Friday | June 19, 2026 |

ಆರೋಗ್ಯಕವಚ ಟೆಂಡರ್‍‌ನಲ್ಲಿ ಭಾರೀ ಅಕ್ರಮ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಫೋಟೋ ಸಹಿತ ಲೋಕಾಯುಕ್ತಕ್ಕೆ ದೂರು

Support THE-FILE

spot_img

ಬೆಂಗಳೂರು; ಶೈಕ್ಷಣಿಕ ಸೇವೆಗಳನ್ನು ಒದಗಿಸುವ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದಕ್ಕೆ 1,260 ಕೋಟಿ ರು ಮೊತ್ತದ 108 ಆರೋಗ್ಯ ಕವಚ ಆಂಬ್ಯುಲೆನ್ಸ್‌ ಸೇವೆ ಪಡೆಯಲು ಟೆಂಡರ್‍‌ ನೀಡಲು ಸಿದ್ಧತೆ ನಡೆಸಿದೆ ಮತ್ತು ಸದಾಶಿವನಗರದಲ್ಲಿರುವ ಸಚಿವರೊಬ್ಬರ ನಿವಾಸದ ನೆಲಮಹಡಿಯ ಕೊಠಡಿಯಲ್ಲಿ ಲಂಚದ ಹಣವನ್ನು ಖಾಸಗಿ ಕಂಪನಿಯೊಂದರಿಂದ ಉಪ ನಿರ್ದೇಶಕರೊಬ್ಬರು ಸ್ವೀಕರಿಸಿದ್ದಾರೆ ಎಂಬ ಆರೋಪ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ವಕ್ತಾರ ಹಾಗೂ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ಬಾಬು ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

 

 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಶಾಖೆಯ ಉಪನಿರ್ದೇಶಕ ಡಾ. ಆರ್.ನಾರಾಯಣ್ ಎಂಬುವವರು ಈ ಹಗರಣದಲ್ಲಿ ಮಧ್ಯವರ್ತಿಗಳಾಗಿದ್ದಾರೆ. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿರುವುದಿಲ್ಲ. ಚುನಾವಣಾ ಸಮಯದಲ್ಲಿ ತರಾತುರಿಯಲ್ಲಿ ನಿಯಮಗಳ ಉಲ್ಲಂಘನೆ ಮಾಡಿ ಟೆಂಡರ್ ಹಂಚಿಕೆ ಮಾಡಿರುವ ಕ್ರಮದ ಹಿಂದೆ ಭ್ರಷ್ಟಾಚಾರದ ವಾಸನೆ ಬಡಿದಿದೆ ಎಂದು ರಮೇಶ್‌ ಬಾಬು ಅವರು ದೂರಿದ್ದಾರೆ.

 

 

ಡಾ ಆರ್‍‌ ನಾರಾಯಣ್‌ ಎಂಬುವರು ಮಧ್ಯವರ್ತಿಗಳಗಾಗಿ ಹಣ ಪಡೆದಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಈ ಸಂಬಂಧ ಡಾ ನಾರಾಯಣ್‌ ಅವರು ಹಣ ಪಡೆದಿದ್ದಾರೆ ಎಂಬುವುದಕ್ಕೆ ಸಾಕ್ಷ್ಯವಾಗಿ ಕೆಲ ಫೋಟೋಗಳನ್ನೂ ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರಿನೊಂದಿಗೇ ಸಲ್ಲಿಸಿದ್ದಾರೆ. ದೂರಿನ ಪ್ರತಿ ಮತ್ತು ಫೋಟೋಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಈ ದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್‍‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ ಕೆ ಅನಿಲ್‌ಕುಮಾರ್‍‌, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ ನವೀನ್‌ ಭಟ್‌, ಇಲಾಖೆಯ ಆಯುಕ್ತ ಡಿ ರಂದೀಪ್‌ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಪ ನಿರ್ದೇಶಕ (ಇಎಂಆರ್‍ಐ)ನ ಡಾ ನಾರಾಯಣ್‌ ಅವರನ್ನು ಪ್ರತಿವಾದಿಯನ್ನಾಗಿಸಿರುವುದು ದೂರಿನಿಂದ ಗೊತ್ತಾಗಿದೆ.

 

 

‘ಬಹಳ ಪ್ರಮುಖವಾಗಿ ಈ ಹಗರಣಕ್ಕೆ ಸಂಬಂಧಪಟ್ಟಂತೆ ಮಧ್ಯವರ್ತಿಯಾಗಿ ಸಚಿವರ ಪರವಾಗಿ ಅವರ ಮನೆಯಲ್ಲೇ ಹಣ ಪಡೆದಿರುವ ಅನುಮಾನಗಳಿರುತ್ತವೆ. ಕರ್ನಾಟಕ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ಬೆಂಗಳೂರಿನ ಕ್ರೈಂ ಬ್ರಾಂಚ್ ನವರಿಗೂ ಈ ಹಗರಣ ಸಂಬಂಧ ಮಾಹಿತಿ ಇರುವುದಾಗಿ ತಿಳಿದುಬಂದಿರುತ್ತದೆ. ಆದರೆ ಇಲ್ಲಿಯವರೆಗೆ ಪ್ರಕರಣದ ಆರೋಪಿತರ ಮೇಲೆ ಯಾವುದೇ ಕ್ರಮ ಜರುಗಿರುವುದಿಲ್ಲ,’ ಎಂದು ರಮೇಶ್‌ಬಾಬು ಅವರು ದೂರಿನಲ್ಲಿ ಆಪಾದಿಸಿದ್ದಾರೆ.

 

 

ಹಾಗೆಯೇ “ಈ ಟೆಂಡರ್ ಹಗರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಸಚಿವರು ಭಾಗಿಯಾಗಿರುವ ಆರೋಪದ ಸಂಬಂಧ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಮೀರಿ ಟೆಂಡರ್ ಹಂಚಿಕೆಯಾಗಿರುವ ಸಂಬಂಧ ಮಾನ್ಯ ಲೋಕಾಯುಕ್ತರು ಸಾರ್ವಜನಿಕ ಹಿತದೃಷ್ಟಿಯಿಂದ ತನಿಖೆಯನ್ನು ಮಾಡಬೇಕಾಗಿರುತ್ತದೆ,’ ಎಂದೂ ದೂರಿನಲ್ಲಿ ಒತ್ತಾಯಿಸಿದ್ದಾರೆ.

 

ಕರ್ನಾಟಕದಲ್ಲಿ 10 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಟೆಂಡರ್ ಅಂಗೀಕಾರ ಆಗಬೇಕಾದಲ್ಲಿ ಅದು ಸಂಪುಟ ಸಭೆಯ ಮೂಲಕ ಅನುಮೋದನೆ ಆಗಬೇಕು. ಇದರ ಜೊತೆಗೆ ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಬಿಡ್ ದಾರರ ಟೆಂಡರ್ ಗಳು ತಾಂತ್ರಿಕ ಮತ್ತು ಆರ್ಥಿಕ ಅನುಮೋದನೆಯನ್ನು ಪಡೆಯಬೇಕಾಗುತ್ತದೆ. ರಾಜ್ಯ ಸರ್ಕಾರದ ಹೊಸ ನೀತಿಗೆ ಅನುಗುಣವಾಗಿ ಟೆಂಡರ್ ಅನುಮೋದನೆ ಸಮಿತಿಯಿಂದಲೂ ಅನುಮೋದನೆ ಪಡೆಯಬೇಕಾಗುತ್ತದೆ.

 

ಆದರೆ ಈ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೋರಿ ಚುನಾವಣಾ ಪೂರ್ವದಲ್ಲಿ ಟೆಂಡರ್ ಅನುಮೋದನೆ ಮಾಡಿರುವುದು ಹಲವಾರು ಅನುಮಾನಗಳಿಗೆ ಅವಕಾಶ ನೀಡುತ್ತದೆ. ಸದರಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದ್ದು, ಮಾನ್ಯ ಮುಖ್ಯಮಂತ್ರಿಗಳು, ಆರೋಗ್ಯ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ಶಾಮೀಲಾಗಿರುವ ಸಾಧ್ಯತೆಗಳಿರುತ್ತವೆ ಎಂದು ವಿವರಿಸಿರುವುದು ದೂರಿನಿಂದ ಗೊತ್ತಾಗಿದೆ.

 

ಸಾರ್ವಜನಿಕ ಹಣದ ಸಂರಕ್ಷಣೆಯನ್ನು ರಾಜ್ಯ ಸರ್ಕಾರವೇ ಮಾಡಬೇಕಾಗಿದ್ದು, ಈ ಹಗರಣದಲ್ಲಿ ಆಡಳಿತ ಪಕ್ಷ ಅಕ್ರಮ ರೀತಿಯಲ್ಲಿ ಆತುರ ಆತುರವಾಗಿ ಟೆಂಡರ್ ಗೆ ಅನುಮೋದನೆ ನೀಡುವ ಮೂಲಕ ಭ್ರಷ್ಟಾಚಾರದ ಆರೋಪಗಳಿಗೆ ಅವಕಾಶವನ್ನು ನೀಡಿದಂತಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

 

ರಾಜ್ಯದ ಹಿತದೃಷ್ಟಿಯಿಂದ ಮತ್ತು ಅಗತ್ಯ ಸೇವೆಯಾದ ಆರೋಗ್ಯ ಇಲಾಖೆಯ ಆಂಬುಲೆನ್ಸ್ ಸೇವೆಯನ್ನು ಯಾವುದೇ ಹಗರಣಗಳಿಗೆ ಆಸ್ಪದ ನೀಡದಂತೆ ಜನರಿಗೆ ನೀಡುವ ಕಾರಣಕ್ಕಾಗಿ ಮಾನ್ಯ ಲೋಕಾಯುಕ್ತರು ಪಾರದರ್ಶಕ ತನಿಖೆ ನಡೆಸಿ ಈ ಹಗರಣದಲ್ಲಿ ನಡೆದಿರುವ ಅಕ್ರಮಗಳನ್ನು ಬಯಲಿಗೆಳೆಯಬೇಕು ಎಂದು ದೂರಿನಲ್ಲಿ ರಮೇಶ್‌ ಬಾಬು ಅವರು ಒತ್ತಾಯಿಸಿದ್ದಾರೆ.

 

ಕರ್ನಾಟಕ ವಿಧಾನಸಭೆಗೆ ಮತದಾನಕ್ಕೆ ಇನ್ನು ಐದೇ ಐದು ದಿನಗಳು ಬಾಕಿ ಇರುವಾಗಲೇ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದರಿಂದ ದೊಡ್ಡಮಟ್ಟದ ಲಂಚದ ವ್ಯವಹಾರ ನಡೆದಿದೆ ಎಂಬ ಆಪಾದನೆಗೂ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಪ್ರಭಾವಿ ಸಚಿವರೊಬ್ಬರು ಗುರಿಯಾಗಿದ್ದಾರೆ. ಈ ಸಂಬಂಧ ಖಾಸಗಿ ಸಂಸ್ಥೆಯೊಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿತ್ತು ಎಂದು ಗೊತ್ತಾಗಿದೆ. ಈ ಕುರಿತು ‘ದಿ ಫೈಲ್‌’ 2023ರ ಮೇ 6ರಂದೇ ವರದಿ ಪ್ರಕಟಿಸಿತ್ತು.

 

ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ

 

ಅಲ್ಲದೇ ಸಚಿವರೊಬ್ಬರಿಗೆ 100 ಕೋಟಿ ರು., ಇಲಾಖೆಯ ಉನ್ನತ ಅಧಿಕಾರಿಗಳಿಗೆ 10 ಕೋಟಿ, ಉಪ ನಿರ್ದೇಶಕರೊಬ್ಬರಿಗೆ 10 ಕೋಟಿ ಮತ್ತು ಸಮಿತಿಯ ಸದಸ್ಯರುಗಳಿಗೂ 1 ಕೋಟಿ ಲಂಚ ನೀಡಲಾಗಿದೆ. ಲಂಚದ ಹಣವನ್ನು ಪಡೆಯುವಾಗ ಉಪ ನಿರ್ದೇಶಕರೊಬ್ಬರು ಸಿಕ್ಕಿಬಿದ್ದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆಯಲ್ಲದೆ ಹಣವನ್ನು ಪಡೆದು ಬ್ಯಾಗ್‌ನಲ್ಲಿ ಇರಿಸುತ್ತಿರುವ ಫೋಟೋಗಳನ್ನೂ ಲಗತ್ತಿಸಲಾಗಿತ್ತು ಎಂದು ವರದಿಯಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img