Sunday | September 13, 2026 |

ಸಚಿವಾಲಯ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ಮುಂಚೂಣಿಯಲ್ಲಿವೆ ನಗರಾಭಿವೃದ್ಧಿ, ಕಂದಾಯ ಇಲಾಖೆ

Support THE-FILE

spot_img

ಬೆಂಗಳೂರು; ಸಚಿವಾಲಯದ ಇಲಾಖೆಗಳಲ್ಲಿ ಭ್ರಷ್ಟಾಚಾರ, ನಿಯಮ ಉಲ್ಲಂಘನೆ, ಕರ್ತವ್ಯಲೋಪ, ದುರುಪಯೋಗ ಸೇರಿದಂತೆ ಮತ್ತಿತರೆ ಗಂಭೀರ ಆರೋಪಗಳಿಗೆ ಗುರಿಯಾಗುತ್ತಿರುವ ಅಧಿಕಾರಿಗಳ ಸಂಖ್ಯೆ ಮತ್ತು 6 ತಿಂಗಳಿಗೂ ಮೇಲ್ಪಟ್ಟ ಅಮಾನತು ಪ್ರಕರಣಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

 

ಇಲಾಖಾ ಪ್ರಕರಣಗಳು, ಇಲಾಖಾ ವಿಚಾರಣೆ, ಲೋಕಾಯುಕ್ತ ಪ್ರಕರಣಗಳ ಸಂಖ್ಯೆಯೂ ಏರುಗತಿಯಲ್ಲಿವೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ 2023ರ ಮಾರ್ಚ್‌ 21ರಂದು ನಡೆಯಲಿದ್ದ ಸಭೆಗೆ ಇಲಾಖಾ ಮುಖ್ಯಸ್ಥರು ಪ್ರಕರಣಗಳ ಕುರಿತು ಅಂಕಿ ಅಂಶಗಳನ್ನು ಮಂಡಿಸಿದ್ದಾರೆ. ಈ ಕುರಿತಾದ ಸಮಗ್ರ ವಿವರಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಇಲಾಖಾ ವಿಚಾರಣೆ ಮತ್ತು ಲೋಕಾಯುಕ್ತ ಪ್ರಕರಣಗಳ ಸಂಖ್ಯೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಪ್ತಿಯಲ್ಲಿರುವ  ನಗರಾಭಿವೃದ್ದಿ, ಆರ್‌ ಅಶೋಕ್‌ ಅವರು ಸಚಿವರಾಗಿದ್ದ  ಕಂದಾಯ ಇಲಾಖೆಯಲ್ಲಿಯೇ ಅತಿ ಹೆಚ್ಚಿವೆ.

 

ಸಚಿವಾಲಯದ ಇಲಾಖೆಗಳಲ್ಲಿ ಒಟ್ಟು 1,163 ಇಲಾಖಾ ಪ್ರಕರಣಗಳ ಪೈಕಿ ನಿಯಮ 11ರಡಿ 853 ಹಾಗೂ ನಿಯಮ 12ರ ಅಡಿ 96 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಜಾರಿ ಮಾಡಲಾಗಿದೆ. ದೋಷಾರೋಪಣೆ ಪಟ್ಟಿಗೆ ವಿವರಣೆ ಕೊಟ್ಟಿರುವ 706 ಪ್ರಕರಣಗಳಲ್ಲಿ 639 ಪ್ರಕರಣಗಳಿಗೆ ವಿಚಾರಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪೈಕಿ 325 ಪ್ರಕರಣಗಳಲ್ಲಿ ಮಾತ್ರ ವಿಚಾರಣಾಧಿಕಾರಿಗಳಿಂದ ವರದಿ ಬಂದಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ 12, ಆಹಾರ ನಾಗರಿಕ ಸರಬರಾಜು ಇಲಾಖೆಯಲ್ಲಿ 39, ಆರ್ಥಿಕ ಇಲಾಖೆಯಲ್ಲಿ 42, ಜಲಸಂಪನ್ಮೂಲ ಇಲಾಖೆಯಲ್ಲಿ 19, ತೋಟಗಾರಿಕೆ ಇಲಾಖೆಯಲ್ಲಿ 17, ಉನ್ನತ ಶಿಕ್ಷಣದಲ್ಲಿ 20, ಕಂದಾಯ ಇಲಾಖೆಯಲ್ಲಿ 336, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಲ್ಲಿ 30, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 15, ವಾಣಿಜ್ಯ ಕೈಗಾರಿಕೆ ಇಲಾಖೆಯಲ್ಲಿ 23, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯಲ್ಲಿ 149, ಸಹಕಾರ ಇಲಾಖೆಯಲ್ಲಿ 10, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ 80, ನಗರಾಭಿವೃದ್ಧಿ ಇಲಾಖೆಯಲ್ಲಿ 109, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 25, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯಲ್ಲಿ 22 ಪ್ರಕರಣಗಳು ನಿಯಮ 11ರಡಿ ದಾಖಲಾಗಿರುವುದು ಗೊತ್ತಾಗಿದೆ.

 

ನಿಯಮ 12 ರಡಿಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯಲ್ಲಿ 10, ಕಂದಾಯ ಇಲಾಖೆಯಲ್ಲಿ 10, ನಗರಾಭಿವೃದ್ಧಿ ಇಲಾಖೆಯಲ್ಲಿ 23 ಪ್ರಕರಣಗಳು ದಾಖಲಾಗಿವೆ. 2ನೇ ಕಾರಣ ಕೇಳುವ ನೋಟೀಸ್‌ಗೆ ಆರೋಪಿತ ಅಧಿಕಾರಿ, ನೌಕರರಿಂದ ವಿವರಣೆ ಪಡೆದ 161 ಪ್ರಕರಣಗಳಲ್ಲಿ 72 ಪ್ರಕರಣಗಳಿಗೆ ಮಾತ್ರ ಅಂತಿಮ ಆದೇಶ ಹೊರಡಿಸಲಾಗಿದೆ. ಡಿಸೆಂಬರ್‌ 2022ರಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,312, 2023 ಫೆಬ್ರುವರಿಯಲ್ಲಿ 1,163 ಪ್ರಕರಣಗಳಿವೆ.

 

6 ತಿಂಗಳಿಗೂ ಮೇಲ್ಪಟ್ಟ ಅಮಾನತು ಪ್ರಕರಣಗಳು 2023ರ ಫೆಬ್ರುವರಿ ಅಂತ್ಯದವರೆಗೆ ಒಟ್ಟು 84 ಪ್ರಕರಣಗಳಿವೆ. ಕಂದಾಯ ಇಲಾಖೆಯಲ್ಲಿಯೇ 66 , ಇಲಾಖಾ ಅಮಾನತು ಪ್ರಕರಣಗಳಲ್ಲಿ ಒಳಾಡಳಿತ ಇಲಾಖೆಯೊಂದರಲ್ಲೇ 65 ಅಮಾನತು ಪ್ರಕರಣಗಳು 6 ತಿಂಗಳಿಗೂ ಮೇಲ್ಪಟ್ಟಿವೆ.

 

ಒಳಾಡಳಿತ ಇಲಾಖೆಯ 60 ಪ್ರಕರಣಗಳಲ್ಲಿ ಅಧಿಕಾರಿಗಳನ್ನು 2020ರ ಮಾರ್ಚ್‌ 20ರಂದು ಅಮಾನತಿನಲ್ಲಿಟ್ಟು ಆದೇಶಿಸಲಾಗಿತ್ತು. ಇವರ ಅಮಾನತು ಆದೇಶವನ್ನು ಮುಂದಿನ 3 ತಿಂಗಳ ಅವಧಿಗೆ ಮುಂದುವರೆಸಿ 2023ರ ಫೆ.21ರಂದು ಆದೇಶ ಹೊರಡಿಸಲಾಗಿದೆ.

 

ಲೋಕಾಯುಕ್ತ ನಿಯಮ 12(1) ಅಡಿಯಲ್ಲಿ ಒಟ್ಟು 473 ಪ್ರಕರಣಗಳ ಪೈಕಿ 223 ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವಹಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 95, ಕಂದಾಯ ಇಲಾಖೆಯಲ್ಲಿ 87, ನಗರಾಭಿವೃದ್ದಿ ಇಲಾಖೆಯಲ್ಲಿ 123, ಪ್ರಕರಣಗಳಿವೆ.

 

ಸಚಿವಾಲಯದ ಇಲಾಖೆಗಳಿಗೆ ಲೋಕಾಯುಕ್ತದಿಂದ ಬಂದಿರುವ ಒಟ್ಟು 1,846 ಪ್ರಕರಣಗಳ ಪೈಕಿ ನಿಯಮ 14(ಎ) ಅಡಿಯಲ್ಲಿ 1,538 ಪ್ರಕರಣಗಳನ್ನು ವಹಿಸಲಾಗಿದೆ. ನಿಯಮ 14(ಎ) ಅಡಿಯಲ್ಲಿ ವರದಿ ಸ್ವೀಕೃತವಾದ ಪ್ರಕರಣಗಳ ಪೈಕಿ 368 ಮತ್ತು 34 ಪ್ರಕರಣಗಳಿಗೆ ಅಂತಿಮ ಆದೇಶ ಹೊರಡಿಸಲಾಗಿದೆ.

 

ಕೃಷಿ ಇಲಾಖೆಯಲ್ಲಿ 81, ಆರ್ಥಿಕ ಇಲಾಖೆಯಲ್ಲಿ 78, ಸಿಬ್ಬಂದಿ ಆಢಳಿತ ಸುದಾರಣೆ ಇಲಾಖೆಯಲ್ಲಿ 90, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಲ್ಲಿ 50, ಗ್ರಾಮIನಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯಲ್ಲಿ 20, ಅರಣ್ಯ ಪರಿಸರ ಜೀವಿಶಾಸ್ತ್ರ ಇಲಾಖೆಕಯಲ್ಲಿ 42, ಸಣ್ಣ ನೀರಾವರಿಯಲ್ಲಿ 25,ಕಂದಾಯ ಇಲಾಖೆಯಲ್ಲಿ 492, ಒಳಾಡಳಿತ ಇಲಾ/ಖೆಯಲ್ಲಿ 74,ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯಲ್ಲಿ 108, ಲೋಕೋಪಯೋಗಿ ಇಆಖೆಯಲ್ಲಿ 141, ನಗರಾಭಿವೃದ್ದಿ ಇಲಾಖೆಯಲ್ಲಿ 289, ವಾಣಿಜ್ಯ ಕೈಗಾರಿಕೆಯಲ್ಲಿ 49 ಪ್ರಕರಣಗಳಿರುವುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img