Tuesday | September 15, 2026 |

ಬಸವೇಶ್ವರ ಪುತ್ಥಳಿ ಸ್ಥಾಪನೆ ಸ್ಥಳ, ವಿನ್ಯಾಸವೂ ಬದಲು; ಅಂಬೇಡ್ಕರ್‌-ನೆಹರೂ ಪ್ರತಿಮೆ ಮಧ್ಯೆ ಸ್ಥಾಪನೆಗೆ ಒಲವು

Support THE-FILE

spot_img

ಬೆಂಗಳೂರು; ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿಯನ್ನು ಈ ಮೊದಲು ವಿಧಾನಸೌಧದ ಆವರಣದೊಳಗೇ ಸ್ಥಾಪಿಸಲು ಸ್ಥಳ ಗುರುತಿಸಿದ್ದ ಸರ್ಕಾರವು ಇದೀಗ ವಿಧಾನಸೌಧ ಆವರಣದ ಎದುರಿನ ಸ್ಥಳವನ್ನು ಗುರುತಿಸಿದೆ ಎಂದು ತಿಳಿದು ಬಂದಿದೆ.

 

ವಿಧಾನಸೌಧದ ಆವರಣದೊಳಗೆ ಜಗಜ್ಯೋತಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಹಿಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಹೇಳಿದ್ದರಲ್ಲದೇ ಈ ಸಂಬಂಧ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದರು. ಆದರೀಗ ವಿಧಾನಸೌಧದ ಆವರಣದ ಎದುರಿಗಿರುವ ಸ್ಥಳವನ್ನು ಗುರುತಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಅಲ್ಲದೇ ವಿಧಾನಸೌಧ ಆವರಣದೊಳಗೆ ಅಶ್ವಾರೂಢ ಬಸವೇಶ್ವರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಸೂಚಿಸಿದ್ದರು. ಆದರೀಗ ಸ್ಥಳ ಬದಲಾಯಿಸಲು ಚಿಂತಿಸಿರುವ ಬಸವರಾಜ ಬೊಮ್ಮಾಯಿ ಅವರ  ನೇತೃತ್ವದ  ಸರ್ಕಾರವು ಪ್ರತಿಮೆ ವಿನ್ಯಾಸವನ್ನೂ ಬದಲಿಸಿದೆ. ಬಸವಣ್ಣನವರು ವಚನ ಬರೆಯುತ್ತಿರುವ ರೀತಿಯ ಪ್ರತಿಮೆ ಸ್ಥಾಪಿಸಲು ಮುಂದಾಗಿದೆ ಎಂದು ಗೊತ್ತಾಗಿದೆ.

 

ವಿಧಾನಸೌಧದ ಈಶಾನ್ಯ ಭಾಗದ ರೋಸ್‌ ಗಾರ್ಡನ್‌ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ಥಳಿಯನ್ನು ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ 2021ರ ಜುಲೈ 9ರಂದು ಪತ್ರ ಬರೆದಿತ್ತು. ಇದಕ್ಕೆ ಸರ್ಕಾರವು ಮಂಜೂರಾತಿಯನ್ನು ನೀಡಿತ್ತು. ಆದರೀಗ . ಜವಾಹರಲಾಲ್‌ ನೆಹರು ಮತ್ತು ಅಂಬೇಡ್ಕರ್‌ ಪ್ರತಿಮೆಯ ಮಧ್ಯಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಮತ್ತು ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಸ್ಥಾಪಿಸಲು ಕೌಶಲ್ಯಾಭಿವೃದ್ಧಿ ಸಚಿವ ಅಶ್ವಥ್‌ನಾರಾಯಣ್‌ ಅವರು ಸೂಚಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

 

‘ಪರಸ್ಪರ ಅಭಿಮುಖವಾಗಿ ಹಾಲಿ ಇರುವ ಡಾ ಬಿ ಆರ್‌ ಅಂಬೇಡ್ಕರ್‌, ಜವಹರಲಾಲ್‌ ನೆಹರು ಅವರ ಪುತ್ಥಳಿಗಳು ಇರುವಂತೆಯೇ ಪ್ರಸ್ತಾಪಿತ ಪುತ್ಥಳಿಗಳನ್ನು ಪರಸ್ಪರ ಅಭಿಮುಖವಾಗಿ ನಿರ್ಮಿಸುವ ಅಥವಾ ಪೂರ್ವಾಭಿಮುಖವಾಗಿ ಪುತ್ಥಳಿಯನ್ನು ಪ್ರತಿಷ್ಠಾಪಿಸಲು,’ ನಿರ್ದೇಶನ ಕೋರಿರುವುದು  ಎಂದು ಗೊತ್ತಾಗಿದೆ.

 

12 ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮುಕುಟಪ್ರಾಯವಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿತ್ತು.

 

ಬಸವೇಶ್ವರ ವೃತ್ತದಲ್ಲಿ ಅಶ್ವಾರೂಢ ಬಸವಣ್ಣನವರ ಕಂಚಿನ ಪ್ರತಿಮೆಯನ್ನು 1994ರ ಆ.26ರಂದು ಅನಾವರಣಗೊಳಿಸಲಾಗಿತ್ತು. ಆ ನಂತರ ಅಶ್ವಾರೂಢ ಬಸವೇಶ್ವರ ಪ್ರತಿಮೆಯನ್ನು ಬಿಬಿಎಂಪಿ ಮರುವಿನ್ಯಾಸಗೊಳಿಸಿ ನವೀಕರಣಗೊಳಿಸಿತ್ತು. ಅದನ್ನು ಮುಖ್ಯಮಂತ್ರಿಯಾಗಿದ್ದ ಬಿ ಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಿದ್ದರು.

 

ಬೆಳ್ಳಿ ಮಹೋತ್ಸವದ ಸಂದರ್ಭದಲ್ಲಿ ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಈಗಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಪ್ರತಿಮೆಯ ಸುತ್ತಲೂ ಅನುಭವ ಮಂಟಪ, ಬಸವಣ್ಣನ ವಚನಗಳ ಸಾರಗಳನ್ನು ಸಾರುವ ರಚನೆಯನ್ನು ನಿರ್ಮಿಸಲು ತೀರ್ಮಾನಿಸಲಾಗಿತ್ತು. 2019–20ನೇ ಸಾಲಿನಲ್ಲಿ ಗಂಗಾಂಬಿಕೆ ಅವರು ಮೇಯರ್‌ ಆಗಿದ್ದಾಗ ಈ ಕಾಮಗಾರಿಗೆ ₹ 1.50 ಕೋಟಿ ಮಂಜೂರು ಮಾಡಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img