Monday | June 15, 2026 |

342 ಪಂಚಾಯ್ತಿಗಳಲ್ಲಿ ನಡೆಯದ ವಾರ್ಡ್‌, ಗ್ರಾಮ ಸಭೆ; ಸಾರ್ವಜನಿಕ ಸಹಭಾಗಿತ್ವದ ಕೊರತೆ ಬಹಿರಂಗ

Support THE-FILE

spot_img

ಬೆಂಗಳೂರು; ಕಾರ್ಯಕ್ಷಮತೆ ಲೆಕ್ಕಪರಿಶೋಧನೆಗೆ ಒಳಪಟ್ಟ ರಾಜ್ಯದ 559 ಗ್ರಾಮ ಪಂಚಾಯ್ತಿಗಳ ಪೈಕಿ 342 ಪಂಚಾಯ್ತಿಗಳಲ್ಲಿ ವಾರ್ಡ್ ಸಭೆ ಮತ್ತು ಗ್ರಾಮ ಸಭೆ, ಜಮಾಬಂದಿಗಳನ್ನೇ ನಡೆಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯ್ತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯ್ತಿಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬೆಂಗಳೂರು ವಿಭಾಗದ 171 ಪಂಚಾಯ್ತಿಗಳ ಪೈಕಿ 75 ಪಂಚಾಯ್ತಿಗಳಲ್ಲಿ ವಾರ್ಡ್‌ ಮತ್ತು ಗ್ರಾಮ ಸಭೆ ನಡೆದಿಲ್ಲ. ಬೆಳಗಾವಿ ವಿಭಾಗದಲ್ಲಿ 97, ಕಲ್ಬುರ್ಗಿ ವಿಭಾಗದಲ್ಲಿ 110, ಮೈಸೂರು ವಿಭಾಗದಲ್ಲಿ 60 ಪಂಚಾಯ್ತಿಗಳಲ್ಲಿ ವಾರ್ಡ್‌ ಮತ್ತು ಗ್ರಾಮ ಸಭೆಗಳನ್ನು ನಡೆಸಿಲ್ಲ ಎಂಬ ಅಂಕಿ ಅಂಶವು ವರದಿಯಿಂದ ತಿಳಿದು ಬಂದಿದೆ.

 

ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳ ಮೂಲಕ ಯೋಜನೆಗಳನ್ನು ಸಿದ್ಧಪಡಿಸುವುದು ಮತ್ತು ಅನುಷ್ಠಾನ ಹೇಗಾಗುತ್ತಿದೆ ಎಂಬುದರ ಮೇಲೆ ಹದ್ದಿನ ಕಣ್ಣಿಡಲು ಈ ಸಭೆಗಳು ನಡೆಯಬೇಕು. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ 1993ರ ಸೆಕ್ಷನ್‌ 3(ಸಿ) ಅನ್ವಯ ವಾರ್ಡ್ ಸಭೆ, ಸೆಕ್ಷನ್‌ 3(ಇ) ಅನ್ವಯ ಗ್ರಾಮ ಸಭೆಗಳನ್ನು 6 ತಿಂಗಳ ಅವಧಿಯನ್ನು ಮೀರದಂತೆ ಏರ್ಪಡಿಸಬೇಕು.

 

ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ಹಾಗೂ ರೂಪಿಸಿರುವ ಯೋಜನೆಗಳಲ್ಲಿ ಜನತೆಯ ಆಶೋತ್ತರಗಳಿಗೆ ಹೆಚ್ಚಿನ ಅವಕಾಶ ಲಭ್ಯವಾಗುವ ಉದ್ದೇಶದಿಂದಲೇ ವಾರ್ಡ್ ಮತ್ತು ಗ್ರಾಮ ಸಭೆಗಳನ್ನು ಆಯೋಜಿಸಬೇಕಿತ್ತು. ಅದರೆ 342 ಪಂಚಾಯ್ತಿಗಳಲ್ಲಿ ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳನ್ನೇ ನಡೆಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಈ ಸಭೆಗಳಲ್ಲಿ ಭಾಗವಹಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಭೆಗಳಲ್ಲಿ ತೆಗೆದುಕೊಳ್ಳಬೇಕಾದ ವಿಷಯಗಳು, ವಿಷಯಗಳನ್ನು ನಿರ್ಣಯಿಸುವ ವಿಧಾನ ಮತ್ತು ನಡವಳಿಗಳ ದಾಖಲೆ ಇತ್ಯಾದಿ ವಿಷಯಗಳ ಬಗ್ಗೆ ದಾಖಲೆಗಳನ್ನು ನಿರ್ವಹಿಸಿಲ್ಲ. ಮತ್ತು ಅವುಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ.

 

‘ಯೋಜನೆಗಳ ಫಲಾನುವಿಗಳ ಆಯ್ಕೆ ಪ್ರಕ್ರಿಯೆ ಮತ್ತು ಗ್ರಾಮ ಪಂಚಾಯ್ತಿಗಳ ಉತ್ತರದಾಯಿತ್ವದ ಪರಿಶೀಲನೆಯಲ್ಲಿ ಸಾರ್ವಜನಿಕ ಸಹಭಾಗಿತ್ವದ ಕೊರತೆ ಇದೆ,’ ಎಂದು ಲೆಕ್ಕಪರಿಶೋಧನೆ ವರದಿಯು ಗಮನಿಸಿರುವುದು ತಿಳಿದು ಬಂದಿದೆ.

 

ಗ್ರಾಮ ಪಂಚಾಯ್ತಿಯಲ್ಲಿ ಅನುಷ್ಠಾನಗೊಳ್ಳುವ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಎಲ್ಲಾ ಹಂತದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವಲ್ಲಿ ಗ್ರಾಮದ ಎಲ್ಲಾ ನಾಗರೀಕರು ನೇರವಾಗ ಭಾಗಿಯಾಗಬೇಕು. ಆದರೆ ಕಾರ್ಯಕ್ಷಮತೆ ಕೈಗೊಂಡ ಪಂಚಾಯ್ತಿಗಳ ಪೈಕಿ 119 ಪಂಚಾಯ್ತಿಗಳಲ್ಲಿ ಜಮಾಬಂದಿಯನ್ನೇ ನಡೆಸಿಲ್ಲ. ಹೀಗಾಗಿ ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸ್ಥಳೀಯ ನಾಗರೀಕರು ಭಾಗಿಯಾಗಿದ್ದಾರೆಯೇ ಎಂಬುದನ್ನು ನಿಶ್ಚಿತಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಲೆಕ್ಕ ಪರಿಶೋಧನೆ ವರದಿಯು ವಿವರಿಸಿದೆ.

 

‘ಗ್ರಾಮ ಮಟ್ಟದಲ್ಲಿ ಸ್ಥಳೀಯ ಸ್ವಯಂ ಆಡಳಿತದ ಮೂಲ ಘಟಕವಾಗುವ ಉದ್ದೇಶದಿಂದ ರೂಪಿಸಲಾಗಿರುವ ಈ ಸಭೆಗಳನ್ನು ನಿಯಮಿತವಾಗಿ ನಡೆಸದೇ ಇರುವುದರಿಂದ ಗ್ರಾಮ ಪಂಚಾಯ್ತಿಯ ಆಡಳಿತದಲ್ಲಿ ಸಾರ್ವಜನಿಕ ಸಹಭಾಗಿತ್ವ  ಪೂರ್ಣ ಪ್ರಮಾಣದಲ್ಲಿ ಅನುಷ್ಟಾನಗೊಂಡಿರುವುದಿಲ್ಲ,’ ಎಂದು ವರದಿಯು ಉಲ್ಲೇಖಿಸಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img