿರುವ ಅರಣ್ಯ ಉತ್ಪನ್ನಗಳ ಲಾಟುಗಳು ಮುಂದಿನ ದಿನಗಳಲ್ಲಿ ಇ-ಹರಾಜಿನಲ್ಲಿ ವಿಲೇವಾರಿಯಾಗುವುದು ಸಹ ಕಷ್ಟಸಾಧ್ಯವಾಗುತ್ತದೆ ಎಂಬ ಅಂಶವನ್ನು ಪತ್ರದಲ್ಲಿ ಉಲ್ಲೇಖಿಸಿದೆ.

 

 

ಧಾರವಾಡ ವಿಭಾಗಕ್ಕೆ ಸಂಬಂಧಿಸಿದಂತೆ ಹರಾಜಾಗದೇ ಉಳಿದಿರುವ ಲಾಟುಗಳನ್ನು ಮತ್ತೊಂದು ಬಾರಿ ಇ-ಹರಾಜಿಗೆ ಇಟ್ಟು ಅವುಗಳು ಹರಾಜಾಗದೇ ಇದ್ದಲ್ಲಿ ಈ ಲಾಟುಗಳು ಬಿಸಿಲು, ಮಳೆ, ಗಾಳಿಗೆ ಸಿಲುಕಿ ಹಾಳಾಗುತ್ತಿವೆ. ಮಂಗಳೂರು ವಿಭಾಗದ ನೆಟ್ಟಣ ಕೇಂದ್ರೀಯ ನಾಟಾ ಸಂಗ್ರಹಾಲಯದಲ್ಲಿ ಕೆಲವು ನಾಟಾಗಳು ಕುಂಬಾಗಿ ಮಣ್ಣಾಗಿವೆ. ಹೀಗಾಗಿ ಈ ನಾಟಾಗಳು ಗುಣಮಟ್ಟ ಕಳೆದುಕೊಂಡಿವೆ. ಇಂತಹ ಉತ್ಪನ್ನಗಳನ್ನು ಇ-ಹರಾಜು ಹಾಕಿದರೆ ಬಿಡ್‌ದಾರರು ಭಾಗವಹಿಸಲು ಆಸಕ್ತಿ ವಹಿಸುವುದಿಲ್ಲ ಎಂದು ಪತ್ರದಲ್ಲಿ ವಿವರಿಸಲಾಗಿದೆ.

 

 

‘ಶಿವಮೊಗ್ಗ ವಿಭಾಗ ವ್ಯಾಪ್ತಿಯ ಅಲ್ಕೋಳದಲ್ಲಿರುವ ಸರ್ಕಾರಿ ನಾಟಾ ಸಂಗ್ರಹಾಲಯದಲ್ಲಿ ಅರಣ್ಯ ಮೊಕದ್ದಮೆಗಳಿಗೆ ಸಂಬಂಧಿಸಿದ ನಾಟಾ ಮತ್ತು ಅರಣ್ಯ ಉತ್ಪನ್ನಗಳು ಕ್ಷೀಣಿಸುತ್ತಿವೆ. ಇದು ಇನ್ನಷ್ಟು ಹಾಳಾಗುವ ಮುನ್ನ ಸಾರ್ವಜನಿವಾಗಿ ಬಹಿರಂಗ ಹರಾಜು ಮೂಲಕ ವಿಲೇ ಮಾಡಲು ಸರ್ಕಾರವು ಅನುಮತಿ ನೀಡಬೇಕು ಎಂದು ಅರಣ್ಯಾಧಿಕಾರಿಗಳು ಪದೇಪದೇ ಪ್ರಸ್ತಾವನೆಗಳನ್ನು ಸಲ್ಲಿಸುತ್ತಿದ್ದರೂ ಸರ್ಕಾರ ಇದುವರೆಗೂ ಪರಿಗಣಿಸುತ್ತಿಲ್ಲ ಎಂಬುದು ಪತ್ರಗಳಿಂದ ತಿಳಿದು ಬಂದಿದೆ.

 

 

‘ಅರಣ್ಯ ಉತ್ಪನ್ನಗಳನ್ನು ಹಾಗೆಯೇ ಬಿಟ್ಟರೆ ಬಿಸಲು, ಗಾಳಿ, ಮಳೆಗೆ ಸಿಲುಕಿ ಹಾಳಾಗುವ ಸಂಭವ ಇರುವುದರಿಂದ ಹಾಗೂ ಸರ್ಕಾರಕ್ಕೆ ಹೆಚ್ಷಿನ ನಷ್ಟ ಸಂಭವಿಸುವ ಸಾಧ್ಯತೆ ಇದೆ. ಇ-ಹರಾಜಿನಲ್ಲಿ ಕನಿಷ್ಠ ಮೂರು ಅಥವಾ ಅದಕ್ಕಿಂತ ಹೆಚ್ಚು ಬಾರಿ ಹರಾಜಾಗದೇ ಉಳಿದಿರುವ ಲಾಟುಗಳನ್ನು ವಿಲೇಗೊಳಿಸಲು ಒಂದು ಬಾರಿ ಅನ್ವಯವಾಗುವಂತೆ ಹಾಗೂ ಇಲಾಖೆಗೆ ಕೋಟ್ಯಂತರ ರುಪಾಯಿಗಳಷ್ಟು ಆದಾಯ ನಷ್ಟವಾಗುವುದನ್ನು ತಪ್ಪಿಸಬೇಕು,’ ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು.

 

ಇ-ಹರಾಜಿನಲ್ಲಿ ವಿಲೇವಾರಿಯಾಗದೇ ಇರುವ ಲಾಟುಗಳಲ್ಲಿ ಮೆದು ಜಾತಿಯ ಅರಣ್ಯ ಉತ್ಪನ್ನಗಳಲ್ಲದೇ ಇತರೆ ಜಾತಿಯ ಅರಣ್ಯ ಉತ್ಪನ್ನಗಳು ಸಹ ಇವೆ. ಅವುಗಳನ್ನು ಹಾಗೆಯೇ ಇಟ್ಟಲ್ಲಿ ಕ್ರಮೇಣವಾಗಿ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಲಾಟುಗಳನ್ನು ಬಹಿರಂಗ ಹರಾಜಿಗೆ ಒಳಪಡಿಸಿದಲ್ಲಿ ತಕ್ಷಣವೇ ವಿಲೇಯಾಗುವ ಸಾಧ್ಯತೆ ಇವೆ. ಇದಕ್ಕೆ ಅನುಮತಿ ನೀಡಿದರೆ ಸರ್ಕಾರಕ್ಕೆ ಆರ್ಥಿಕ ಲಾಭವಾಗುವ ಸಾಧ್ಯತೆ ಇದೆ ಎಂಬ ಅಂಶವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

 

ನಾಟಾ ಮತ್ತು ಇತರೆ ಅರಣ್ಯ ಉತ್ಪನ್ನಗಳ ಇ-ಹರಾಜಿನಲ್ಲಿ ಎಲ್ಲಾ ಸಣ್ಣ ಮತ್ತು ದೊಡ್ಡ ಬಿಡ್‌ದಾರರು ಭಾಗವಹಿಸುತ್ತಿಲ್ಲ. ಕೆಲ ಬಿಡ್‌ದಾರರು ಬಳಿ ಕಂಪ್ಯೂಟರ್‌ ಅಥವಾ ಲ್ಯಾಪ್‌ಟಾಪ್‌ ಸೌಲಭ್ಯವಿಲ್ಲ. ಅಥವಾ ಬಳಸಲು ಅವರಿಗೆ ಜ್ಞಾನವಿಲ್ಲ. ಹೀಗಾಗಿ ಇ-ಹರಾಜಿನಲ್ಲಿ ಭಾಗವಹಿಸುತ್ತಿಲ್ಲ ಎಂದು ಪತ್ರದಲ್ಲಿ ಸರ್ಕಾರದ ಗಮನಕ್ಕೆ ತರಲಾಗಿದೆ.

 

2020-21ರಲ್ಲಿ 87,058 ಲಾಟುಗಳು, 2021-22ರಲ್ಲಿ 71,1414, 2022-23ರ ಸೆಪ್ಟಂಬರ್‌ ಅಂತ್ಯಕ್ಕೆ 30,502 ಸೇರಿ ಕಳೆದ ಮೂರು ಸಾಲಿನಲ್ಲಿ ಸರಾಸರಿ 62,901 ಲಾಟುಗಳು ಇ-ಹರಾಜಿನಲ್ಲಿ ವಿಲೇ ಮಾಡಲು ಇಡಲಾಗಿದೆ. ಅದೇ ರೀತಿ 2021-21ರಲ್ಲಿ 50,478, 2021-22ರಲ್ಲಿ 43,337, 2022-23ರ ಸೆಪ್ಟಂಬರ್‌ ಅಂತ್ಯಕ್ಕೆ 23,173 ಲಾಟುಗಳು ವಿಲೇಯಾಗಿವೆ.

 

ಬಹಿರಂಗ ಹರಾಜಿಗೆ ಅನುಮತಿ ನೀಡಬೇಕು ಎಂದು ಹಿಂದಿನ ಅರಣ್ಯ ಸಚಿವರಾಗಿದ್ದ ಉಮೇಶ್‌ ಕತ್ತಿ ಅವರ ಗಮನಕ್ಕೂ ತರಲಾಗಿತ್ತು. ಈಗ ಈ ಖಾತೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಇದೆ. ಅವರು ಕಾರ್ಯದ ಒತ್ತಡದಿಂದಾಗಿ ಈ ಬಗ್ಗೆ ಗಮನಹರಿಸಲಾಗುತ್ತಿಲ್ಲ. ಹೀಗಾಗಿ ಬಹಿರಂಗ ಹರಾಜಿಗೆ ಅನುಮತಿ ನೀಡಬೇಕೇ ಅಥವಾ ಇ-ಹರಾಜಿನಲ್ಲಿ ಯಾವ ಸುಧಾರಣೆ ತರಬೇಕು ಎಂಬ ಬಗ್ಗೆ ಇಲಾಖೆಯ ಉನ್ನತ ಅಧಿಕಾರಿಗಳು ಗೊಂದಲದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img