Saturday | September 12, 2026 |

ಖಾಸಗಿ ವ್ಯಕ್ತಿಗಳಿಗೆ ಅರಣ್ಯ ಪ್ರದೇಶ ಪರಭಾರೆ ಪ್ರಕರಣ; ಡೀಮ್ಡ್‌ ಅರಣ್ಯವಾಗಿದ್ದರೂ ಗೋಮಾಳವೆಂದು ವರದಿ

Support THE-FILE

spot_img

ಬೆಂಗಳೂರು; ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರವಾಗಿರುವ ಹೆಕ್ಟೇರ್‌ಗಟ್ಟಲೇ ಅರಣ್ಯ ಪ್ರದೇಶಗಳು ಸದ್ದಿಲ್ಲದೇ ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡುತ್ತಿರುವುದು ಇದೀಗ ಬಹಿರಂಗವಾಗಿದೆ. ಪರಿಭಾವಿತ ಅರಣ್ಯ ಪ್ರದೇಶ ಎಂದು ತಿಳಿದಿದ್ದರೂ ಕೂಡ ಈ ಭೂಮಿಯು ಗೋಮಾಳ ಎಂದು ನೀಡಿರುವ ವರದಿಯು ಮುನ್ನೆಲೆಗೆ ಬಂದಿದೆ.

 

ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ದಾಖಲೆಗಳ ಸಹಿತ ದೂರು ಸಲ್ಲಿಸಿದ್ದರೂ ನಿರ್ಲಕ್ಷ್ಯವಹಿಸಿದ್ದ ನಿಗಮವು ಇದೀಗ ಅರಣ್ಯ ಪ್ರದೇಶಗಳ ಪರಭಾರೆ, ನೆಡುತೋಪುಗಳ ಕಣ್ಮರೆ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ಸಲ್ಲಿಕೆಯಾಗಿರುವ ದೂರಿನ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಿವೃತ್ತ ನ್ಯಾಯಾಧೀಶರರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ 2022ರ ನವೆಂಬರ್‌ 16ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಚಿಕ್ಕಮಗಳೂರು ವಿಭಾಗದ ಬ್ಯಾಗಡಿಹಳ್ಳಿ ಸರ್ವೆನಂಬರ್‌ 32ರಲ್ಲಿನ ನಿಗಮಕ್ಕೆ ಹಸ್ತಾಂತರಿಸಿರುವ 192.00 ಎಕರೆ ಒಟ್ಟು ವಿಸ್ತೀರ್ಣದಲ್ಲಿ 52. ಎಕರೆ ವಿಸ್ತೀರ್ಣದ ಭೂಮಿಯನ್ನು ತಲಾ 4 ಎಕರೆಯಂತೆ ಒಟ್ಟು 13 ಮಂದಿಗೆ ಹಂಚಿಕೆ ಮಾಡಲಾಗಿದೆ. ಇದು ಪರಿಭಾವಿತ ಅರಣ್ಯ ಪ್ರದೇಶ ಎಂದು ತಿಳಿದಿದ್ದರೂ ಕೂಡ ಈ ಭೂಮಿಯು ಗೋಮಾಳ ಎಂದು ವರದಿ ನೀಡಲಾಗಿದೆ. ಮತ್ತು ಈ ಪ್ರದೇಶದಲ್ಲಿ ಮರಗಳನ್ನು ಬೆಳೆಸುವುದರಲ್ಲಿ ಅಕ್ರಮ ನಡೆದಿದೆ ಎಂದು ಅರಣ್ಯ ಅಭಿವೃದ್ದಿ ನಿಗಮದ ನೌಕರರಾಗಿದ್ದ ಪಾಪೇಗೌಡ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ಅದೇ ರೀತಿ ಬೆಂಗಳೂರು ವಿಭಾಗ ಮತ್ತು ಕೋಲಾರ ಪ್ರಾಂತೀಯ ವಿಭಾಗ ವ್ಯಾಪ್ತಿಯ ಶ್ರೀನಿವಾಸಪುರ ಘಟಕದಲ್ಲಿನ ಕದರೀಪುರ ಸರ್ವೆ ನಂಬರ್‌ 270.42 ಹೆಕ್ಟೇರ್‌ ವಿಸ್ತೀರ್ಣದ ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾಗಿದೆ. ಕದರೀಪುರ ನೆಡುತೋಪಿನ ಬದಿಗಿರಿರುವ ಮದನಹಳ್ಳಿ ಗ್ರಾಮದ ಸರ್ವೆ ನಂಬರ್‌ 124 ಮತ್ತು 125ರಲ್ಲಿ ನಿಗಮದ ವತಿಯಿಂದ ಬೆಳೆಸಲಾಗಿರುವ ನೆಡುತೋಪಿನಲ್ಲಿ 50 ಎಕರೆ ವಿಸ್ತೀರ್ಣ ಪ್ರದೇಶ ಒತ್ತುವರಿಯಾಗಿದೆ ಎಂದು ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಗಮನಕ್ಕೆ ತಂದಿದ್ದಾರೆ.

 

ನಿಗಮಕ್ಕೆ ಹಸ್ತಾಂತರಿಸಿರುವ ಅರಣ್ಯ ಪ್ರದೇಶಗಳಲ್ಲಿ 8,000 ಎಕರೆ ಅರಣ್ಯ ಪ್ರದೇಶ ಕಾಣೆಯಾಗಿದೆ. ಎಂದು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ತಪಾಸಣೆ ನಡೆಸಿದ ಸಿಎಜಿ ವರದಿಯಲ್ಲಿ ಸೇರಿಸಲಾಗಿದೆ. ಇದರ ಬಗ್ಗೆಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

 

‘ಈ ಎಲ್ಲಾ ಪ್ರಕರಣಗಳಲ್ಲಿ ನೈಜತೆ ಮತ್ತು ವಾಸ್ತವತೆಯನ್ನು ತಿಳಿಯುವ ಸಲುವಾಗಿ ಕೂಲಂಕುಷ ಮತ್ತು ನಿಷ್ಪಕ್ಷಪಾತ ವಿಚಾರಣೆ ನಡೆಸಿ ಸತ್ಯ ಹೊರಬರಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಒಂದು ಸಮಿತಿಯನ್ನು ನೇಮಕ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು,’ ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅರಣ್ಯ ಪಡೆಯ ಮುಖ್ಯಸ್ಥರೂ ಅಗಿರುವ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಪತ್ರದಲ್ಲಿ ಕೋರಿರುವುದು ತಿಳಿದು ಬಂದಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img