Friday | June 19, 2026 |

ಬಿಜೆಪಿ ಅಧಿಕಾರದಲ್ಲಿಲ್ಲದ ಅವಧಿಯಲ್ಲೇ ಹೆಚ್ಚು ಕೋಮು ಗಲಭೆ; ಶಾ,ನಡ್ಡಾ ಹೇಳಿಕೆ ಬೆನ್ನಲ್ಲೇ ಅಂಕಿಅಂಶ ಬಹಿರಂಗ

Support THE-FILE

spot_img

ಬೆಂಗಳೂರು;  ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಗಲಭೆ ನಡೆಯುತ್ತದೆ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಹೇಳಿಕೆ ನೀಡಿದ್ದರ ಬೆನ್ನಲ್ಲೇ  ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರದಲ್ಲಿ ಇಲ್ಲದೇ ಇದ್ದ ವರ್ಷಗಳಲ್ಲಿ ಅತಿ ಹೆಚ್ಚು ಕೋಮು ಗಲಭೆಗಳು ನಡೆದಿದೆ ಎಂಬುದನ್ನು ಸಾಬೀತುಪಡಿಸುವ ಅಂಕಿ ಅಂಶಗಳು ಇದೀಗ ಮುನ್ನೆಲೆಗೆ ಬಂದಿವೆ.

 

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದ್ದ ಬಿಜೆಪಿ ಪಕ್ಷದ ರ್ಯಾಲಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿದೆ ಎಂದು ನೀಡಿದ್ದ ಹೇಳಿಕೆಯು  ಆತಂಕ  ಸೃಷ್ಟಿಗೆ ಕಾರಣವಾಗಿತ್ತು.  ಹೊನ್ನಾಳಿ ಪಟ್ಟಣದಲ್ಲಿ ನೀಡಿದ್ದ ಹೇಳಿಕೆಯನ್ನು ಪುಷ್ಠೀಕರಿಸುವಂತಹ ಅಂಕಿ ಅಂಶಗಳನ್ನು  2022ರ ಸೆಪ್ಟಂಬರ್‌ನಲ್ಲಿ ನಡೆದಿದ್ದ ಅಧಿವೇಶನದಲ್ಲಿಯೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಡಿಸಿದ್ದರು.

 

ಬಿಜೆಪಿಯು ಅಧಿಕಾರದಲ್ಲಿ ಇಲ್ಲದ  ಅವಧಿ  ಅಂದರೆ ಕಾಂಗ್ರೆಸ್‌ ಅಧಿಕಾರದಲ್ಲಿದ್ದ 2013-2018ರ ಅವಧಿಯಲ್ಲಿ 697  ಕೋಮುಗಲಭೆ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯೇ ಸಿಂಹಪಾಲು ಪಡೆದಿದೆ.  ಇನ್ನುಳಿದಂತೆ ರಾಜ್ಯದಲ್ಲಿ ಕಳೆದ 15 ವರ್ಷಗಳಲ್ಲಿ 1,402 ಕೋಮು ಗಲಭೆ ಪ್ರಕರಣಗಳು ವರದಿಯಾಗಿವೆ. ಕಳೆದ 3 ವರ್ಷಗಳಲ್ಲಿ 163 ಪ್ರಕರಣಗಳು ವರದಿಯಾಗಿವೆ. 2015ರ ವರ್ಷವೊಂದರಲ್ಲೇ 336 ಪ್ರಕರಣಗಳು ವರದಿಯಾಗಿವೆ.

 

 

2010ರಲ್ಲಿ ಶಿವಮೊಗ್ಗದಲ್ಲಿ 180, 2015ರಲ್ಲಿ 80 ಪ್ರಕರಣಗಳು ವರದಿಯಾಗಿವೆ. 2016ರಿಂದ 2019ರವರೆಗೆ ಒಂದೇ ಒಂದು ಕೋಮುಗಲಭೆ ಪ್ರಕರಣ ವರದಿಯಾಗಿಲ್ಲ.  2020ರಲ್ಲಿ 15, 2022ರಲ್ಲಿ 42 ಪ್ರಕರಣಗಳು ವರದಿಯಾಗಿವೆ.

 

ದಕ್ಷಿಣ ಕನ್ನಡದಲ್ಲಿ 2012ರಲ್ಲಿ 24, 2015ರಲ್ಲಿ 66, 2017ರಲ್ಲಿ 36, 2020ರಲ್ಲಿ 3, 2022ರಲ್ಲಿ 7 ಪ್ರಕರಣಗಳು ವರದಿಯಾಗಿವೆ. ಕೊಡಗಿನಲ್ಲಿ 2015ರಲ್ಲಿ 45, 2021ಮತ್ತು 2022ರಲ್ಲಿ ತಲಾ 5 ಪ್ರಕರಣಗಳು ವರದಿಯಾಗಿವೆ.

 

2013ರಿಂದ 2018ರವರೆಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಒಟ್ಟಾರೆ 697 ಕೋಮುಗಲಭೆಗಳು ನಡೆದಿವೆ. 2007ರಲ್ಲಿ 80, 2008ರಲ್ಲಿ 29, 2009ರಲ್ಲಿ 75, 2010ರಲ್ಲಿ 279, 2011ರಲ್ಲಿ 24, 2012ರಲ್ಲಿ 54, 2013ರಲ್ಲಿ 52, 2014ರಲ್ಲಿ 94, 2015ರಲ್ಲಿ 336, 2016ರಲ್ಲಿ 46, 2017ರಲ್ಲಿ 138, 2018ರಲ್ಲಿ 32, 2019ರಲ್ಲಿ 16, 2020ರಲ್ಲಿ 19, 2021ರಲ್ಲಿ 32, 2022ರಲ್ಲಿ 96 ಪ್ರಕರಣಗಳು ವರದಿಯಾಗಿವೆ.

 

 

ಕರ್ನಾಟಕದಲ್ಲಿ ಮೂರು ವರ್ಷಗಳಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ 100 ಆರೋಪಪಟ್ಟಿಗಳ ಪೈಕಿ ಕೇವಲ ಐದು ಪ್ರಕರಣಗಳಲ್ಲಷ್ಟೇ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ (ಎನ್‌ಸಿಆರ್‌ಬಿ) ಅಂಕಿ ಅಂಶ ಬಿಡುಗಡೆ ಮಾಡಿತ್ತು.

 

ಲೋಕಸಭೆಯಲ್ಲಿ ಮಂಡನೆಯಾದ ಅಂಕಿ ಅಂಶಗಳ ಪ್ರಕಾರ 2018ರಲ್ಲಿ 29 ಪ್ರಕರಣಗಳು ದಾಖಲಾಗಿ 224 ಮಂದಿಯನ್ನು ಬಂಧಿಸಲಾಗಿತ್ತು.62 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಎರಡು ಪ್ರಕರಣಗಳಲ್ಲಿ 9 ಅಪರಾಧಿಗಳಿಗೆ ಶಿಕ್ಷೆ ಆಗಿದೆ. 2019ರಲ್ಲಿ 11 ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾಗಿ, 77 ಮಂದಿಯನ್ನು ಬಂಧಿಸಲಾಗಿತ್ತು. 22 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಒಂದು ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಶಿಕ್ಷೆ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಉತ್ತರ ಒದಗಿಸಿತ್ತು.

 

2020ರಲ್ಲಿ 10 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿ, 16 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 63 ಮಂದಿಯನ್ನು ಬಂಧಿಸಲಾಗಿದ್ದು, 151 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲಾಗಿತ್ತು. ಎರಡು ಪ್ರಕರಣಗಳಲ್ಲಿ 54 ಮಂದಿಗೆ ಶಿಕ್ಷೆ ಆಗಿದೆ ಎಂದು ವಿವರ ನೀಡಿತ್ತು.

 

ಅನ್ಯ ರಾಜ್ಯದ ವ್ಯಕ್ತಿಗಳು ಕರ್ನಾಟಕಕ್ಕೆ ಬಂದು ಇಲ್ಲಿನ ಜನರನ್ನು ಬರ್ಬರವಾಗಿ ಹತ್ಯೆ ಮಾಡುತ್ತಿರುವ ಬಗ್ಗೆ ಇತ್ತೀಚಿಗೆ ಯಾವುದೇ ಘಟನೆಗಳು ಕಂಡು ಬಂದಿಲ್ಲ. ಕೋಮುಗಲಭೆಗಳಿಗೆ ಕಾರಣರಾದ ವ್ಯಕ್ತಿಗಳು ಹೊಂದಿರುವ ಅನಧಿಕೃತ ಅಕ್ರಮ ಆಸ್ತಿಗಳನ್ನು ಸರ್ಕಾರ ವಶಪಡಿಸಿಕೊಳ್ಳಲು ಮತ್ತು ಅನಧಿಕೃತ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡುವ ಸಂಬಂಧ ಒಳಾಡಳಿತ ಇಲಾಖೆ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು 2022ರ ಸೆ.15ರಂದು ನಡೆದ ವಿಧಾನನಪರಿಷತ್‌ ಅಧಿವೇಶನದಲ್ಲಿ ಉತ್ತರ ಒದಗಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img